ಕಾಶ್ಮೀರಿ ಪಂಡಿತರು ಅನುಭವಿಸಿದ ನರಕಯಾತನೆಯ ಕಥೆ ಆಧಾರಿತ ಸಿನಿಮಾ ‘ದಿ ಕಾಶ್ಮೀರ್ ಫೈಲ್ಸ್’ ದೊಡ್ಡ ಯಶಸ್ಸು ಕಂಡಿದೆ ವಿಮರ್ಶಕರ ಟೀಕೆಗಳ ಹೊರತಾಗಿಯೂ, ಬಹುಪಾಲು ಚಲನಚಿತ್ರ ಗಣ್ಯರು ಮತ್ತು ಪ್ರೇಕ್ಷಕರು ಚಿತ್ರವನ್ನು ನಿರ್ಮಿಸಿದ ನಿರ್ದೇಶಕ ಮತ್ತು ನಿರ್ಮಾಪಕರ ಬಗ್ಗೆ ಪ್ರಶಂಸೆಯ ಸುರಿಮಳೆಗೈದಿರುತ್ತಾರೆ. ಈ ನಿಟ್ಟಿನಲ್ಲಿ ತೆಲಗು ನಟ ಪವರ್ ಸ್ಟಾರ್ ಪವನ್ ಕಲ್ಯಾಣ್ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರ ನಿರ್ಮಾಪಕರನ್ನು ಹೊಗಳಿದ್ದಾರೆ. ಪ್ರಮುಖ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರು 1990 ರ ದಶಕದಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಂಸಾತ್ಮಕ ದಂಗೆ, ಗಲಭೆಗಳು ಮತ್ತು ಕಾಶ್ಮೀರಿ ಹಿಂದೂಗಳ ಮೇಲಿನ ದಾಳಿ ದೌರ್ಜನ್ಯಗಳ ಕುರಿತಾಗಿ “ದಿ ಕಾಶ್ಮೀರ್ ಫೈಲ್ಸ್” ಎಂಬ ಚಲನಚಿತ್ರ ನಿರ್ಮಾಣ ಮಾಡಿದ್ದು ಇದರ ನಿರ್ಮಾಪಕ ಅಭಿಷೇಕ್ ಅಗರ್ವಾಲ್ ಅವರು ನಿರ್ದೇಶಕ ಹರೀಶ್ ಶಂಕರ್ ಜೊತೆಗೂಡಿ ಪವರ್ ಸ್ಟಾರ್ ಪವನ್ ಕಲ್ಯಾಣ್ ಅವರನ್ನು ಭೇಟಿಯಾಗಿದ್ದರು ಈ ಸಂದರ್ಭದಲ್ಲಿ ಚಿತ್ರದ ಅದ್ಧೂರಿ ಯಶಸ್ಸಿಗೆ ನಿರ್ಮಾಪಕ ಅಭಿಷೇಕ್ ಅಗರ್ವಾಲ್ ಅವರನ್ನು ಪವನ್ ಕಲ್ಯಾಣ್ ಅಭಿನಂದಿಸಿದ್ದಾರೆ.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



