ಶ್ರೀನಿವಾಸಪುರ: ಪ್ರೌಡಶಾಲಾ ವಿಧ್ಯಾರ್ಥಿಯ ಬೈಕ್ ವೀಲಿಂಗ್ ಹುಚ್ವಾಟಕ್ಕೆ ಏಳು ಮಂದಿ ವಿಧ್ಯಾರ್ಥಿಗಳು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿಸ್ಥೆ ಪಡೆಯುತ್ತಿದ್ದಾರೆ.
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದ KSRTC ಬಸ್ ಡಿಪೋ ಬಳಿ ಶ್ರೀನಿವಾಸಪುರದ ಪ್ರತಿಷ್ಟಿತ ವೇಣು ಶಾಲೆಯಲ್ಲಿ ಓದುತ್ತಿರುವ ಪ್ರೌಡಶಾಲಾ ವಿಧ್ಯಾರ್ಥಿ ಸೂರ್ಯ ತಾನು ತಂದಿದ್ದ ಪಲ್ಸರ್ ಬೈಕ್ ನಲ್ಲಿ ತನ್ನ ಇಬ್ಬರು ಸ್ನೇಹಿತರನ್ನು ಕೂರಿಸಿಕೊಂಡು ನಡು ರಸ್ತೆಯಲ್ಲಿ ಬೈಕ್ ವೀಲಿಂಗ್ ಮಾಡುತ್ತ ಸ್ಟಂಟ್ ಮಾಡಿಕೊಂಡು ಬೈಕ್ ಚಲಾಯಿಸಿಕೊಂಡು ಹೋಗಿರುತ್ತಾನೆ ಈ ಸಂದರ್ಭದಲ್ಲಿ ಆಯಾತಪ್ಪಿದ ಬೈಕ್ ರಸ್ತೆಯಲ್ಲಿ ಹೋಗುತ್ತಿದ್ದ ವಿಧ್ಯಾರ್ಥಿಗಳ ಮೇಲೆ ಹರಿದಿದೆ ಘಟನೆಯಿಂದ ಏಳು ವಿಧ್ಯಾರ್ಥಿನಿಯರು ಮತ್ತು ಬೈಕ್ ಸವಾರ ಸೂರ್ಯ ಹಾಗು ಹಿಂಬದಿ ಕುಳಿತಿದ್ದ ಇಬ್ಬರು ವಿಧ್ಯಾರ್ಥಿಗಳು ತೀವ್ರವಾಗಿ ಗಾಯಗೊಂಡು ಚಿಕಿತ್ಸೆಗಾಗಿ ಶ್ರೀನಿವಾಸಪುರ ಸರ್ಕಾರಿ ಆಸ್ಪತ್ರೆ ಹಾಗು ಖಾಸಗಿ ಆಸ್ಪತ್ರೆಗೆ ದಾಖಲಾಗಿರುತ್ತಾರೆ.
ಲಿಖಿತ ಎನ್ನುವ ವಿಧ್ಯಾರ್ಥಿನಿ ಸ್ಥಿತಿ ಗಂಭೀರವಾಗಿದ್ದು ಕೋಲಾರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ತಡರಾತ್ರಿ ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ರವಾನಿಸಿರುವುದಾಗಿ ಹೇಳಲಾಗಿದೆ.
ಘಟನ ಸ್ಥಳಕ್ಕೆ ಶ್ರೀನಿವಾಸಪುರ ಇನ್ಸ್ಪೇಕ್ಟರ್ ರವಿಕುಮಾರ್ ಭೇಟಿ ನೀಡಿ ಮಾಹಿತಿ ಪಡೆದು ಬೈಕ್ ಅನ್ನು ವಶಕ್ಕೆ ಪಡೆದಿರುತ್ತಾರೆ. ಈ ಸಂಬಂಧ ವಿಧ್ಯಾರ್ಥಿ ಸೂರ್ಯ ಪೋಷಕರ ವಿರುದ್ದ ದೂರುದಾಖಲಿಸುವುದಾಗಿ ಹೇಳಿರುತ್ತಾರೆ.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



