ಶ್ರೀನಿವಾಸಪುರ; ಶ್ರೀನಿವಾಸಪುರದ ಶಾಸಕ ರಮೇಶ್ ಕುಮಾರ್ ಆರು ಭಾರಿ ಶಾಸಕರಾಗಿ ಎರಡು ಭಾರಿ ಸ್ಪೀಕರ್ ಆಗಿ ಒಮ್ಮೆ ಸಚಿವರಾಗಿ ಸದಾ ಮೇಧಾವಿಯಂತೆ ಮಾತನಾಡುವ ರಾಜಕಾರಣಿ ಮಹಿಳೆಯರ ಕುರಿತಾಗಿ ಅವರಾಡಿರುವ ಮಾತು ಮಹಿಳೆಯರು ನೂವು ಉಣ್ಣುವಂತಾಗಿದೆ ಹಾಗೇ ತಾಲ್ಲೂಕಿನ ಜನತೆ ತಲೆ ತಗ್ಗಿಸುವಂತಾಗಿದೆ ಎಂದು ಕೋಲಾರ ಜಿಲ್ಲಾ ಬಿಜೆಪಿ ಅಧ್ಯಕ್ಷ ಡಾ.ವೇಣುಗೋಪಾಲ್ ಆರೋಪಿಸಿದರು.
ಶ್ರೀನಿವಾಸಪುರ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರು ರಮೇಶ್ ಕುಮಾರ್ ವಿರುದ್ದ ಹಮ್ಮಿಕೊಂಡಿದ್ದ ಪ್ರತಿಭಟನೆ ರ್ಯಾಲಿಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಮಹಿಳೆಯರ ಬಗ್ಗೆ ಇಷ್ಟೊಂದು ಲಘುವಾಗಿ ಮಾತನಾಡುವರು ಯಾವುದೇ ಕಾರಣಕ್ಕೂ ರಾಜಕಾರಣದಲ್ಲಿ ಮುಂದುವರೆಯಬಾರದು ಕೂಡಲೇ ರಾಜೀನಾಮೆ ನೀಡಿ ರಾಜಕೀಯ ವಿಶ್ರಾಂತಿ ಪಡೆಯಬೇಕೆಂದು ಒತ್ತಾಯಿಸಿದರು.
ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಅಮುದಾವೇಣು ಮಾತನಾಡಿ ಇತ್ತೀಚೆಗೆ ರಮೇಶ್ ಕುಮಾರ್ ಸದನದಲ್ಲಿ ಮಾತನಾಡುವಾಗ ನೈತಿಕ ಮೌಲ್ಯಗಳನ್ನು ಕಳೆದುಕೊಂಡು ಮಾತನಾಡುತ್ತ ಮಹಿಳೆಯರನ್ನು ಅಪಮಾನ ಮಾಡಿರುವುದು ಮಹಿಳಾಲೋಕ ಕಳಂಕ ಎದುರಿಸುವಂತಾಗಿದೆ.
ಮಹಿಳೆಯರ ಬಗ್ಗೆ ಅಗೌರವವಾಗಿ ನಡೆದುಕೊಳ್ಳುವವರಿಗೆ ಕಾನೂನು ಆ ಪದದ ಬಗ್ಗೆ ಮಾತನಾಡುವವರ ಮೇಲೂ ಅನ್ವಯಿಸುವಂತೆ ಸ್ವಯಂ ಪ್ರೇರಿತವಾಗಿ ಕೇಸು ದಾಖಲಾಗಬೇಕು ಎಂದು ಒತ್ತಾಯಿಸಿದರು.ರ್ಯಾಲಿಯಲ್ಲಿ ಜಿಲ್ಲಾ ವಕ್ತಾರ ಮುನಿವೆಂಕಟಪ್ಪ, ತಾಲ್ಲೂಕು ಅಧ್ಯಕ್ಷ ಅಶೋಕ್ ರೆಡ್ಡಿ, ಕಾರ್ಯದರ್ಶಿ ಶಿವಶಂಕರಗೌಡ ಪುರಸಭೆ ಸದಸ್ಯ ರಾಮಾಂಜಿ,ರಮೇಶ್,ಶಫಿ ಮಹಿಳಾ ಮೋರ್ಚಾ ಮುಖಂಡರು ಇದ್ದರು.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Thursday, April 23



