ಬೆಂಗಳೂರು:ಬೆಂಗಳೂರು ನಗರದಲ್ಲಿ ಪೇಯಿಂಗ್ ಗೆಸ್ಟ್ (ಪಿಜಿ) ಮಾಲಿಕ ಎಸಗಿರುವ ಮೃಗಿಯ ಕೃತ್ಯ ಬೆಳಕಿಗೆ ಬಂದಿದೆ. ಸೋಲದೇವನಹಳ್ಳಿಯ ಖಾಸಗಿ ಕಾಲೇಜಿನ ಕೇರಳದ ಯುವತಿ 10 ದಿನಗಳ ಹಿಂದೆಯಷ್ಟೇ ಆರೋಪಿ ಅಶ್ರಫ್ ಒಡೆತನದ ಪಿ.ಜಿಗೆ ದಾಖಲಾಗಿದ್ದಳು.ಪಿಜಿ ಮಾಲಿಕ ಅಶ್ರಫ್ ಶುಕ್ರವಾರ ರಾತ್ರಿ ನನ್ನನ್ನು ಕಾರಿನಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯಿದು ದೌರ್ಜನ್ಯವೆಸಗಿದ್ದ. ನಂತರ ನನ್ನನ್ನು ಪೇಯಿಂಗ್ ಗೆಸ್ಟ್ಗೆ ವಾಪಸ್ ಕರೆತಂದು ಬಿಟ್ಟಿದ್ದ ಎಂದು ಸಂತ್ರಸ್ತೆ ಪೋಲಿಸರಿಗೆ ನೀಡಿರುವ ದೂರಿನಲ್ಲಿ ಆರೋಪಿಸಿದ್ದಾಳೆ.
ಕೃತ್ಯಕ್ಕೂ ಮೊದಲು ಹಲ್ಲೆ ಮಾಡಿದ್ದ ಅತ್ಯಾಚಾರ ಎಸಗಲು ಪ್ರಯತ್ನಿಸಿದಾಗ, ವಿರೋಧಿಸಿದ್ದಕ್ಕೆ ಮತ್ತೆ ನನ್ನ ಮೇಲೆ ಹಲ್ಲೆ ಮಾಡಿದ್ದಾನೆ ಎಂದು ಯುವತಿ ದೂರಿದ್ದಾಳೆ.
ಯುವತಿ ನೀಡಿರುವ ದೂರಿನ ಪ್ರಕಾರ, ಪ್ರಕರಣ ದಾಖಲಿಸಿಕೊಂಡ ಸೋಲದೇವನಹಳ್ಳಿ ಪೊಲೀಸರು ಆರೋಪಿ, ಪಿಜಿ ಮಾಲೀಕ ಅಶ್ರಫ್ ನನ್ನು ಇಂದು (ಭಾನುವಾರ) ಬಂಧಿಸಿದ್ದಾರೆ. ಪ್ರಕರಣದ ಕುರಿತು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯಿಂದ ಆಘಾತಕ್ಕೊಳಗಾಗಿದ್ದ ಸಂತ್ರಸ್ತೆ ಸ್ನೇಹಿತರ ಸಹಾಯದಿಂದ ಸೋಲದೇವನಹಳ್ಳಿ ಠಾಣೆಗೆ ದೂರು ನೀಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Sunday, June 7



