ಶ್ರೀನಿವಾಸಪುರ:ಕಿಡಿಗೇಡಿಗಳು ಹಾಕಿದ ಬೆಂಕಿಗೆ ಮೊಬೈಲ್ ಅಂಗಡಿಗಳ ಸೈನ್ ಬೋರ್ಡ್ ಸೇರಿದಂತೆ ನಾಮಫಲಕಳು ವಿದ್ಯತ್ ತಂತಿಗಳು ಸುಟ್ಟು ಕರಕಲಾಗಿರುವ ಘಟನೆ ಶ್ರೀನಿವಾಸಪುರ ಪಟ್ಟಣದ ಜೆ.ಸಿ.ರಸ್ತೆಯ ಪುರಸಭೆ ವಾಣಿಜ್ಯ ಮಳಿಗೆಗಳಲ್ಲಿರುವ ರಜನಿ ಮೋಬೈಲ್ ಅಂಗಡಿಯಲ್ಲಿ ನಡೆದಿದ್ದು ಅದೃಷವತ್ ಪ್ರಾಣ ಹಾನಿಯಂತಹವು ನಡೆದಿಲ್ಲ ಸಮಯಕ್ಕೆ ಅಗ್ನಿ ಶಾಮಕ ದಳ ಕಾರ್ಯಚರಣೆ ನಡೆಸಿದ ಪರಿಣಾಮ ದೊಡ್ದ ಮಟ್ಟದ ನಷ್ಟ ಸಹ ಆಗಿರುವುದಿಲ್ಲ.
ಜೆ.ಸಿ.ರಸ್ತೆಯಲ್ಲಿರುವ ಪುರಸಭೆ ವಾಣಿಜ್ಯ ಮಳಿಗೆಗಳಲ್ಲಿ ಮಹಡಿ ಏರಲು ಇರುವಂತ ಮೆಟ್ಟಿಲ ಕೆಳಗೆ ಹಣ್ಣುಗಳ ಅಂಗಡಿಯ ಮರದ ಟೆಬಲ್ ಕೆಳಗೆ ಕೂತಿರುವ ಕಿಡಿಗೇಡಿಗಳು ಶನಿವಾರ ತಡ ರಾತ್ರಿ ಚಳಿಕಾಯಿಸಲು ಬೆಂಕಿಹಾಕಿದ್ದು ನಂತರ ಅದನ್ನು ನಿರ್ಲಕ್ಷಿಸಿ ಹೋಗಿದ್ದಾರೆ ಉರಿಯುತ್ತಿದ್ದ ಬೆಂಕಿ ರಜನಿ ಮೊಬೈಲ್ ಅಂಗಡಿಯ ಪ್ಲಾಸ್ಟಿಕ್ ಸೈನ್ ಬೋರ್ಡ್ ಗೆ ತಾಕಿ ಅಂಗಡಿ ಮುಂದಿನ ಎಲ್ಲಾ ಪ್ಲಾಸಟಿಕ್ ಬೋರ್ಡ್ ಗಳು ಸುಟ್ಟಿದೆ ಅಲ್ಲೆ ಹಾದು ಹೋಗಿರುವ ಬೆಸ್ಕಾಂ ಮೈನ್ ವಿದ್ಯತ್ ತಂತಿಗೂ ಹೊತ್ತಿಕೊಂಡು ಸುಟ್ಟಿದೆ ಎಂದು ಹೇಳಲಾಗಿದ್ದು ತಡ ರಾತ್ರಿಯಲ್ಲಿ ಬೆಂಕಿ ದೃಶ್ಯ ಕಂಡವರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ ಪರಿಣಾಮ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿರುತ್ತಾರೆ ಇದರಿಂದಾಗಿ ದೊಡ್ಡ ಮಟ್ಟದ ಅನಾಹುತ ತಪ್ಪಿರುತ್ತದೆ ಈ ಬಗ್ಗೆ ಶ್ರೀನಿವಾಸಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Sunday, June 7


