ನ್ಯೂಜ್ ಡೆಸ್ಕ್:ಬಯಲು ಸೀಮೆ ಮಲೆನಾಡಿನಂತೆ ಆಗಲಿದ್ದು ಮಲೆನಾಡು ಬಯಲು ಸೀಮೆಯಂತಾಗುತ್ತೆ ಮುಂದಿನ ಸಂಕ್ರಾಂತಿ ತನಕ ಸಿದ್ಧರಾಮಯ್ಯ ಸರ್ಕಾರಕ್ಕೆ ಯಾವುದೆ ತೊಂದರೆ ಇರುವುದಿಲ್ಲ ಎಂದು ಕೋಡಿಮಠದ ಮಹಾಸ್ವಾಮೀಜಿ ಭವಿಷ್ಯ ಹೇಳಿದ್ದಾರೆ.
ಅವರು ಧಾರವಾಡದಲ್ಲಿ ದಸರಾ ಜಂಬೂ ಸವಾರಿಗೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ದಸರಾದ ನಿಜವಾದ ಅರ್ಥ ದುಷ್ಟ ಶಕ್ತಿಗಳನ್ನು ದೂರ ಮಾಡುವುದು. ಮನುಷ್ಯನ ಕೋಪ, ತಾಪ, ಆಸೆಗಳನ್ನು ಗೆಲ್ಲುವಂತೆ ಮಾಡುವುದಾಗಿದೆ. ಅಲ್ಲದೇ ಮನುಷ್ಯನಿಗೆ ಶಾಂತಿ, ಸುಖ, ನೆಮ್ಮದಿಗಾಗಿ ದಸರಾವನ್ನು ಆಚರಿಸಲಾಗುತ್ತದೆ ಎಂದು ಹೇಳಿದರು.
ಎರಡೂವರೆ ವರ್ಷಕ್ಕೆ ರಾಜ್ಯ ಸರ್ಕಾರದ ಮುಖ್ಯಮಂತ್ರಿ ಬದಲಾವಣೆ ಆಗಲಿದ್ದಾರೆ ಎನ್ನಲಾಗುತ್ತಿದ್ದು ಇದಕ್ಕೆ ಭಿನ್ನವಾಗಿ ಕೋಡಿಮಠ ಮಹಾಸಂಸ್ಥಾನದ ಪೀಠಾಧ್ಯಕ್ಷ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ ಭವಿಷ್ಯ ನುಡಿದಿದ್ದು ಸಿಎಂ ಸಿದ್ಧರಾಮಯ್ಯ ಅವರಿಗೆ, ಸಂಕ್ರಾಂತಿ ತನಕ ಯಾವುದೇ ತೊಂದರೆ ಹಾಗು ಭಯವೂ ಇಲ್ಲ. ಸಂಕ್ರಾಂತಿ ಬಳಿಕ ಆ ಬಗ್ಗೆ ಭವಿಷ್ಯ ನುಡಿಯುವುದಾಗಿ ಹೇಳಿದ್ದಾರೆ.
ಈ ಹಿಂದೆಯೇ ಹೇಳಿದಂತೆ ಬಯಲು ಸೀಮೆ ಮಲೆನಾಡು ಆಗಲಿದೆ. ಮಲೆನಾಡು ಬಯಲು ಸೀಮೆ ಆಗುತ್ತದೆ ಎಂದ ಅವರು ಬಯಲು ಸೀಮೆ ಮಲೆನಾಡು ಆಗಿದೆ ಎಂಬುದಾಗಿ ಉಚ್ಚರಿಸಿದ್ದಾರೆ.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Thursday, April 23



