ಶ್ರೀನಿವಾಸಪುರ; ಶ್ರೀನಿವಾಸಪುರದ ಶಾಸಕ ರಮೇಶ್ ಕುಮಾರ್ ಆರು ಭಾರಿ ಶಾಸಕರಾಗಿ ಎರಡು ಭಾರಿ ಸ್ಪೀಕರ್ ಆಗಿ ಒಮ್ಮೆ ಸಚಿವರಾಗಿ ಸದಾ ಮೇಧಾವಿಯಂತೆ ಮಾತನಾಡುವ ರಾಜಕಾರಣಿ ಮಹಿಳೆಯರ ಕುರಿತಾಗಿ ಅವರಾಡಿರುವ ಮಾತು ಮಹಿಳೆಯರು ನೂವು ಉಣ್ಣುವಂತಾಗಿದೆ ಹಾಗೇ ತಾಲ್ಲೂಕಿನ ಜನತೆ ತಲೆ ತಗ್ಗಿಸುವಂತಾಗಿದೆ ಎಂದು ಕೋಲಾರ ಜಿಲ್ಲಾ ಬಿಜೆಪಿ ಅಧ್ಯಕ್ಷ ಡಾ.ವೇಣುಗೋಪಾಲ್ ಆರೋಪಿಸಿದರು.
ಶ್ರೀನಿವಾಸಪುರ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರು ರಮೇಶ್ ಕುಮಾರ್ ವಿರುದ್ದ ಹಮ್ಮಿಕೊಂಡಿದ್ದ ಪ್ರತಿಭಟನೆ ರ್ಯಾಲಿಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಮಹಿಳೆಯರ ಬಗ್ಗೆ ಇಷ್ಟೊಂದು ಲಘುವಾಗಿ ಮಾತನಾಡುವರು ಯಾವುದೇ ಕಾರಣಕ್ಕೂ ರಾಜಕಾರಣದಲ್ಲಿ ಮುಂದುವರೆಯಬಾರದು ಕೂಡಲೇ ರಾಜೀನಾಮೆ ನೀಡಿ ರಾಜಕೀಯ ವಿಶ್ರಾಂತಿ ಪಡೆಯಬೇಕೆಂದು ಒತ್ತಾಯಿಸಿದರು.
ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಅಮುದಾವೇಣು ಮಾತನಾಡಿ ಇತ್ತೀಚೆಗೆ ರಮೇಶ್ ಕುಮಾರ್ ಸದನದಲ್ಲಿ ಮಾತನಾಡುವಾಗ ನೈತಿಕ ಮೌಲ್ಯಗಳನ್ನು ಕಳೆದುಕೊಂಡು ಮಾತನಾಡುತ್ತ ಮಹಿಳೆಯರನ್ನು ಅಪಮಾನ ಮಾಡಿರುವುದು ಮಹಿಳಾಲೋಕ ಕಳಂಕ ಎದುರಿಸುವಂತಾಗಿದೆ.
ಮಹಿಳೆಯರ ಬಗ್ಗೆ ಅಗೌರವವಾಗಿ ನಡೆದುಕೊಳ್ಳುವವರಿಗೆ ಕಾನೂನು ಆ ಪದದ ಬಗ್ಗೆ ಮಾತನಾಡುವವರ ಮೇಲೂ ಅನ್ವಯಿಸುವಂತೆ ಸ್ವಯಂ ಪ್ರೇರಿತವಾಗಿ ಕೇಸು ದಾಖಲಾಗಬೇಕು ಎಂದು ಒತ್ತಾಯಿಸಿದರು.ರ್ಯಾಲಿಯಲ್ಲಿ ಜಿಲ್ಲಾ ವಕ್ತಾರ ಮುನಿವೆಂಕಟಪ್ಪ, ತಾಲ್ಲೂಕು ಅಧ್ಯಕ್ಷ ಅಶೋಕ್ ರೆಡ್ಡಿ, ಕಾರ್ಯದರ್ಶಿ ಶಿವಶಂಕರಗೌಡ ಪುರಸಭೆ ಸದಸ್ಯ ರಾಮಾಂಜಿ,ರಮೇಶ್,ಶಫಿ ಮಹಿಳಾ ಮೋರ್ಚಾ ಮುಖಂಡರು ಇದ್ದರು.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



