ಶ್ರೀನಿವಾಸಪುರ:-ರಾಜ್ಯದಲ್ಲಿ ರೈತರ ಬಡವರ ಪರವಾಗಿ ಇರುವಂತ ಜೆ.ಡಿ.ಎಸ್ ಪಕ್ಷ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಗ್ರಾಮೀಣಭಾಗದ ಯುವ ಕಾರ್ಯಕರ್ತರು ಸಂಘಟಿತರಾಗಿ ಕಾರ್ಯನಿರ್ವಹಿಸಿ ಪಕ್ಷವನ್ನು ಗೆಲ್ಲಿಸಿ ಕುಮಾರಸ್ವಾಮಿಯವರನ್ನು ಮುಖ್ಯಮಂತ್ರಿ ಮಾಡೋಣ ಎಂದು ಶ್ರೀನಿವಾಸಪುರದ ಮಾಜಿ ಶಾಸಕ ಹಾಗು ಕೋಲಾರ ಜಿಲ್ಲಾ ಜೆಡಿಎಸ್ ಅಧ್ಯಕ್ಷ ವೆಂಕಟಶಿವಾರೆಡ್ದಿ ಹೇಳಿದರು ಅವರು ಇಂದು ತಾಲೂಕಿನ ಕಸಬಾ ಹೋಬಳಿ ಗಾಂಡ್ಲಹಳ್ಳಿ ಗ್ರಾಮದಲ್ಲಿ ನಡೆದ ದಳಸನೂರು ಮತ್ತು ಮಾಸ್ತೇನಹಳ್ಲಿ ಪಂಚಾಯಿತಿ ಜೆಡಿಎಸ್ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಿ ಮಾತನಾಡಿದರು.
ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ವಿಶೇಷವಾಗಿ ರೈತರ ಸಾಲಮನ್ನಾ ಯೋಜನೆ ರೂಪಿಸಿ ಭಾರತದಲ್ಲಿ ಯಾರೂ ಮಾಡದಂತ ಅದ್ಭುತವಾದ ಕಾರ್ಯಕ್ರಮವನ್ನು ರೈತರಿಗೆ ನೀಡಿರುತ್ತಾರೆ ಎಂದರು.
ಭಗವಂತ ಕರುಣಿಸಿದ್ದು ವರುಣನ ಕೃಪೆಯಿಂದ ಕೋಲಾರ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗಿದೆ ನಮ್ಮ ತಾಲ್ಲೂಕಿನಲ್ಲೂ ಬಹುತೇಕ ಕೆರೆಗಳು ತುಂಬಿ ಕೋಡಿಹರಿಯುತ್ತಿದೆ ಎಂದ ಅವರು ರೈತ ಉತ್ತಮ ಬೆಳೆ ತಗೆದು ಸಂತೃಪ್ತ ಜೀವನ ನಡೆಸುವಂತಾಗಲಿ ಎಂದರು.
ಮುಳಬಾಗಿಲು ತಾಲೂಕು ಜೆ ಡಿ ಎಸ್ ಅಭ್ಯರ್ಥಿ ಸಮೃದ್ಧಿ ಮಂಜುನಾಥ್ ಮಾತನಾಡಿ ಮುಂಬರುವ ಜಿಲ್ಲಾಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆಗಳು ವಿಧಾನಸಭೆ ಚುನಾವಣೆಗೆ ದಿಕ್ಸೂಚಿಯಾಗುತ್ತದೆ ಆ ಹಿನ್ನಲೆಯಲ್ಲಿ ಕೋಲಾರ ಜಿಲ್ಲೆಯಲ್ಲಿ ಎಲ್ಲಾ ತಾಲೂಕು ಪಂಚಾತಿಗಳು ಮತ್ತು ಕೋಲಾರ ಜಿಲ್ಲಾ ಪಂಚಾಯಿತಿ ಜೆ ಡಿ ಎಸ್ ಅಧಿಕಾರ ಹಿಡಿಯುವ ನಿಟ್ಟಿನಲ್ಲಿ ಕಾರ್ಯಕರ್ತರು ಶ್ರಮಿಸುವಂತೆ ಹೇಳಿದರು.
ಇದೇ ಸಂದರ್ಭದಲ್ಲಿ ತಾಲ್ಲೂಕಿನ ಗಾಂಡ್ಲಹಳ್ಳಿ ಮತ್ತು ಶೆಟ್ಟಿಹಳ್ಳಿ ಕೆರೆಗಳಿಗೆ ಬಾಗಿನ ಅರ್ಪಿಸಿದರು
ಕಾರ್ಯಕ್ರಮದಲ್ಲಿ ಜಿಲ್ಲಾಪಂಚಾಯಿತಿ ಮಾಜಿ ಅಧ್ಯಕ್ಷ ತೂಪಲ್ಲಿನಾರಯಣಸ್ವಾಮಿ,ಮಾಜಿ ಸದಸ್ಯ ನಂಜುಂಡಪ್ಪ,ಎಂ.ಶ್ರೀನಿವಾಸನ್,ಮುಖಂಡರಾದ ಸಿ.ಎಂ.ಅರ್ ಶ್ರೀನಾಥ್,ಭಿಮಗುಂಟಪಲ್ಲಿಶಿವಾರೆಡ್ಡಿ, ಸಹಕಾರಿ ಧುರೀಣ ರಾಮಚಂದ್ರೇಗೌಡ, ನಾಗೇಶ್,ಬಿ.ವೆಂಕಟರೆಡ್ಡಿ,ದಳಸನೂರು ಮಂಜುನಾಥ್,ತೆರ್ನಹಳ್ಳಿಮಂಜು ಮುಂತಾದವರು ಇದ್ದರು.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Friday, April 24



