ಶ್ರೀನಿವಾಸಪುರ:ಶ್ರೀನಿವಾಸಪುರ ತಾಲೂಕು ಎದರೂರು ಗ್ರಾಮದಲ್ಲಿ ಕೈಗಾರಿಕ ವಲಯಕ್ಕೆ ಸ್ಥಾಪನೆ ಸಂಬಂದಿಸಿದಂತೆ ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಶಾಸಕ ವೆಂಕಟಶಿವರೆಡ್ಡಿ ಮಾತನಾಡಿ ಶ್ರೀನಿವಾಸಪುರ ತಾಲೂಕಿನಲ್ಲಿ ಎರಡು ಕಡೆ ಕೈಗಾರಿಕ ವಲಯ ಸ್ಥಾಪನೆಗೆ ಸರ್ಕಾರಕ್ಕೆ ಮನವಿ ಮಾಡಿದ್ದೆ ಇದರಲ್ಲಿ ಎದರೂರು ಗ್ರಾಮದ ಕೈಗಾರಿಕ ವಲದ ನೋಟಿಫೀಕೇಷನ್ ಆಗಿದ್ದು ಈಗ ಇಲ್ಲ ಸಲ್ಲದ ಸಬೂಬು ಹೇಳುತ್ತಿರುವ ಸರ್ಕಾರ ನಿಧಾನ ಮಾಡುತ್ತಿದೆ ನಮ್ಮ ತಾಲೂಕಿನಲ್ಲಿ ಕೈಗಾರಿಕಾ ಪ್ರದೇಶಗಳಗಳನ್ನು ಸ್ಥಾಪಿಸುವ ಮೂಲಕ ತಾ.ಅಭಿವೃದ್ಧಿ ಮಾಡಲು ಸರ್ಕಾರಕ್ಕೆ ಆಸಕ್ತಿ ಇಲ್ವಾ ಎಂದು ಸರ್ಕಾರದ ವಿರುದ್ದ ಧ್ವನಿ ಎತ್ತಿದ್ದರು.
ಇದಕ್ಕೆ ಎದರೂರು ಗ್ರಾಮದ ಗ್ರಾಮ ಪಂಚಾಯಿತಿ ಸದಸ್ಯೆ ಪತಿ ಯುವ ಮುಖಂಡ ಸುರೇಶ್ ಎಂಬುವರು ಶಾಸಕ ವೆಂಕಟಶಿವರೆಡ್ಡಿ ಅವರನ್ನು ಕೆಲ ಯುಟೂಬ್ ಹಾಗು ಸಾಮಾಜಿಕ ಜಾಲತಾಣದಲ್ಲಿ ಏಕವಚನ ಪ್ರಯೋಗಿಸಿ ಮಾತನಾಡಿ ಯಾರಪ್ಪನ ಮನೆ ಆಸ್ತಿ ಎಂದೆಲ್ಲ ಪದ ಬಳಿಸಿದ್ದು ಈ ಬಗ್ಗೆ ಶಾಸಕ ವೆಂಕಟಶಿವರೆಡ್ಡಿ ಅವರು ಸುರೇಶ್ ವಿರುದ್ದ ಶ್ರೀನಿವಾಸಪುರದ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.ದೂರು ದಾಖಲಿಸಿಕೊಂಡಿದ್ದ ಶ್ರೀನಿವಾಸಪುರದ ಪೋಲಿಸರು ಸುರೇಶ್ ಅವರನ್ನು ಠಾಣೆಗೆ ಕರೆಯಿಸಿ ಅವರಿಂದ ಸಮಜಾಯಿಸಿ ಬರೆಸಿಕೊಂಡು ಮುಂದಿನ ದಿನಗಳಲ್ಲಿ ಹೀಗೆಲ್ಲಾ ಮಾತನಾಡಬಾರದು ಈ ರಿತಿಯಾಗಿ ನಡೆದು ಕೊಳ್ಳಬಾರದು ಎಂದು ತಿಳುವಳಿಕೆ ಹೇಳಿ ಕಳಿಸಿದ್ದಾರೆ.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



