ಶ್ರೀನಿವಾಸಪುರ:ಗುರುವಾರ ಹಾಗು ಶುಕ್ರವಾರ ರಾತ್ರಿ ಸಮಯದಲ್ಲಿ ಅರ್ಭಟಿಸುತ್ತ ಸುರಿದ ಧಾರಾಕಾರ ಮಳೆಗೆ ಶ್ರೀನಿವಾಸಪುರ ಪಟ್ಟಣದ ಜನತೆ ತತ್ತರಿಸಿ ಹೋಗಿದ್ದಾರೆ. ಗುಡುಗು ಸಹಿತ ಆರ್ಭಟದ ಭಾರೀ ಮಳೆಗೆ ಈಚಲಕುಂಟೆ ಸ್ಲಂ ಮನೆಗಳು,ಕೋರ್ಟ್ ಅವರಣ ಎ.ಪಿ.ಎಂ.ಸಿ ಆವರಣ ಜಲಾವೃತವಾದರೆ ಕೋಲಾರ ನ್ಯೂಸರ್ಕಲ್, ಡಿಗ್ರಿ ಕಾಲೇಜ್ ಹಿಂಬದಿಯ ಭಾಗದಲ್ಲಿ ಒತ್ತುವರಿಯಾಗಿ ಅನಧಿಕೃತವಾಗಿ ನಿರ್ಮಾಣವಾಗಿರುವ ಮನೆಗಳಿಗೆ ಕೊಳ್ಳೂರು ಭಾಗದಿಂದ ರಾಜಕಾಲುವೆಯಲ್ಲಿ ಬರುವ ಮಳೆ ನೀರು ಮನೆಗಳಿಗೆ ನುಗ್ಗಿದೆ, ತಾಲೂಕಿನ ಕೆಲವೊಂದು ಕೆರೆಗಳು ಕೊಡಿ ಬಿದ್ದಿವೆ.ತಾಲೂಕಿನಾದ್ಯಂತ ಬಹುತೇಕ ಕಡೆ ಧಾರಾಕಾರ ಮಳೆಯಾಗಿದೆ. ಇಂದು ಕೂಡ ಮಳೆ ಮುಂದುವರೆಯುವ ಸಾಧ್ಯತೆಗಳು ಇದ್ದು ಸಣ್ಣ-ಪುಟ್ಟ ಕೆರೆಗಳು ತುಂಬಿ ಹರಿಯುತ್ತಿವೆ ಹೊಸ ಬಸ್ ನಿಲ್ದಾಣ ಇದಕ್ಕೂ ಮುಂಚೆ ಈಚಲಕುಂಟೆ ಕೆರೆಯಂಗಳವಾಗಿದ್ದರೆ ಕೋರ್ಟ್ ಆವರಣ ಈಚಲಕುಂಟೆ ಕೆರೆ ಅಚ್ಚುಕಟ್ಟು ಆಗಿತ್ತು ರಾತ್ರಿ ಸುರಿದ ಧಾರಕಾರ ಮಳೆಯಿಂದಾಗಿ ದೊಡ್ಡಮಟ್ಟದಲ್ಲಿ ನೀರು ಹರಿಯುತ್ತಿರುವ ಹಿನ್ನಲೆಯಲ್ಲಿ ಚಿಕ್ಕದಾಗಿ ನಿರ್ಮಿಸಿರುವ ರಾಜಕಾಲುವೆಗಳು ನೀರು ಹರಿವಿಗೆ ಸಾಕಾಗದೆ ಸಾಯಿ ಬಾಬಾ ದೇವಾಲಯದ ಮುಂಬಾಗ ರಸ್ತೆ ಮೆಲೆ ನೀರು ಹರಿದಿದೆ.ಕೊಳ್ಳೂರಿಗೆ ಹೊಂದಿಕೊಂಡಿರುವ ದೊಡಮಲದೊಡ್ಡಿ ಗ್ರಾಮ ಅಕ್ಷರಶಃ ದ್ವೀಪದಂತಾಗಿದೆ.
ತಾಲೂಕಿನ ಉತ್ತರ ಭಾಗದಲ್ಲಿ ದೊಡ್ಡ ಕೆರೆಗಳು ಇದ್ದು ಅವುಗಳಲ್ಲಿ ಪಾಪಶೆಟ್ಟಿಪಲ್ಲಿ ಕೆರೆ,ಬಾಲರೆಡ್ಡಿ ಕೆರೆ,ಕೊಂಡಾಮರಿ,ಕಶೇಟ್ಟಿಪಲ್ಲಿ,ಇಲ್ದೋಣಿ ಗುಂದೇಡು,ರಾಯಪಾಡು ಪೈ ಕೆರೆ ಅಡವಿಬೈರಗಾನಪಲ್ಲಿ ಕೆರೆ, ಕೂರಿಗೆ ಪಲ್ಲಿ ಸೇರಿದಂತೆ ಹಲವು ಕೆರೆಗಳು ಕೊಡಿ ಬಿದ್ದಿವೆ,ಕೆರೆಗಳು ತುಂಬಿ ಹರಿಯುವ ನೀರು ಬೀರಂಗಿ ಹಳ್ಳ ಸೇರಿ ಅನಾಯಸವಾಗಿ ಆಂಧ್ರಕ್ಕೆ ಹರಿದು ಹೋಗುತ್ತಿದೆ ಇಲ್ಲಿ ಯಾವುದೆ ತಡೆ ಇಲ್ಲದ ಕಾರಣ ನಮ್ಮಲ್ಲಿ ಬಿದ್ದ ಮಳೆ ನೀರು ಆಂಧ್ರದ ಪಾಲಾಗುತ್ತಿದೆ ಎನ್ನುತ್ತಾರೆ ಗಡಿ ಭಾಗದ ಗ್ರಾಮಸ್ಥರು.
ತಾ.ದೊಡ್ಡ ಕೆರೆ ಎಂದೆ ಖ್ಯಾತಿ ಪಡೆದಿರುವ ಕೋಡಿಪಲ್ಲಿ ಕೆರೆಗೆ ಅರ್ದಕ್ಕೆ ನೀರು ಬಂದಿದ್ದು ಇಂದು ನಾಳೆ ಮಳೆ ಸುರಿದರೆ ಕೆರೆ ತುಂಬುತ್ತದೆ ಎನ್ನುತ್ತಾರೆ ಗ್ರಾಮಸ್ಥರು.
ಕೆಸರು ಗದ್ದೆಗಳಾಗಿವೆ ಮಾವಿನ ತೋಟಗಳು
ಧಾರಕಾರ ಮಳೆಯಿಂದಾಗಿ ತಾಲೂಕಿನಲ್ಲಿ ಮಾವಿನ ತೋಟಗಳು ಕೆಸರು ಗದ್ದೆಗಳಾಗಿದ್ದು ನೀರು ಹರಿಯಲು ಜಾಗ ಇಲ್ಲದೆ ಮೊಣಕಾಲುದ್ದ ಮಳೆ ನೀರು ತೋಟಗಳಲ್ಲೆ ನಿಂತಿದೆ.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



