ಶ್ರೀನಿವಾಸಪುರ:ಕಾರ್ಮಿಕರನ್ನು ಕರೆದುಕೊಂಡು ಹೋಗುತ್ತಿದ್ದ ಬೊಲೇರೋ ಅತಿ ವೇಗವಾಗಿ ಚಾಲನೆಯಿಂದ ವಾಹನ ರೈಲ್ವೆ ಬ್ರಿಡ್ಜ್ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಮೇಲೆ ಮುಗುಚಿ ಬಿದ್ದು ವಾಹನದಲ್ಲಿದ್ದ ಮೂವರು ಕಾರ್ಮಿಕರು ಮೃತಪಟ್ಟು, 10 ಮಂದಿ ಗಾಯಗೊಂಡಿರುವ ಘಟನೆ ಭಾನುವಾರ ಸಂಜೆ ನಡೆದಿದೆ.
ಶ್ರೀನಿವಾಸಪುರ ತಾಲೂಕಿನ ದೊಡಮಲದೊಡ್ಡಿ ರೈಲ್ವೆ ಬ್ರಿಡ್ಜ್ ಬಳಿ ಘಟನೆ ಜರುಗಿದ್ದು, ಆಂದ್ರದ ಚೆಂಬಕೂರು ಗ್ರಾಮದ ಕೂಲಿ ಕಾರ್ಮಿಕರಾದ ವೆಂಕಟಮ್ಮ (55), ಮುನಿಯಪ್ಪ (56) ಶ್ರೀನಿವಾಸ@ಸೀನು (27) ಎಂಬುವರು ಮೃತಪಟ್ಟಿದ್ದಾರೆ.
ಚೆಂಬಕೂರಿನಿಂದ ಹುಣಸೆ ಮರದಲ್ಲಿ ಕಾಯಿ ಉದುರಿಸುವ ಕೆಲಸಕ್ಕೆ 12 ಮಂದಿ ಕೂಲಿ ಕಾರ್ಮಿಕರನ್ನು ಶ್ರೀನಿವಾಸಪುರ-ಚಿಂತಾಮಣಿ ನಡುವಿನ ಆನೂರು ಗ್ರಾಮಕ್ಕೆ ಕರೆತಂದಿದ್ದರು, ಕೆಲಸ ಮುಗಿಸಿದ ಕೂಲಿ ಕಾರ್ಮಿಕರನ್ನು ಅವರ ಊರಾದ ಆಂಧ್ರದ ಚಂಬಕೂರಿಗೆ ಮತ್ತೆ ಬೊಲೆರೋ ವಾಹನದಲ್ಲಿ ಸಂಜೆ ವಾಪಸ್ ಕರೆದುಕೊಂಡು ಹೋಗುತ್ತಿರುವಾಗ ದೊಡಮದೊಡ್ಡಿ ಸಮೀಪದ ರೈಲ್ವೆ ಅಂಡರ್ ಬ್ರಿಡ್ಜ್ ಬಳಿ ವಾಹನ ಅತಿ ವೇಗವಾಗಿ ಚಲಾಯಿಸುತ್ತಿದ್ದದ್ದರಿಂದ ಬ್ರೇಕ್ ಫೈಲೂರ್ ಆಗಿ ಚಾಲಕನ ನಿಯಂತ್ರಣ ತಪ್ಪಿದ್ದು ಬೊಲೆರೋ ರಸ್ತೆ ಮೇಲೆ ಮುಗಿಚಿ ಬಿದಿದ್ದೆ. ಬಿದ್ದ ರಭಸಕ್ಕೆ ವಾಹನದಲ್ಲಿದ್ದ ಕಾರ್ಮಿಕರಲ್ಲಿ ಮೂವರು ತೀವ್ರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ ಉಳಿದವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.ಶ್ರೀನಿವಾಸಪುರ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಅಪಘಾತ ದಾಖಲಿಸಿಕೊಂಡಿದ್ದಾರೆ.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



