ನ್ಯೂಜ್ ಡೆಸ್ಕ್:ನಿರಂತರವಾಗಿ ಪರೀಕ್ಷೆ ಬರೆದರೂ ಸರ್ಕಾರಿ ಕೆಲಸ ಸಿಗದ ಹಿನ್ನಲೆಯಲ್ಲಿ 23 ವರ್ಷದ ಬಿ.ಟೆಕ್ ಚಿನ್ನದ ಪದಕ ವಿಜೇತ ಯುವಕ ತೀವ್ರ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಉತ್ತರ ಪ್ರದೇಶದ ಕಾನ್ಪುರದ ಗುಜೈನಿಯಲ್ಲಿ ದುರಂತ ಘಟನೆ ನಡೆದಿದ್ದು ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಬಿಹಾರದ ಬಕ್ಸಾರ್ನ ಆನಂದ್ ಕುಮಾರ್ ಎಂದಿರುತ್ತಾರೆ.
ಬಿಟೆಕ್ ಚಿನ್ನದ ಪದಕ ಪಡೆದಿದ್ದ
2024 ರಲ್ಲಿ ಕಾನ್ಪುರದ ಪ್ರಮುಖ PSIT ಎಂಜಿನಿಯರಿಂಗ್ ಕಾಲೇಜಿನಿಂದ ಎಲೆಕ್ಟ್ರಿಕಲ್ ಎಂಜಿನಿಯರಿಂಗ್ನಲ್ಲಿ ಬಿ.ಟೆಕ್ ಪದವಿಯಲ್ಲಿ ಉತ್ತರ ಪ್ರದೇಶಕ್ಕೆ ಮೂರನೆ ರ್ಯಾಂಕ್ ವಿಜೇತನಾಗಿ ಚಿನ್ನದ ಪದಕ ಪಡೆದು ಖಾಸಗಿ ಸಂಸ್ಥೆಯಲ್ಲಿ ಉದ್ಯೋಗಸ್ಥನಾಗಿದ್ದ ಆದರೂ ನಿರಂತರವಾಗಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸಿ 50 ಕ್ಕೂ ಹೆಚ್ಚು ಬಾರಿ ಸರ್ಕಾರಿ ನೇಮಕಾತಿ ಪರೀಕ್ಷೆಗಳಿಗೆ ಹಾಜರಾದರೂ ಫಲಿತಾಂಶ ಸಿಗದ ಹಿನ್ನಲೆಯಲ್ಲಿ ತೀವ್ರ ಆಘಾತಕ್ಕೆ ಒಳಾಗದ ಯುವಕ ಗುಜೈನಿಯಲ್ಲಿರುವ ತಮ್ಮ ತಂದೆಯ ಮನೆಯಲ್ಲಿ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಅಪ್ಪನಿಗೆ ಪದೇ ಪದೇ ಕ್ಷಮಿಸಿ ಎಂದು ಕೇಳಿದ್ದಾನೆ!
ಸಾಯುವ ಮುನ್ನ ಯುವಕ ಬರೆದಿಟ್ಟಿರುವ ಆತ್ಮಹತ್ಯೆ ಪತ್ರದಲ್ಲಿ ತಂದೆಗೆ ಪದೇ ಪದೇ ಕ್ಷಮೆಯಾಚಿಸುತ್ತಾ, “ಕ್ಷಮಿಸಿ ಅಪ್ಪ ನಾನು ಸರ್ಕಾರಿ ಕೆಲಸಕ್ಕಾಗಿ 50 ಬಾರಿ ಪ್ರಯತ್ನಿಸಿದೆ. ಆದರೆ ನಾನು ಯಶಸ್ವಿಯಾಗಲು ಸಾಧ್ಯವಾಗಲಿಲ್ಲ ನಾನು ಸೋತು ಹೋದೆ ದಯವಿಟ್ಟು ನನ್ನನ್ನು ಕ್ಷಮಿಸಿ” ಎಂದು ಬರೆದಂತ ಪತ್ರ ಎಂತವರನ್ನು ಕರಳು ಕಿವಿಚಿ,ಕಣ್ಣೀರು ತರಿಸುವಂತಿದೆ ಎನ್ನುತ್ತಾರೆ.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



