ಚಿಂತಾಮಣಿ:-ಚಿಂತಾಮಣಿ ತಾಲೂಕಿನ ಕೆಲ ಗ್ರಾಮಗಳಲ್ಲಿ ಭೂಕಂಪನ ಆಗಿದ್ದು ಜನತೆ ಬಯಭೀತರಾಗಿ ಮನೆಯಿಂದ ಹೊರಬಂದ ಘಟನೆ ಇಂದು ಮಂಗಳವಾರ ರಾತ್ರಿ ಸುಮಾರು 8.50 ಗಂಟೆ ಸಮಯದಲ್ಲಿ ನಡೆದಿರುತ್ತದೆ.
ಚಿಂತಾಮಣಿ ತಾಲೂಕಿನ ಕೆಂಚರ್ಲಾಹಳ್ಳಿ ಪೋಲಿಸ್ ಠಾಣೆ ವ್ಯಾಪ್ತಿಯ ಮಿಟ್ಟಹಳ್ಳಿ,ಅಪ್ಸಾನಹಳ್ಳಿ, ದೊಡ್ಡಹಳ್ಳಿ,ನಂದನಹಳ್ಳಿ, ಗೋನಿಪಲ್ಲಿ,ಅನಪಲ್ಲಿ,ರಾಸಪಲ್ಲಿ ಹಾಗು ಸುತ್ತುಮುತ್ತಲಿನ ಹಲವಾರು ಗ್ರಾಮಗಳಲ್ಲಿ ಭೂಮಿನಡುಗಿದ ಅನುಭವ ಆಗಿದೆ ಈ ಸಂದರ್ಭದಲ್ಲಿ ಮನೆಯಲ್ಲಿದ್ದ ಜನರು ಹೊರಗೆ ಬಂದಿರುತ್ತಾರೆ.ಕೆಲವು ಗ್ರಾಮಗಳಲ್ಲಿ ದೊಡ್ಡ ಸದ್ದಿನ ಕಂಪನ ನಡೆದರೆ ಇನ್ನೂ ಕೆಲವು ಗ್ರಾಮಗಳಲ್ಲಿ ಸಣ್ಣ ಪ್ರಮಾಣದಲ್ಲಿ ಭೂಮಿ ಕಂಪಿಸಿದೆ. ಆದರೆ ಯಾವುದೇ ಪ್ರಾಣ ಹಾನಿ ಆಗಿಲ್ಲ ಎನ್ನುತ್ತಾರೆ ಗ್ರಾಮಸ್ಥರು.
ಭೂಮಿಯ ಕಂಪನದಿಂದ ಮನೆಯಲ್ಲಿನ ಪಾತ್ರೆಗಳು ಅಲ್ಲಾಡಿ ಕೆಳಗೆ ಬಿದ್ದಿದ್ದು ಜನತೆ ಆತಂಕ ಗೊಂಡಿರುತ್ತಾರೆ. ಮನೆಯಿಂದ ಹೊರ ಬಂದ ಜನತೆ ರಸ್ತೆಗಳಲ್ಲಿ ನಿಂತು ಇದು ನಿಜನಾ ಅಥಾವ ಕನಸ ಎಂದು ಆತಂಕದಿಂದ ಪರಸ್ಪರ ಮುಟ್ಟಿನೊಡಿಕೊಂಡು ಅನಿಭವ ಹೇಳಿಕೊಳ್ಳುತ್ತಿದ್ದಾರೆ.
ಮನೆ ಮಂದಿಯಲ್ಲ ಮನೆಯಿಂದ ಹೊರ ಬಂದಿದ್ದು ಈಗ ಮತ್ತೆ ಮನೆಯ ಒಳಗೆ ಹೋಗಲು ಜನತೆಗೆ ಧೈರ್ಯವೇ ಇಲ್ಲವಂತೆ ಹೀಗೆಂದು ನಡು ರಸ್ತೆಯಲ್ಲೇ ನಿಂತ ಗ್ರಾಮಸ್ಥರು ಬೆಡ್ ಶೀಟ್ ಹೊದ್ದಿಕೊಂಡು ಬಿಳುತ್ತಿರುವ ಮಂಜಿನಲ್ಲೆ ನಡುಗುತ್ತ ಹೇಳುತ್ತಾರೆ.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Thursday, April 23



