ಶ್ರೀನಿವಾಸಪುರ: ಪಾಲ್ಗುಣ ಮಾಸದ ಹುಣ್ಣಿಮೆಯಂದು ತಾಲೂಕಿನ ಬಹುತೇಕ ಕಡೆ ರಟೋತ್ಸವಗಳು ನಡೆಯುವುದು ಇಲ್ಲಿನ ಆಚರಣೆ ಪ್ರಮುಖವಾಗಿ ಶ್ರೀನಿವಾಸಪುರದ ಪಟ್ಟಣದ ಪ್ರಸಿದ್ದ ಶ್ರೀ ವರದ ಬಾಲಾಂಜನೇಯ ಕ್ಷೇತ್ರದಲ್ಲಿ ಸಂಭ್ರಮದಿಂದ ರಥೋತ್ಸವ ನಡೆಯಿತು.ಕಳೆದ ಎರಡು ವರ್ಷಗಳಿಂದ ರಥೋತ್ಸವ ನಡೆದಿರಲಿಲ್ಲ ಈ ವರ್ಷ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ರಥೋತ್ಸವದಲ್ಲಿ ಪಾಲ್ಗೋಂಡಿದ್ದು ವಿಶೇಷವಾಗಿತ್ತು. ವೈಖಾನಸ ಆಗಮ ಶಾಸ್ತ್ರಙ್ಞ ಶೇಷಾದ್ರಿ ಅವರ ನೇತೃತ್ವದಲ್ಲಿ ಕಲ್ಯಾಣೋತ್ಸವ,ರಥೋತ್ಸವ ಕಾರ್ಯಕ್ರಮಗಳು ನಡೆಯಿತು.
ರಥೋತ್ಸವ ಕಾರ್ಯಕ್ರಮದಲ್ಲಿ ಶ್ರೀ ವರದ ಬಾಲಾಂಜನೇಯ ಕ್ಷೇತ್ರದ ಸಂಚಾಲಕ ಗೋಫಿನಾಥರಾವ್ ಶಾಸಕ ರಮೇಶ್ ಕುಮಾರ್,ಮಾಜಿ ಶಾಸಕ ವೆಂಕಟಶಿವಾರೆಡ್ಡಿ, ಇತಿಹಾಸ ತಜ್ಞ ಪ್ರೊ.ನರಸಿಂಹನ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ತೂಪಲ್ಲಿನಾರಯಣಸ್ವಾಮಿ, ಹಳೇಪೇಟೆ ಮಂಜು ಮುಂತಾದವರು ಪಾಲ್ಗೋಂಡಿದ್ದರು.
ನಂಬಿಹಳ್ಳಿ ರಥೋತ್ಸವ
ತಾಲೂಕಿನ ನಂಬಿಹಳ್ಳಿಯ ಕೇಂದ್ರವಾಗಿ ಸುತ್ತಲಿನ ಐದು ಗ್ರಾಮಗಳಲ್ಲಿ ಪಂಚಲಿಂಗ ಕ್ಷೇತ್ರಗಳು ಇಲ್ಲಿದ್ದು ಶ್ರೀ ಪ್ರಸನ್ನ ಸೋಮೇಶ್ವರ ಈ ಭಾಗದಲ್ಲಿ ವಿಶೇಷ ಖ್ಯಾತಿ.ಐತಿಹಾಸಿಕ ಶ್ರೀ ಪ್ರಸನ್ನ ಸೋಮೇಶ್ವರ ದೇವರ ರಥೋತ್ಸವ ನಡೆಯಿತು ಇದರ ಅಂಗವಾಗಿ ಜನ ಜಾತ್ರೆ ನಡೆಯಿತು
ತಾಲೂಕಿನ ಕೋಟಬಲ್ಲಪಲ್ಲಿ ಶ್ರೀಲಕ್ಷ್ಮೀನರಸಿಂಹ ದೇವರ ರಥೋತ್ಸವ ನಡೆಯಿತು ಅರ್ಚಕ ಅರುಣ್ ಕುಮಾರ್, ರಥೋತ್ಸವ ಕಾರ್ಯಕ್ರಮ ನಡೆಸಿಕೊಟ್ಟರು.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



