ಚಿಂತಾಮಣಿ:-ಚಿಂತಾಮಣಿ ತಾಲೂಕಿನ ಕೆಲ ಗ್ರಾಮಗಳಲ್ಲಿ ಭೂಕಂಪನ ಆಗಿದ್ದು ಜನತೆ ಬಯಭೀತರಾಗಿ ಮನೆಯಿಂದ ಹೊರಬಂದ ಘಟನೆ ಇಂದು ಮಂಗಳವಾರ ರಾತ್ರಿ ಸುಮಾರು 8.50 ಗಂಟೆ ಸಮಯದಲ್ಲಿ ನಡೆದಿರುತ್ತದೆ.
ಚಿಂತಾಮಣಿ ತಾಲೂಕಿನ ಕೆಂಚರ್ಲಾಹಳ್ಳಿ ಪೋಲಿಸ್ ಠಾಣೆ ವ್ಯಾಪ್ತಿಯ ಮಿಟ್ಟಹಳ್ಳಿ,ಅಪ್ಸಾನಹಳ್ಳಿ, ದೊಡ್ಡಹಳ್ಳಿ,ನಂದನಹಳ್ಳಿ, ಗೋನಿಪಲ್ಲಿ,ಅನಪಲ್ಲಿ,ರಾಸಪಲ್ಲಿ ಹಾಗು ಸುತ್ತುಮುತ್ತಲಿನ ಹಲವಾರು ಗ್ರಾಮಗಳಲ್ಲಿ ಭೂಮಿನಡುಗಿದ ಅನುಭವ ಆಗಿದೆ ಈ ಸಂದರ್ಭದಲ್ಲಿ ಮನೆಯಲ್ಲಿದ್ದ ಜನರು ಹೊರಗೆ ಬಂದಿರುತ್ತಾರೆ.ಕೆಲವು ಗ್ರಾಮಗಳಲ್ಲಿ ದೊಡ್ಡ ಸದ್ದಿನ ಕಂಪನ ನಡೆದರೆ ಇನ್ನೂ ಕೆಲವು ಗ್ರಾಮಗಳಲ್ಲಿ ಸಣ್ಣ ಪ್ರಮಾಣದಲ್ಲಿ ಭೂಮಿ ಕಂಪಿಸಿದೆ. ಆದರೆ ಯಾವುದೇ ಪ್ರಾಣ ಹಾನಿ ಆಗಿಲ್ಲ ಎನ್ನುತ್ತಾರೆ ಗ್ರಾಮಸ್ಥರು.
ಭೂಮಿಯ ಕಂಪನದಿಂದ ಮನೆಯಲ್ಲಿನ ಪಾತ್ರೆಗಳು ಅಲ್ಲಾಡಿ ಕೆಳಗೆ ಬಿದ್ದಿದ್ದು ಜನತೆ ಆತಂಕ ಗೊಂಡಿರುತ್ತಾರೆ. ಮನೆಯಿಂದ ಹೊರ ಬಂದ ಜನತೆ ರಸ್ತೆಗಳಲ್ಲಿ ನಿಂತು ಇದು ನಿಜನಾ ಅಥಾವ ಕನಸ ಎಂದು ಆತಂಕದಿಂದ ಪರಸ್ಪರ ಮುಟ್ಟಿನೊಡಿಕೊಂಡು ಅನಿಭವ ಹೇಳಿಕೊಳ್ಳುತ್ತಿದ್ದಾರೆ.
ಮನೆ ಮಂದಿಯಲ್ಲ ಮನೆಯಿಂದ ಹೊರ ಬಂದಿದ್ದು ಈಗ ಮತ್ತೆ ಮನೆಯ ಒಳಗೆ ಹೋಗಲು ಜನತೆಗೆ ಧೈರ್ಯವೇ ಇಲ್ಲವಂತೆ ಹೀಗೆಂದು ನಡು ರಸ್ತೆಯಲ್ಲೇ ನಿಂತ ಗ್ರಾಮಸ್ಥರು ಬೆಡ್ ಶೀಟ್ ಹೊದ್ದಿಕೊಂಡು ಬಿಳುತ್ತಿರುವ ಮಂಜಿನಲ್ಲೆ ನಡುಗುತ್ತ ಹೇಳುತ್ತಾರೆ.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



