ನ್ಯೂಜ್ ಡೆಸ್ಕ್:- ಅಕ್ರಮವಾಗಿ ವಾಸಮಾಡುತ್ತಿದ್ದ ಬಾಂಗ್ಲಾದೇಶದ ಪ್ರಜೆಗಳಿಗೆ ಅಕ್ರಮವಾಗಿ ನಿವಾಸಿ ಪ್ರಮಾಣಪತ್ರವನ್ನು (residence certificate) ನೀಡಿದ ಆರೋಪದ ಮೇಲೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಒರ್ವ ಮಾಜಿ ಕೌನ್ಸಿಲರ್ ನನ್ನು ಬಂಧಿಸಲಾಗಿದೆ. ಈ ಪ್ರಮಾಣ ಪತ್ರದ ಅಧಾರದಲ್ಲಿ ಅಕ್ರಮ ಬಾಂಗ್ಲಾವಾಸಿಗಳು ಭಾರತದ ಮತದಾನದ ಗುರುತಿನ ಚೀಟಿ ಮತ್ತು ಇತರೇ ಭಾರತೀಯ ದಾಖಲೆಗಳನ್ನು ಪಡೆಯಲು ಸಹಾಯವಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವೀಸಾ ಅವಧಿ ಮುಗಿದ ಕಾರಣ ಬಾಂಗ್ಲಾದೇಶದ ನಾಗರಿಕ ನಯನ್ ಸರ್ಕಾರ್ ಮತ್ತು ಅವನ ಕುಟುಂಬದ ಸದಸ್ಯರು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಅಕ್ರಮವಾಗಿ ತಂಗಿದ್ದರು ಎಂದು ಪೊಲೀಸರು ಹೇಳಿದ್ದು ಮಾಜಿ ಕೌನ್ಸಿಲರ್ ಸಂಜಯ್ ಮೆಶಾಕ್ ಅವರು ನಯನ್ ಸರ್ಕಾರ್, ಮತ್ತು ಅವನ ಸಹೋದರ ಮತ್ತು ಪೋಷಕರಿಗೆ ನಿವಾಸಿ ಪ್ರಮಾಣಪತ್ರಗಳನ್ನು ಕೋಡಿಸಿರುತ್ತಾನೆ.
ಈ ಪ್ರಮಾಣಪತ್ರಗಳು ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್, ಆಧಾರ್ ಕಾರ್ಡ್ ಪಡೆಯಲು ಸಹಾಯ ಮಾಡಿದೆ. ಅಧಿಕೃತ ದಾಖಲೆಗಳಿಲ್ಲದೆ ಭಾರತದಲ್ಲಿ ಅಕ್ರಮವಾಗಿ ಉಳಿದುಕೊಂಡಿದ್ದಕ್ಕಾಗಿ ಸರ್ಕಾರ್ನನ್ನು ಪೊಲೀಸರು ಬಂಧಿಸಿದ್ದಾರೆ ಮತ್ತು ಸರ್ಕಾರ್ ಮತ್ತು ಅವರ ಕುಟುಂಬ ಸದಸ್ಯರಿಗೆ ನಿವಾಸಿ ಪ್ರಮಾಣಪತ್ರವನ್ನು ನೀಡಿದ ಆರೋಪದ ಮೇಲೆ ಮೆಶಾಕ್ನನ್ನು ಬಂಧಿಸಲಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅವರು ಹೇಳಲಾಗಿದೆ.
ಯಾವುದೇ ಬಾಂಗ್ಲಾದೇಶಿ ಕಾನೂನುಬಾಹಿರವಾಗಿ ದ್ವೀಪಗಳಲ್ಲಿ ಉಳಿದುಕೊಂಡಿರುವ ಬಗ್ಗೆ ಮಾಹಿತಿ ನೀಡುವಂತೆ ಪೊಲೀಸರು ಸಾರ್ವಜನಿಕರಿಗೆ ವಿನಂತಿಸಿದರು. ಅಲ್ಲದೆ ಹಾಗೆ ಮಾಹಿತಿ ನೀಡಿದ ಮಾಹಿತಿದಾರರ ಹೆಸರನ್ನು ರಹಸ್ಯವಾಗಿಡಲಾಗುವುದು ಎಂದು ಹೇಳಿರುತ್ತಾರೆ.
233307, 232586, 100, ನತ್ತು 9474290250 ದೂರವಾಣಿ ಸಂಖ್ಯೆಗೆ ಕರೆಮಾಡಿ ಅಥವಾ shoccs.and.nic.in. ಈ ಮೇಲ್ ಮೂಲಕ ಮಾಹಿತಿ ನೀಡಬಹುದಾಗಿದೆ. ಕೇಂದ್ರಾಡಳಿತ ಪ್ರದೇಶವಾದ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಿಂದ ಅಕ್ರಮವಾಗಿ ವಲಸೆ ಬಂದವರನ್ನು ಪತ್ತೆ ಹಚ್ಚಲು ಸಾರ್ವಜನಿಕರ ಸಹಕಾರ ಬಹಳ ಮುಖ್ಯ ಎಂದು ಸರ್ಕಾರದ ಪ್ರಕಟಣೆಯಲ್ಲಿ ತಿಳಿಸಿದೆ.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



