ಶ್ರೀನಿವಾಸಪುರ:- ಸಂತೇಗಳಲ್ಲಿ ಕುರಿ ವ್ಯಾಪಾರ ಮಾಡುತ್ತಿದ್ದ ಕುರಿ ವ್ಯಾಪಾರಸ್ಥನನ್ನು ಪಟ್ಟಣದ ಹೊರ ವಲಯದ ಮಾವಿನ ತೋಟದಲ್ಲಿ ಕತ್ತು ಕೊಯ್ದು ದಾರುಣವಾಗಿ ಹತ್ಯೆ ಮಾಡಿರುವ ಘಟನೆ ನಡೆದಿರುತ್ತದೆ.
ಹತ್ಯೆಯಾದ ವ್ಯಕ್ತಿಯನ್ನು ತಾಲೂಕಿನ ಕಸಬಾ ಹೋಬಳಿ ಗುಂಡಮನತ್ತ ಗ್ರಾಮದ ಮುನಿಶಾಮಿ(65) ಎಂದು ಗುರುತಿಸಲಾಗಿದೆ ಸಂತೇಗಳಲ್ಲಿ ಕುರಿ ವ್ಯಾಪಾರ ಮಾಡುತ್ತಿದ್ದು ವ್ಯಕ್ತಿಯ ಜೇಬಿನಲ್ಲಿ ಸದಾಕಾಲ ಹತ್ತಾರು ಸಾವಿರ ನಗದು ಇರುತಿತ್ತು ಎಂದು ಹೇಳಲಾಗಿದೆ.
ಇಂದು ಗುಂಡಮನತ್ತ ಗ್ರಾಮದ ಮನೆಯಿಂದ ಹೊರಟ ಮುನಿಶಾಮಿ ಮಧ್ಯಾಹ್ನ ಹೊತ್ತಿಗೆ ಬಸ್ ನಿಲ್ದಾಣದ ಬಳಿಯಿಂದ ತಮ್ಮ ಬಂಧು ಯುವಕನ ದ್ವಿಚಕ್ರ ವಾಹನದಲ್ಲಿ ಚಿಂತಾಮಣಿ ವೃತ್ತಕ್ಕೆ ಡ್ರಾಪ್ ಪಡೆದುಕೊಂಡಿದ್ದಾರೆ ನಂತರ ಏನಾಯಿತು ಎಂಬ ಮಾಹಿತಿ ಯಾರಿಗೂ ಇಲ್ಲ ನಂತರ ಸಂಜೆ ಹೊತ್ತಿಗೆ ಪಟ್ಟಣದ ಹೊರ ವಲಯದಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಹಾಗು ಇಂದಿರಾ ನಗರದ ಹಿಂಬಾಗದ ನೂರ್ ಎಂಬುವರ ಮಾವಿನ ತೋಟದಲ್ಲಿ ಶವವಾಗಿ ಪತ್ತೆಯಾಗಿದ್ದು ಹಂತಕರು ಆತನ ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಿರುವ ಸುದ್ದಿ ಹೊರಬಿದ್ದಿದೆ ಈ ಬಗ್ಗೆ ಮಾಹಿತಿ ಪಡೆದ ಪೋಲಿಸರು ಮುಳಬಾಗಿಲು ಡಿ.ವೈ.ಎಸ್.ಪಿ ಗಿರಿ ಹಾಗು ಪೋಲಿಸ್ ಇನ್ಸ್ ಪೇಕ್ಟರ್ ರವಿಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಶೀಲನೆ ನಡೆಸಿರುತ್ತಾರೆ. ಮೃತನ ಮಗ ಗೋಪಾಲ್ ಈ ಸಂಬಂಧ ಶ್ರೀನಿವಾಸಪುರ ಠಾಣೆಯಲ್ಲಿ ದೂರು ದಾಖಲಿಸಿರುತ್ತಾನೆ.
ಹತ್ಯೆಯಾದ ಸ್ಥಳಕ್ಕೆ ಪೋಲಿಸ್ ಶ್ವಾನಗಳನ್ನು ಕರೆಯಿಸಿದ್ದು ಶ್ವಾನಗಳು ಹತ್ಯೆಯಾದ ಜಾಗದಿಂದ ತೋಟಗಳ ಮದ್ಯೆ ಹಾದು ಚಿಂತಾಮಣಿ-ಕೋಲಾರ ರಸ್ತೆಗಳ ನಡುವಿನ ಬೈಪಾಸ್ ರಸ್ತೆಯಲ್ಲಿ ಸಾಗಿ ಮುಂದೆ ನಂಬಿಹಳ್ಳಿ ಗೆಟ್ ಬಳಿಯವರಿಗೂ ಹೋಗಿ ವಾಪಸ್ಸಾಗಿವೆ.
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Monday, April 28