ನ್ಯೂಜ್ ಡೆಸ್ಕ್:ಕೆ ಸಿ ವ್ಯಾಲಿ ನೀರಿನ 3ನೇ ಹಂತದ ಶುದ್ದಿಕರಣ ಮಾಡಿ ನೀರು ಹರಸಬೇಕೆಂದು ಒತ್ತಾಯಿಸಿ ಶಾಸಕ ವೆಂಕಟಶಿವಾರೆಡ್ದಿ ವಿಧಾನಸಭೆಯಲ್ಲಿ ಸರ್ಕಾರದ ಗಮನಸೆಳೆದಿದ್ದಾರೆ.ಅವರು ಸೋಮವಾರ ವಿಧಾನಸೌಧದಲ್ಲಿ ಪ್ರಶ್ನೋತ್ತರ ವೆಳೆ ಮಾತನಾಡಿ ಸಾರ್ವಜನಿಕ ಆರೋಗ್ಯ ಸುರಕ್ಷತೆ ದೃಷ್ಟಿಯಿಂದ ಕೆ.ಸಿ ವ್ಯಾಲಿ ಮೂರನೇ ಹಂತದ ಶುದ್ಧೀಕರಣ ಮಾಡಬೇಕು ಕೇವಲ ಎರಡು ಹಂತದ ಶುದ್ಧೀಕರಣ ಮಾಡಿದರೆ ಜನತೆ ಅರೋಗ್ಯ ಸಮಸ್ಯೆ ಅನುಭವಿಸುತ್ತಾರೆ ಎಂದರು.
ಕೆ.ಸಿ.ವ್ಯಾಲಿ ಯೋಜನೆ ಉತ್ತಮವಾಗಿದೆ ಇದನ್ನು ನಾನು ಸ್ವಾಗತಿಸುತ್ತೇನೆ ಆದರೆ ಕೇವಲ ಎರಡು ಹಂತದ ಶುದ್ಧೀಕರಣ ಮಾಡಲಾಗುತ್ತಿದೆ ಅದು ಸಹ ಸಮರ್ಪಕವಾಗಿ ಆಗುತ್ತಿಲ್ಲ ಇದು ಒಳ್ಳೆಯದಲ್ಲ ಕೆ.ಸಿ.ವ್ಯಾಲಿ ಮೂರನೇ ಹಂತದಲ್ಲಿ ಸಂಸ್ಕರಣೆ ಮಾಡದಿದ್ದರೆ ನೀರು ನಮ್ಮ ತಾಲೂಕಿಗೆ ಹರಿಸಬೇಡಿ ಅಂತಹ ನೀರು ನಮಗೆ ಬೇಡವೇ ಬೇಡ ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಪ್ರತಿಪಾದಿಸಿದ್ದಾರೆ.
ಪೈಪುಗಳ ಅಳವಡಿಕೆಯಲ್ಲಿ ಅವ್ಯವಹಾರ
ಕೆ.ಸಿ.ವ್ಯಾಲಿ ಯೋಜನೆಯಲ್ಲಿ ತಾಲೂಕಿನ ಉದ್ದಗಲಕ್ಕೂ ಸಾವಿರಾರು ಕೋಟಿ ವ್ಯಯಿಸಿ ಪೈಪ್ ಲೈನ್ ಅಳವಡಿಸಿಕೊಂಡು ಹೋಗಿದ್ದಾರೆ ಇದುವರಿಗೂ ಎಲ್ಲೂ ನೀರು ಹರಿಸಿಲ್ಲ ಪೈಪುಗಳನ್ನು ಅಳವಡಿಸಿರುವ ವ್ಯವಹಾರದಲ್ಲೂ ಕೊಟ್ಯಾಂತರ ರೂಪಾಯಿ ಅವ್ಯವಹಾರ ಆಗಿದೆ ಈ ಬಗ್ಗೆ ಸರ್ಕಾರ ಗಮನ ಹರಿಸುವಂತೆ ಒತ್ತಾಯಿಸಿದ್ದಾರೆ.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



