ನ್ಯೂಜ್ ಡೆಸ್ಕ್: ಭಾರತೀಯ ಜನತಾಪಕ್ಷದ ಎಂಎಲ್ಸಿ ಕೇಶವ ಪ್ರಸಾದ್ ಅವರ ವಾಹನವನ್ನು ಟೋಲ್ ಸಿಬ್ಬಂದಿ ತಡೆದು, ಅವರ ಪಾಸ್ ಮತ್ತು ಮೊಬೈಲ್ ಕಿತ್ತುಕೊಂಡು ಅನುಚಿತವಾಗಿ ವರ್ತಿಸಿ ದರ್ಪ ಮೆರೆದಿರುವ ಘಟನೆ ನಡೆದಿದ್ದು ಸ್ಥಳೀಯ ಪೋಲಿಸರು ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಸುಮಾರು ಒಂದು ಗಂಟೆ ಕಾಲ ಗೊಂದಲ ಸೃಷ್ಟಿಸಿದ ಟೋಲ್ ಸಿಬ್ಬಂದಿ ವರ್ತನೆಗೆ ಎಂಎಲ್ಸಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಘಟನೆ ಭಾನುವಾರ ಕರ್ನಾಟಕದ ವಿಜಯಪುರ ನಗರದ ಹೊರವಲಯದ ಬೆಂಗಳೂರು-ಸೋಲಾಪುರ ಹೆದ್ದಾರಿಯ ಟೋಲ್ ಗೇಟ್ನಲ್ಲಿ ನಡೆದಿದೆ ಎನ್ನಲಾಗಿದೆ.ಟೋಲ್ ಸಿಬ್ಬಂದಿ ಎಂಎಲ್ಸಿ ಅವರ ಪಾಸ್ ಮತ್ತು ಮೊಬೈಲ್ ಅನ್ನು ದರ್ಪದಿಂದ ಕಸಿದುಕೊಂಡು,ನೀವು ಎಂಎಲ್ಸಿ ಎಂದು ನಾವು ಹೇಗೆ ನಂಬಬೇಕು?ಎಂದು ಪ್ರಶ್ನಿಸಿ ಅನುಚಿತವಾಗಿ ವರ್ತಿಸಿದ್ದು ಸ್ಥಳೀಯ ಬಿಜೆಪಿ ಕಾರ್ಯಕರ್ತರು ಸ್ಥಳಕ್ಕೆ ಆಗಮಿಸಿ ಟೋಲ್ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಎಂಎಲ್ಸಿ ಕೇಶವ ಪ್ರಸಾದ್ ಅವರು ವಿಜಯಪುರ ಎಸ್ಪಿ ಲಕ್ಷ್ಮಣ ನಿಂಬರಗಿಗೆ ಫೋನ್ ಮೂಲಕ ಮಾಹಿತಿ ನೀಡಿದ ನಂತರ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ನಿಭಾಯಿಸಿದರು. ಟೋಲ್ ಸ್ಥಳೀಯ ಮುಖ್ಯಸ್ಥರು ಆಗಮಿಸಿ ನಡೆದ ಘಟನೆ ಬಗ್ಗೆ ಎಂಎಲ್ಸಿ ಕೇಶವ ಪ್ರಸಾದ್ ವಿಷಾದ ವ್ಯಕ್ತಪಡಿಸಿರುವ ಬಗ್ಗೆ ಹೇಳಲಾಗಿದೆ.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



