ಶ್ರೀನಿವಾಸಪುರ:ಸೆಲ್ಫಿ ಹುಚ್ಚಾಟಕ್ಕೆ ಬಿದ್ದ ಯುವಕನೊರ್ವ ರೈಲ್ವೆ ವಿದ್ಯತ್ ತಗಲಿ ಸಾವನ್ನಪ್ಪಿರುವ ಮನ ಕಲುಕುವ ಘಟನೆ ಶ್ರೀನಿವಾಸಪುರದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಮೃತ ಯುವಕನನ್ನು ಪದವಿ ಪೂರ್ವ ವ್ಯಾಸಂಗ ಮಾಡುತ್ತಿದ್ದ ಶ್ರೀನಿವಾಸಪುರದ ನಿವಾಸಿ ಕಾರ್ತಿಕ್ ಎನ್ನಲಾಗಿದ್ದು, ಯುವಕ ತನ್ನ ಇಬ್ಬರು ಸ್ನೇಹಿತರೊಂದಿಗೆ ರೈಲು ನಿಲ್ದಾಣಕ್ಕೆ ಹೋಗಿದ್ದಾನೆ,ಅಲ್ಲಿ ನಿಲ್ಲಿಸಿದ್ದ ಗೂಡ್ಸ್ ರೈಲಿನ ಮೇಲೆ ಹತ್ತಿ ಮೊಬೈಲ್ ಫೋನ್ನಿಂದ ಸೆಲ್ಫಿ ತೆಗೆದುಕೊಳ್ಳುವ ಸಾಹಸ ಮಾಡುವ ವೇಳೆ ಅವನ ಕೈ ಹೈ ಟೆನ್ಷನ್ ವಿದ್ಯುತ್ ತಂತಿಗೆ ತಗುಲಿದೆ ವಿದ್ಯುತ್ ಹರಿದು ಯುವಕ ಪಕ್ಕದ ಮಾವಿನ ತೋಟಕ್ಕೆ ಎಸೆಯಲ್ಪಟ್ಟಿದ್ದಾನೆ.
ಅವನೊಂದಿಗೆ ಹೋಗಿದ್ದ ಇನ್ನಿಬ್ಬರು ಕೆಳಗಿಂದ ಆಘಾತವನ್ನು ನೋಡುತ್ತಿದ್ದು ತಕ್ಷಣ ಕುಟುಂಬದವರಿಗೆ ಮಾಹಿತಿ ನೀಡಿದ್ದು ಪೋಷಕರು ವಿದ್ಯತ್ ಅಪಘಾತಕ್ಕೆ ಒಳಗಾದ ಯುವಕನನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದಾರೆ ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅಘಾತ ನಡೆದ ಮೂರು ದಿನಕ್ಕೆ ಯುವಕ ಮೃತಪಟ್ಟಿರುವುದಾಗಿ ಹೇಳಲಾಗುತ್ತಿದೆ.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



