ಶ್ರೀನಿವಾಸಪುರ:- ತಾಲೂಕಿನ ಕೆಲ ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು ನಿಗದಿತ ಅವಧಿಯಲ್ಲಿ ಕೆಲಸ ಮಾಡಿಕೊಡದೆ ರೈತರನ್ನು ಕಚೇರಿಗಳಿಗೆ ಅಲೆದಾಡಿಸುತ್ತ ಹಣ ಪೀಕಲು ಸಬೂಬು ಹೇಳುತ್ತ ಸತಾಯಿಸುತ್ತಿದ್ದಾರೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆ ಕಾರ್ಯಕರ್ತರು ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಉಪತಹಶೀಲ್ದಾರ್ ಮೂಲಕ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ರೈತ ಸಂಘದ ರಾಜ್ಯ ಕಾರ್ಯದರ್ಶಿ ವೀರಬದ್ರಸ್ವಾಮಿ ಮಾತನಾಡಿ ಕಂದಾಯ ಇಲಾಖೆ.ತೋಟಗಾರಿಕೆ ಇಲಾಖೆ,ಕೃಷಿ ಇಲಾಖೆ ತಾಲೂಕು ಪಂಚಾಯಿತಿ, ರೇಷ್ಮೇ ಇಲಾಖೆಗಳಲ್ಲಿ ರೈತರ ಮತ್ತು ಸಾರ್ವಜನಿಕರಿಗೆ ಸ್ಪಂದನೆ ಇಲ್ಲ ಸಣ್ಣ ಕೆಲಸವಾದರೂ ಕನಿಷ್ಟ ಎರಡು ಮೂರು ತಿಂಗಳುಗಳ ಕಾಲ ಕಚೇರಿಗಳಿಗೆ ಅಲೆದಾಡಿಸುತ್ತಾರೆ ಇಲ್ಲವಾದರೆ ಲಂಚ ಕೇಳುತ್ತಾರೆ ಇದರಿಂದ ತಾಲೂಕು ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ ಎಂದು ನೇರವಾಗಿ ಆರೋಪಿಸಿದರು.
ತಾಲೂಕು ಸಂಘದ ಅಧ್ಯಕ್ಷ ನಂಬಿಹಳ್ಳಿಶ್ರೀರಾಮರೆಡ್ಡಿ ಮಾತನಾಡಿ ಭೂದಾಖಲಾತಿ ಮತ್ತು ಸರ್ವೆ ಇಲಾಖೆಗಳಲ್ಲಿ ಅಧಿಕಾರಿಗಳು ದುಡ್ಡಿಗೆ ಪ್ರಾಮುಖ್ಯತೆ ಹೆಚ್ಚು ನೀಡುತ್ತಾರೆ ಎಂದ ಅವರು ತಾಲೂಕಿನ ಆಡಳಿತ ವ್ಯವಸ್ಥೆಯಲ್ಲಿನ ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ತೊಡಗಿದ ಪರಿಣಾಮ ತಾಲೂಕಿನಲ್ಲಿ ಆಡಳಿತ ಯಂತ್ರ ಸಂಪೂರ್ಣವಾಗಿ ಕುಸದಿದೆ ಈ ಬಗ್ಗೆ ಜಿಲ್ಲಾಧಿಕಾರಿಗಳು ತಾಲೂಕಿಗೆ ಖುದ್ದು ಭೇಟಿ ನೀಡಿ ಪರಶೀಲನೆ ಮಾಡಬೇಕು ಭ್ರಷ್ಟಾಚಾರದಲ್ಲಿ ತೊಡಗಿರುವ ಅಧಿಕಾರಿಗಳ ವಿರುದ್ದ ಕ್ರಮ ಜರಿಗಿಸುವಂತೆ ಮತ್ತು ರೈತರ ಮತ್ತು ಸಾರ್ವಜನಿಕರ ಕೆಲಸ ಕಾರ್ಯಗಳು ಸುಗಮವಾಗಿ ನಡೆಯಲು ಅನಕೂಲ ವಾತವರಣ ನಿರ್ಮಿಸುವಂತೆ ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ರೈತ ಸಂಘ ಜಿಲ್ಲಾಧ್ಯಕ್ಷ ರಾಮೇಗೌಡ, ಬೈರಾರೆಡ್ಡಿ, ಗಂಗಾಧರ್,ನರಸಿಂಹಯ್ಯ ಶ್ರೀಧರ್,ಅಸ್ಲಾಂ ಪಾಷ ರಾಮಕೃಷ್ಣ ಮುಂತಾದವರು ಇದ್ದರು
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



