ಶ್ರೀನಿವಾಸಪುರ:ಶ್ರೀನಿವಾಸಪುರ ತಾಲೂಕು ಎದರೂರು ಗ್ರಾಮದಲ್ಲಿ ಕೈಗಾರಿಕ ವಲಯಕ್ಕೆ ಸ್ಥಾಪನೆ ಸಂಬಂದಿಸಿದಂತೆ ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಶಾಸಕ ವೆಂಕಟಶಿವರೆಡ್ಡಿ ಮಾತನಾಡಿ ಶ್ರೀನಿವಾಸಪುರ ತಾಲೂಕಿನಲ್ಲಿ ಎರಡು ಕಡೆ ಕೈಗಾರಿಕ ವಲಯ ಸ್ಥಾಪನೆಗೆ ಸರ್ಕಾರಕ್ಕೆ ಮನವಿ ಮಾಡಿದ್ದೆ ಇದರಲ್ಲಿ ಎದರೂರು ಗ್ರಾಮದ ಕೈಗಾರಿಕ ವಲದ ನೋಟಿಫೀಕೇಷನ್ ಆಗಿದ್ದು ಈಗ ಇಲ್ಲ ಸಲ್ಲದ ಸಬೂಬು ಹೇಳುತ್ತಿರುವ ಸರ್ಕಾರ ನಿಧಾನ ಮಾಡುತ್ತಿದೆ ನಮ್ಮ ತಾಲೂಕಿನಲ್ಲಿ ಕೈಗಾರಿಕಾ ಪ್ರದೇಶಗಳಗಳನ್ನು ಸ್ಥಾಪಿಸುವ ಮೂಲಕ ತಾ.ಅಭಿವೃದ್ಧಿ ಮಾಡಲು ಸರ್ಕಾರಕ್ಕೆ ಆಸಕ್ತಿ ಇಲ್ವಾ ಎಂದು ಸರ್ಕಾರದ ವಿರುದ್ದ ಧ್ವನಿ ಎತ್ತಿದ್ದರು.
ಇದಕ್ಕೆ ಎದರೂರು ಗ್ರಾಮದ ಗ್ರಾಮ ಪಂಚಾಯಿತಿ ಸದಸ್ಯೆ ಪತಿ ಯುವ ಮುಖಂಡ ಸುರೇಶ್ ಎಂಬುವರು ಶಾಸಕ ವೆಂಕಟಶಿವರೆಡ್ಡಿ ಅವರನ್ನು ಕೆಲ ಯುಟೂಬ್ ಹಾಗು ಸಾಮಾಜಿಕ ಜಾಲತಾಣದಲ್ಲಿ ಏಕವಚನ ಪ್ರಯೋಗಿಸಿ ಮಾತನಾಡಿ ಯಾರಪ್ಪನ ಮನೆ ಆಸ್ತಿ ಎಂದೆಲ್ಲ ಪದ ಬಳಿಸಿದ್ದು ಈ ಬಗ್ಗೆ ಶಾಸಕ ವೆಂಕಟಶಿವರೆಡ್ಡಿ ಅವರು ಸುರೇಶ್ ವಿರುದ್ದ ಶ್ರೀನಿವಾಸಪುರದ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.ದೂರು ದಾಖಲಿಸಿಕೊಂಡಿದ್ದ ಶ್ರೀನಿವಾಸಪುರದ ಪೋಲಿಸರು ಸುರೇಶ್ ಅವರನ್ನು ಠಾಣೆಗೆ ಕರೆಯಿಸಿ ಅವರಿಂದ ಸಮಜಾಯಿಸಿ ಬರೆಸಿಕೊಂಡು ಮುಂದಿನ ದಿನಗಳಲ್ಲಿ ಹೀಗೆಲ್ಲಾ ಮಾತನಾಡಬಾರದು ಈ ರಿತಿಯಾಗಿ ನಡೆದು ಕೊಳ್ಳಬಾರದು ಎಂದು ತಿಳುವಳಿಕೆ ಹೇಳಿ ಕಳಿಸಿದ್ದಾರೆ.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



