ನ್ಯೂಜ್ ಡೆಸ್ಕ್:ಮಹಿಳೆ ಕೂದಲು ಹಿಡಿದು ಎಳೆದಾಡಿ ಕಾಲಿನಿಂದ ಒದ್ದು ಭೀಕರವಾಗಿ ಹಲ್ಲೆ ಮಾಡಿರುವ ದಾರುಣ ಘಟನೆ ಬೆಂಗಳೂರು ಬಳಿಅಯ ಆನೇಕಲ್ ಪಟ್ಟಣದಲ್ಲಿ ನಡೆದಿದೆ.ಮಹಿಳೆಯ ಗಂಡನ ಮನೆಯವರು ಮನೆ ಸೊಸೆ ಮೇಲೆ ಮೃಗೀಯವಾಗಿ ವರ್ತಿಸಿದ್ದಾರೆ.
ಬೆಂಗಳೂರಿನ ಆನೇಕಲ್ ಪಟ್ಟಣದ ನಾರಾಯಣಪುರದ ಅರುಣ್ 5 ವರ್ಷಗಳ ಹಿಂದೆ ಕುಟುಂಬದವರೆ ನೋಡಿದ ಹೆಣ್ಣು ಶ್ರೀಲಜಾ ಎಂಬಾಕೆಯನ್ನು ಮದುವೆಯಾಗಿದ್ದರು. ಈ ದಂಪತಿಗಳಿಗೆ ನಾಲ್ಕು ವರ್ಷದ ಹೆಣ್ಣು ಮಗು ಕೂಡ ಇದೆ.ಅದರೆ ಇತ್ತಿಚಿಗೆ ಗಂಡ ಅರುಣ್ ಅತ್ತೆ ಪ್ರಭಾವತಿ, ಮಾವ ಚೌಡಪ್ಪ ಮೂವರು ಸೇರಿಕೊಂಡು ಮಹಿಳೆಯ ಮೇಲೆ ಹಲ್ಲೆ ಮಾಡಿದ್ದು,ಗಜೇಂದ್ರ, ನರಸಿಂಹಮೂರ್ತಿ, ಲಕ್ಷ್ಮಿ, ಚೌಡಪ್ಪ ಎನ್ನುವರೂ ಸಹ ಸಹಕಾರ ನೀಡಿದಲ್ಲದೆ ಕಾಲಿನಿಂದ ಒದ್ದು ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ.
ಶ್ರೀಲಜಾ ಮೇಲೆ ಅನುಮಾನ ವ್ಯಕ್ತಪಡಿಸುತ್ತ, ವರದಕ್ಷಿಣೆ ತರುವಂತೆ ಕಿರುಕುಳ ನೀಡುತ್ತಿದ್ದು ಇದಕ್ಕಾಗಿ ಆಗಾಗ ಜಗಳ ನಡೆಯುತ್ತಿದ್ದು ಇದಕ್ಕಾಗಿ ಹಿರಿಯರ ಸಮ್ಮುಖದಲ್ಲಿ ರಾಜಿ ಪಂಚಾಯತಿ ಕೂಡ ನಡೆದಿತ್ತು. ಕಳೆದ ಒಂದು ವಾರದ ಹಿಂದೆ ಶ್ರೀಲಜಾ ತವರು ಮನೆಗೆ ತೆರಳಿದ್ದು ಇದೀಗ ಅತ್ತೆ ಮನೆಗೆ ವಾಪಸ್ಸು ಬಂದ ವೇಳೆ ಸೊಸೆಯನ್ನು ಮನೆಗೆ ಸೇರಿಸಿದೆ ರಸ್ತೆಯಲ್ಲೆ ಆಕೆಯ ಕೂದಲು ಎಳೆದಾಡಿ, ಕಾಲಿನಿಂದ ಒದ್ದು ಭೀಕರವಾಗಿ ಹಲ್ಲೆ ಮಾಡಿದ್ದಾರೆ. ಈ ಕುರಿತು ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



