ಶ್ರೀನಿವಾಸಪುರ: ತಾಲ್ಲೂಕಿನ ಕಸಬಾ ಹೋಬಳಿ ಕಿರುವಾರ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶ್ರೀ ಕೋದಂಡರಾಮ ದೇವರ ದೇವಾಲಯ ಪುನರ್ ಬಿಂಬ ಪ್ರತಿಷ್ಠಾಪನೆ ಕಾರ್ಯಕ್ರಮ ಮಾ.20 ಮತ್ತು ಮಾ21 ರಂದು ಭಾನುವಾರ ಹಾಗು ಸೋಮವಾರ ಎರಡು ದಿನಗಳ ಕಾಲ ನಡೆಯುವ ಕಾರ್ಯಕ್ರಮದಲ್ಲಿ ಶ್ರೀಗಣಪತಿ, ಶ್ರೀ ಸುಬ್ರಹ್ಮಣ್ಯಸ್ವಾಮಿ ಸೇರಿದಂತೆ ಪರಿವಾರ ಸಮೇತ ಶ್ರೀ ಕೋದಂಡರಾಮ ದೇವರುಗಳ ಸ್ಥಿರಬಿಂಬ ಪ್ರತಿಷ್ಠಾಪನಾ ಕಾರ್ಯಕ್ರಮ ಗ್ರಾಮ ದೇವತೆ ಅನುಗ್ರಹದೊಂದಿಗೆ ಮಾ.20ರಂದು ಭಾನುವಾರ ಸಂಜೆ ಪ್ರಾರಂಭವಾಗಲಿದ್ದು ಮಾ21 ರಂದು ಸೋಮವಾರದ ವರಿಗೂ ನಡೆಯುತ್ತವೆ ಭಾನುವಾರ ಗಣಪತಿ ಪೂಜೆ, ಪುನ್ಯಾಹವಾಚನ, ಪ್ರಾಯಶ್ಚಿತ ಸಂಕಲ್ಪ, ರಕ್ಷಾಬಂದನ, ಮೃತ್ಸಂಗ್ರಹಣ, ಅಂಕುರಾರ್ಪಣೆ, ಕಳಶಾರಾಧನೆ, ಅಗ್ನಿ ಪ್ರತಿಷ್ಟೆ ,ನಡೆಯಲಿದೆ.ಸೋಮವಾರ ಮುಂಜಾನೆ ವೇದ ಪಾರಾಯಣ, ವೇದಿಕಾರ್ಚನೆ, ಮಂತ್ರನ್ಯಾಸ, ನಾಡಿಸಂಧಾನ, ಗಣಪತಿ, ಕಳಾ ಹೋಮ, ಗೋದದರ್ಶನ, ದೇವತಾರ್ಚನೆ ನಂತರ ದೇವಾಲಯ ಲೋಕಾರ್ಪಣೆ ಆಗಲಿದೆ. ದೇವಾಲಯದ ಪೂಜಾ ಕಾರ್ಯಕ್ರಮಗಳನ್ನು ಪ್ರಧಾನ ಆರ್ಚಕರಾದ ಶ್ರೀನಿವಾಸಾಚಾರ್, ಗನಿಬಂಡೆ ಶ್ರೀನಿವಾಸ ದೇವಾಲಯದ ಖ್ಯಾತ ಅರ್ಚಕರಾದ ಶ್ರೀನಾಥ್ ಚಾರ್, ಆರಿಕುಂಟೆ ರಾಜಗೋಪಾಲಾಚಾರ್ ನಡೆಸಿಕೊಡಲಿದ್ದಾರೆ.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Thursday, April 23



