ಶ್ರೀನಿವಾಸಪುರ:ತಾಡಿಗೋಳ್ ಗ್ರಾಮ ಪಂಚಾಯಿತಿ ಉಪ ಚುನಾವಣೆಯಲ್ಲಿ ಗೆದ್ದ ಅಭ್ಯರ್ಥಿ ವಿಜಯೋತ್ಸವ ಆಚರಿಸುವ ಸಂದರ್ಭದಲ್ಲಿ ಎರಡು ಪಕ್ಷಗಳ ಕಾರ್ಯಕರ್ತರ ನಡೆವೆ ನಡೆದ ಗಲಭೆಯಲ್ಲಿ ಕಾರ್ಯಕರ್ತರುಗಳಿಗೆ ಗಾಯಗಳಾಗಿದ್ದು ಈ ಸಂಭಂದ ಪೋಲಿಸ್ ಠಾಣೆಯಲ್ಲಿ ದೂರುದಾಖಲಾಗಿದೆ.
ತಾಡಿಗೋಳ್ ಗ್ರಾಮದ ಪಂಚಾಯಿತಿ ಸದಸ್ಯ ಮಂಜುನಾಥ್ ಮೃತಪಟ್ಟ ಹಿನ್ನಲೆಯಲ್ಲಿ ಉಪಚುನಾವಣೆ ನಡೆದು ಇಂದು ನಡೆದ ಚುನಾವಣೆ ಮತ ಎಣಿಕೆಯಲ್ಲಿ ಜೆಡಿಎಸ್ ಅಭ್ಯರ್ಥಿ ಮಕ್ಬೂಲ್ ಬರಿದ್ 90 ಮತಗಳ ಅಂತರದಿಂದ ವಿಜೇತರಾಗಿ ವಿಜೆತ ಅಭ್ಯರ್ಥಿಯೊಂದಿಗೆ ಜೆಡಿಎಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಗ್ರಾಮದಲ್ಲಿ ವಿಜಯೋತ್ಸವ ಆಚರಿಸುವಾಗ ಗ್ರಾಮದ ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ಗಲಭೆ ನಡೆದು ತಳ್ಳಾಟ ನೂಕಾಟಗಳು ಆಗಿ ಪರಸ್ಪರ ಹೋಡೆದಾಡಿಕೊಂಡು ಪ್ರಕ್ಷುಬ್ದ ಪರಿಸ್ಥಿತಿ ನಿರ್ಮಾಣವಾಗಿದ್ದು ಪೋಲಿಸರು ಲಾಠಿ ಬೀಸಿ ಗಲಭೆಯನ್ನು ನಿಯಂತ್ರಿಸಿ ಗ್ರಾಮದಲ್ಲಿ ಜಿಲ್ಲಾ ಸಶಸ್ತ್ರ ಮೀಸಲು ಪಡೆ ನಿಯೋಜಿಸಲಾಗಿದ್ದು ಪರಿಸ್ಥಿತಿ ಹತೋಟಿಯಲ್ಲಿರುವುದಾಗಿ ಇನ್ಸೆಪೇಕ್ಟರ್ ರವಿಕುಮಾರ್ ತಿಳಿಸಿರುತ್ತಾರೆ. ಈ ಸಂಬಂಧ ಎರಡು ಪಕ್ಷದ ಕಾರ್ಯಕರ್ತರು ಶ್ರೀನಿವಾಸಪುರ ಠಾಣೆಯಲ್ಲಿ ದೂರು ದಾಖಲಿಸಿರುತ್ತಾರೆ.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



