ನ್ಯೂಜ್ ಡೆಸ್ಕ್:ದಾರಿ ತಪ್ಪಿದ ಒಂಟಿ ಆನೆಯೊಂದು ಜನ ವಸತಿ ಪ್ರದೇಶಕ್ಕೆ ಬಂದು ಮತ್ತೆ ಕಾಡಿಗೆ ಹೋಗಲು ದಾರಿಕಾಣದೆ ಜನರನ್ನು ನೋಡಿ ಗಾಭರಿಯಿಂದ ರಾದಾಂತ ಸೃಷ್ಟಿಸಿದ ಘಟನೆ ಆಂಧ್ರದ ಚಿತ್ತೂರು ಜಿಲ್ಲೆ ಪಲಮನೇರು ನಗರದ ಹೊರಭಾಗದ ಪ್ರಶಾಂತ ನಗರದಲ್ಲಿ ನಡೆದಿದ್ದು ಅನೆ ದಾಳಿಯಲ್ಲಿ ಅರಣ್ಯಾಧಿಕಾರಿಯೊಬ್ಬರು ಗಾಯಗೊಂಡಿದ್ದಾರಲ್ಲದೆ ಹಸುವಿನ ಕರುವು ಮೇಲು ಆನೆ ದಾಳಿ ಮಾಡಿದ ಹಿನ್ನಲೆಯಲ್ಲಿ ಕರು ಸ್ಥಳದಲ್ಲೆ ಸಾವನಪ್ಪಿದೆ.
ಬೆಳಿಗ್ಗೆ 6 ಗಂಟೆಗೆ ಸಮಯದಲ್ಲಿ ನಗರದ ಹೋರವಲಯದ ಹೆದ್ದಾರಿ ಬಳಿ ಮಲವಿಸರ್ಜನೆ ಮಾಡುತ್ತಿದ್ದ ಒಂಟಿ ಆನೆಯನ್ನು ನೋಡಿದ ಕೆಲವರು ಮೊಬೈಲ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ ಇದರಿಂದ ಗುಂಪು ಗುಂಪಾಗಿ ಜನರು ಹೆಚ್ಚಾಗಿ ಬಂದ ಹಿನ್ನಲೆಯಲ್ಲಿ ಗಾಭಾರಿಯಾದ ಆನೆ ಸುಮಾರು 5 ಗಂಟೆಗಳ ಕಾಲ ದಿಕ್ಕೆಟ್ಟು ಎಲ್ಲೆಂದರಲ್ಲಿ ಒಡಾಡುತ್ತ ಅರಣ್ಯ ಅಧಿಕಾರಿಗಳನ್ನು ಕಾಡಿಸಿದೆ ಇನ್ನೊಂದಡೆ ಸ್ಥಳಿಯ ನಿವಾಸಿಗಳಿಗೆ ಆತಂಕ ಸೃಷ್ಟಿಯಾಗಿದೆ ಇದರಿಂದಾಗಿ ಸತ್ಯನಾರಾಯಣ ದೇವಸ್ಥಾನದ ಬಳಿಯ ಚಿನ್ನೂರು ಸೇತುವೆಯಿಂದ ಗಂಗಾವರಂ ಕಡೆಗೆ ವಾಹನವನ್ನು ಕಾಡಿಗೆ ತಿರುಗಿಸಲು ಪ್ರಯತ್ನಿಸುತ್ತಿದ್ದ ಅರಣ್ಯ ವಿಭಾಗಾಧಿಕಾರಿ ಸುಕುಮಾರ್ ಮೇಲೆ ಆನೆ ದಾಳಿ ಮಾಡಿದ್ದು ಇದರಿಂದ ಅವರ ಕಾಲಿಗೆ ಗಂಭೀರ ಗಾಯವಾಗಿದೆ ಸುಮಾರು 5 ಗಂಟೆಗಳ ಕಾಲ ಕಾಡಿಸಿದ ಆನೆಯನ್ನು ಅರಣ್ಯ ಅಧಿಕಾರಿಗಳು ಪಟಾಕಿ ಸಿಡಿಸಿ, ಆನೆಯನ್ನು ಗಂಗಾವರಂನಿಂದ ಆಂಜನೇಯ ಸ್ವಾಮಿ ದೇವಾಲಯದ ಹಿಂದಿನ ಕಾಡಿಗೆ ಸುಮಾರು ಒಂದು ಮೈಲಿ ದೂರದಲ್ಲಿ ಸ್ಥಳಾಂತರಿಸಿದರು.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Thursday, April 23



