ನ್ಯೂಜ್ ಡೆಸ್ಕ್:ಕೆ ಸಿ ವ್ಯಾಲಿ ನೀರಿನ 3ನೇ ಹಂತದ ಶುದ್ದಿಕರಣ ಮಾಡಿ ನೀರು ಹರಸಬೇಕೆಂದು ಒತ್ತಾಯಿಸಿ ಶಾಸಕ ವೆಂಕಟಶಿವಾರೆಡ್ದಿ ವಿಧಾನಸಭೆಯಲ್ಲಿ ಸರ್ಕಾರದ ಗಮನಸೆಳೆದಿದ್ದಾರೆ.ಅವರು ಸೋಮವಾರ ವಿಧಾನಸೌಧದಲ್ಲಿ ಪ್ರಶ್ನೋತ್ತರ ವೆಳೆ ಮಾತನಾಡಿ ಸಾರ್ವಜನಿಕ ಆರೋಗ್ಯ ಸುರಕ್ಷತೆ ದೃಷ್ಟಿಯಿಂದ ಕೆ.ಸಿ ವ್ಯಾಲಿ ಮೂರನೇ ಹಂತದ ಶುದ್ಧೀಕರಣ ಮಾಡಬೇಕು ಕೇವಲ ಎರಡು ಹಂತದ ಶುದ್ಧೀಕರಣ ಮಾಡಿದರೆ ಜನತೆ ಅರೋಗ್ಯ ಸಮಸ್ಯೆ ಅನುಭವಿಸುತ್ತಾರೆ ಎಂದರು.
ಕೆ.ಸಿ.ವ್ಯಾಲಿ ಯೋಜನೆ ಉತ್ತಮವಾಗಿದೆ ಇದನ್ನು ನಾನು ಸ್ವಾಗತಿಸುತ್ತೇನೆ ಆದರೆ ಕೇವಲ ಎರಡು ಹಂತದ ಶುದ್ಧೀಕರಣ ಮಾಡಲಾಗುತ್ತಿದೆ ಅದು ಸಹ ಸಮರ್ಪಕವಾಗಿ ಆಗುತ್ತಿಲ್ಲ ಇದು ಒಳ್ಳೆಯದಲ್ಲ ಕೆ.ಸಿ.ವ್ಯಾಲಿ ಮೂರನೇ ಹಂತದಲ್ಲಿ ಸಂಸ್ಕರಣೆ ಮಾಡದಿದ್ದರೆ ನೀರು ನಮ್ಮ ತಾಲೂಕಿಗೆ ಹರಿಸಬೇಡಿ ಅಂತಹ ನೀರು ನಮಗೆ ಬೇಡವೇ ಬೇಡ ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಪ್ರತಿಪಾದಿಸಿದ್ದಾರೆ.
ಪೈಪುಗಳ ಅಳವಡಿಕೆಯಲ್ಲಿ ಅವ್ಯವಹಾರ
ಕೆ.ಸಿ.ವ್ಯಾಲಿ ಯೋಜನೆಯಲ್ಲಿ ತಾಲೂಕಿನ ಉದ್ದಗಲಕ್ಕೂ ಸಾವಿರಾರು ಕೋಟಿ ವ್ಯಯಿಸಿ ಪೈಪ್ ಲೈನ್ ಅಳವಡಿಸಿಕೊಂಡು ಹೋಗಿದ್ದಾರೆ ಇದುವರಿಗೂ ಎಲ್ಲೂ ನೀರು ಹರಿಸಿಲ್ಲ ಪೈಪುಗಳನ್ನು ಅಳವಡಿಸಿರುವ ವ್ಯವಹಾರದಲ್ಲೂ ಕೊಟ್ಯಾಂತರ ರೂಪಾಯಿ ಅವ್ಯವಹಾರ ಆಗಿದೆ ಈ ಬಗ್ಗೆ ಸರ್ಕಾರ ಗಮನ ಹರಿಸುವಂತೆ ಒತ್ತಾಯಿಸಿದ್ದಾರೆ.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



