ನ್ಯೂಜ್ ಡೆಸ್ಕ್:ಅಮೆರಿಕದಲ್ಲಿ ಉದ್ಯೋಗದಲ್ಲಿರುವ ಭಾರತದ ಒರ್ವ ಟೆಕ್ಕಿ ಮಹಿಳೆ ತಮ್ಮ ಭಾರತದ ಮನೆಯಲ್ಲಿ ನಡೆಯುತ್ತಿದ್ದ ಕಳ್ಳತನ ತಡೆದಿದ್ದಾರೆ.
ಇದು ನಡೆದಿರುವುದು ಕರ್ನಾಟಕದ ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದ ಸಿದ್ರಾಮೇಶ್ವರ ಕಾಲೋನಿಯಲ್ಲಿರುವ ನಿವೃತ್ತ ಎಂಜಿನಿಯರ್ ಹನಮಂತಗೌಡ ಅವರ ಮನೆಯಲ್ಲಿ ಅಮೇರಿಕಾದಲ್ಲಿರುವ ಅವರ ಪುತ್ರಿ ಶೃತಿ ವಿದೇಶದಲ್ಲಿದ್ದರೂ ಸಮಯಪ್ರಜ್ಞೆ ಮೆರೆಯುವ ಮೂಲಕ ಮನೆಗೆ ನುಗ್ಗಿದ್ದ ಕಳ್ಳರನ್ನು ಓಡಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕೆಲ ವರ್ಷಗಳ ಹಿಂದೆ ಸ್ವದೇಶಕ್ಕೆ ಆಗಮಿಸಿದ್ದ ಶೃತಿ ತಂದೆ ಮನೆಗೆ ಸಿಸಿ ಕ್ಯಾಮೆರಾ ಅಳವಡಿಸಿದ್ದರು. ಅದನ್ನು ನೋಡಲು ತಮ್ಮ ಮೊಬೈಲಿಗೆ ಬರುವಂತೆ ಸಿಂಕ್ ಮಾಡಿಸಿದ್ದರು,ಮಂಗಳವಾರ ತಡರಾತ್ರಿ 1 ರಿಂದ 2 ಗಂಟೆಯ ಮಧ್ಯೆ ಚಡ್ಡಿ ಗ್ಯಾಂಗ್ ಇಬ್ಬರು ಹನಮಂತಗೌಡ ಸಂಕಪ್ಪನವರ್ ಮನೆಗೆ ನುಗ್ಗಿದ್ದಾರೆ.ಇದೆ ಸಮಯದಲ್ಲಿ ಅಮೇರಿಕಾದಲ್ಲಿದ್ದ ಶ್ರುತಿ ಅಲ್ಲಿಂದಲೇ ಮನೆಯಲ್ಲಿನ ವಿದ್ಯಮಾನ್ಯಗಳನ್ನು ಗಮನಿಸಿದ್ದಾರೆ ಭಾರತದಲ್ಲಿ ಮಧ್ಯರಾತ್ರಿ ಆಗಿದ್ದರೆ ಅಮೆರಿಕದಲ್ಲಿ ಮಧಾಹ್ನದ 3:30ರ ಸಮಯವದು. ಹೀಗೆ ಮೊಬೈಲ್ ನೋಡುತ್ತಿದ್ದಾಗ ಮನೆಗೆ ಕಳ್ಳರು ನುಗ್ಗಿದ ದೃಶ್ಯವನ್ನು ನೋಡಿ ಕೂಡಲೇ ಶೃತಿ ಪೋಷಕರಿಗೆ ಕರೆ ಮಾಡಿದ್ದಾರೆ.
ತಕ್ಷಣ ಎಚ್ಚೆತ್ತ ಶೃತಿ ಪೋಷಕರು ಬಾಗಿಲು ತೆರೆಯದೇ ಮನೆಯ ಎಲ್ಲಾ ದೀಪ ಆನ್ ಮಾಡಿ ಕೂಗಾಡಿದ್ದಾರೆ. ದಿಢೀರ್ ಮನೆಯ ಲೈಟ್ ಆನ್ ಆಗಿದ್ದನ್ನು ಕಂಡು ಕಳ್ಳರು ಶಾಕ್ಗೆ ಒಳಗಾಗಿ ಸ್ಥಳದಿಂದ ಪರಾರಿಯಾಗಿದ್ದಾರೆ. ಎಚ್ಚೆತ್ತ ಹನುಮಂತಗೌಡ, ಮನೆ ಬಾಗಿಲು ತೆರೆದಾಗ ಚಡ್ಡಿ ಗ್ಯಾಂಗ್ ಅಲ್ಲಿಂದ ಕಾಲ್ಕಿತ್ತಿದ್ದಾರೆ.
ಒಬ್ಬನ ಮುಖಕ್ಕೆ ಮಂಕಿ ಕ್ಯಾಪ್, ಮತ್ತೊಬ್ಬನ ಮುಖದಲ್ಲಿ ಮಾಸ್ಕ್, ಮೈಮೇಲೆ ಶರ್ಟ್ ಇದೆ ಆದರೆ ಪ್ಯಾಂಟೇ ಇಲ್ಲ. ಇರೋದು ಬರೀ ಚಡ್ಡಿ ಧರಿಸಿದ್ದರು. ಸದ್ಯ, ಅಮೆರಿಕದಲ್ಲಿ ನೆಲೆಸಿದ್ದ ಸಾಫ್ಟ್ವೇರ್ ಎಂಜಿನಿಯರ್ ಶ್ರುತಿ ಸಮಯಪ್ರಜ್ಞೆಯಿಂದ ಮನೆ ಕಳ್ಳತನ ತಪ್ಪಿದೆ.ಈ ಬಗ್ಗೆ ಕೇಸ್ ದಾಖಲಿಸಿಕೊಂಡಿರುವ ಮುಧೋಳ ಪೊಲೀಸರು, ತನಿಖೆ ಆರಂಭಿಸಿದ್ದಾರೆ.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



