ಕೋಲಾರ:ಶ್ರೀನಿವಾಸಪುರ ಕ್ಷೇತ್ರದಲ್ಲಿ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಅವರೆ ನಮ್ಮ ನಾಯಕರು ಅವರೇನಾದರೂ ಚುನಾವಣಾ ಕಣದಿಂದ ಹಿಂದೆ ಸರಿದಿದ್ದೆ ಆದರೆ ಅಗ ತೂಪಲ್ಲಿ ನಾರಾಯಣಸ್ವಾಮಿ ಅಭ್ಯರ್ಥಿಯಾಗಲಿದ್ದಾರೆ ಎಂದು ಜೆಡಿಎಸ್ ಪಕ್ಷದಲ್ಲಿ ಮುಖಂಡರೊಬ್ಬರು ಹೇಳಿಕೊಂಡಿದ್ದಾರೆ.
ಸಿಎಂಆರ್.ಶ್ರೀನಾಥ್ ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದು, ಜೆಡಿಎಸ್ ಪಕ್ಷದಿಂದ ಅಭ್ಯರ್ಥಿಯಾಗಲಿದ್ದಾರೆಂಬ ವದಂತಿಗಳು ಹರಿದಾಡುತ್ತಿರುವ ಸಮಯದಲ್ಲಿ ಶ್ರೀನಿವಾಸಪುರದಲ್ಲಿ ಸ್ಪರ್ದಿಸಲು ಹೊರಗಿನವರಿಗೆ ಅವಕಾಶವಿಲ್ಲ ಕಾರ್ಯಕರ್ತರು ಒಪ್ಪುವುದೂ ಇಲ್ಲ ಎಂಬ ಮಾತು ದಳಪತಿಗಳಿಂದಲೆ ಕೇಳಿಬರುತ್ತಿದೆ.
ಶಾಸಕರು ಹಿಂದೆ ಸರಿದರೆ ಅಹಿಂದಾಗೆ ಅವಕಾಶ
ವೆಂಕಟಶಿವಾರೆಡ್ಡಿ ಅವರು ಶಾಸಕರಾಗಿದ್ದು, ಇಲ್ಲಿ ಬೇರೆಯವರ ಸ್ಪರ್ಧೆ ವಿಷಯ ಅಪ್ರಸ್ತುತ,ಎರಡನೆ ಸಾಲಿನಲ್ಲಿ ತೂಪಲ್ಲಿ ನಾರಾಯಣಸ್ವಾಮಿ ಇದ್ದಾರೆ ಅವರು ಜಿಪಂ ಅಧ್ಯಕ್ಷರಾಗಿ, ಪಕ್ಷಕ್ಕಾಗಿ ನಿಷ್ಟೆಯಿಂದ ಕೆಲಸ ಮಾಡಿಕೊಂಡು ಬಂದಿದ್ದು ಅವರೊಂದಿಗೆ ಮತ್ತೊಬ್ಬ ಜಿಲ್ಲಾಪಂಚಾಯಿತಿ ಮಾಜಿ ಸದಸ್ಯ ಅಹಿಂದ ಮುಖಂಡ ಎಂದು ಗುರುತಿಸಿಕೊಂಡಿರುವವರು ಹೇಳಿಕೊಂಡಿರುವುದು ಏನೆಂದರೆ ಶ್ರೀನಿವಾಸಪುರದಲ್ಲಿ ಜೆಡಿಎಸ್ ಪಕ್ಷ ಕಟ್ಟಿ ಬೆಳೆಸಿದ್ದೇವೆ, ಪಕ್ಷಕ್ಕಾಗಿ ನಿಷ್ಟೆಯಿಂದ ದುಡಿದಿದ್ದೇವೆ,ಅವಕಾಶ ಕೊಟ್ಟರೆ ನಾನು MLA ಅಭ್ಯರ್ಥಿ ಎಂದು ಎಂದು ತಮ್ಮ ಮನದಾಳದ ಮಾತನ್ನು Indirectly ಹೇಳಿದ್ದಾರೆ.
ಸಿಎಂಆರ್.ಶ್ರೀನಾಥ್ ಶ್ರೀನಿವಾಸಪುರ ಕ್ಷೇತ್ರದಲ್ಲಿ ಕಾರ್ಯಕರ್ತರೊಂದಿಗೆ ಬೆರೆಯುತ್ತಿದ್ದಾರೆ ಕಷ್ಟ ಸುಖಕ್ಕೆ ಸ್ಪಂದಿಸುತ್ತ ಮುಂಚೂಣಿಯಲ್ಲಿದ್ದಾರೆ, ಅವರು ಶ್ರೀನಿವಾಸಪುರಕ್ಕೆ ಬರುವುದೂ ಬೇಡ ಎನ್ನುವುದಾದರೆ ಸ್ಥಳೀಯ ಜೆಡಿಎಸ್ ಕಾರ್ಯಕರ್ತರ ಅಸಮಧಾನಕ್ಕೆ ಕಾರಣವಾಗುತ್ತದೆ ಎನ್ನುತ್ತಾರೆ.
ಈ ಎಲ್ಲಾ ಹೇಳಿಕೆಗಳಿಂದ ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಮನೆಯೊಂದು ಎರಡು ಬಾಗಿಲು ಆಗುವ ಲಕ್ಷಣಗಳು ಗೋಚರವಾಗುತ್ತಿದೆ.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Wednesday, July 22



