ಶ್ರೀನಿವಾಸಪುರ:ತಾಲೂಕಿನ ಅರಕೇರಿಯ ಶ್ರೀ ಕೋದಂಡರಾಮ ದೇವಾಲಯದಲ್ಲಿ ಕೃಷ್ಣಾಷ್ಟಮಿ ಸಂಭ್ರಮ ಮನೆಮಾಡಿತ್ತು. ಪ್ರತಿ ವರ್ಷ ಶ್ರಾವಣ ಮಾಸದಲ್ಲಿ ಬರುವ ಕೃಷ್ಣ ಪಕ್ಷದಂದು ಗೋಕುಲಾಷ್ಟಮಿ ಆಚರಿಸುವುದು ಸಂಪ್ರದಾಯ ಅದರಂತೆ ಇಂದು ಶ್ರಾವಣದ ಶನಿವಾರದ ಹಿನ್ನೆಲೆಯಲ್ಲಿ ಮೂಲ ವಿಗ್ರಹ ಶ್ರೀ ಕೋದಂಡರಾಮ ಮೂರ್ತಿಗೆ ಅಲಂಕಾರಪ್ರಿಯ ನಿಲಮೇಘ ಶ್ಯಾಮ (ನಿಲಿಬಣ್ಣದ) ಕೃಷ್ಣಾವತಾರದ ಅಲಂಕಾರ ಮಾಡಲಾಗಿದ್ದು ಕೋದಂಡರಾಮನ ಕೊಳಲು ಇಟ್ಟು ದಾಳಿಂಬೆ ಅಲಂಕಾರ ಮಾಡಲಾಗಿ ಆಭರಣಗಳನ್ನ ತೊಡಿಸಲಾಗಿತ್ತು.
ಕೋದಂಡರಾಮ ಕೃಷ್ಣಾತಾರದಲ್ಲಿ ದರ್ಶನ ನೀಡಿದ.
ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದ ಭಕ್ತರು ರಾಮನ ವಿಗ್ರಹದಲ್ಲಿ ಕೃಷ್ಣನನ್ನು ಕಂಡು ಪುಳಕಿತರಾದರು. ಈ ಸಂದರ್ಭದಲ್ಲಿ ಶ್ರೀಕೋದಂಡರಾಮ ದೇವಾಲಯದ ಅಧ್ಯಕ್ಷ ಇಂದಿರಾಭವನ್ ರಾಜಣ್ಣ ಮಾತನಾಡಿ ಶ್ರಾವಣ ಮಾಸದ ಕೃಷ್ಣ ಪಕ್ಷದ ಅಷ್ಟಮಿಯಂದು ಕೃಷ್ಣನು ಹುಟ್ಟಿದ ದಿನ ಇಡೀ ದಿನ ಇರುವ ಸರ್ವಾರ್ಥ ಸಿದ್ಧಿ ಯೋಗವು ಭಕ್ತರ ಎಲ್ಲಾ ಆಸೆಗಳನ್ನು ಪೂರೈಸುವ ಶುಭ ದಿನವಾಗಿದೆ. ಎಲ್ಲೆಡೆ ಕೃಷ್ಣನನ್ನು ಆರಾಧನೆಯನ್ನು ಮಾಡಲಾಗುತ್ತದೆ.ಜನರನ್ನು ಕಷ್ಟ ಕಾರ್ಪಣ್ಯದಿಂದ ಕಾಪಾಡಿ ಸಂತಸ ನೀಡಲಿ ಎಂದು ಭಕ್ತರು ಕೃಷ್ಣನನ್ನು ಪೂಜಿಸಿ ಅರಾಧಿಸುತ್ತಾರೆ,ಈ ಹಿನ್ನಲೆ ಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ಶ್ರೀ ಕೋದಂಡರಾಮ ಸ್ವಾಮಿಗೆ ನೀಲ ಮೇಘಶಾಮ ಕೃಷ್ಣನ ಅಲಂಕಾರ ಮಾಡಿ ವಿಶೇಷ ಪೂಜೆ ಅಭಿಷೇಕ, ಪೂಜಾ ಕೈಂಕರ್ಯಗಳನ್ನು ನಡೆಸಲಾಯಿತು ಎಂದರು.ಪೂಜಾ ಕೈಂಕರ್ಯ ಗಳನ್ನು ದೇವಾಲಯದ ಪ್ರಧಾನ ಅರ್ಚಕ ರಾಜಗೋಪಾಲಾಚಾರ್ಯ ನಡೆಸಿಕೊಟ್ಟರು.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



