ಕಾಶ್ಮೀರಿ ಪಂಡಿತರು ಅನುಭವಿಸಿದ ನರಕಯಾತನೆಯ ಕಥೆ ಆಧಾರಿತ ಸಿನಿಮಾ ‘ದಿ ಕಾಶ್ಮೀರ್ ಫೈಲ್ಸ್’ ದೊಡ್ಡ ಯಶಸ್ಸು ಕಂಡಿದೆ ವಿಮರ್ಶಕರ ಟೀಕೆಗಳ ಹೊರತಾಗಿಯೂ, ಬಹುಪಾಲು ಚಲನಚಿತ್ರ ಗಣ್ಯರು ಮತ್ತು ಪ್ರೇಕ್ಷಕರು ಚಿತ್ರವನ್ನು ನಿರ್ಮಿಸಿದ ನಿರ್ದೇಶಕ ಮತ್ತು ನಿರ್ಮಾಪಕರ ಬಗ್ಗೆ ಪ್ರಶಂಸೆಯ ಸುರಿಮಳೆಗೈದಿರುತ್ತಾರೆ. ಈ ನಿಟ್ಟಿನಲ್ಲಿ ತೆಲಗು ನಟ ಪವರ್ ಸ್ಟಾರ್ ಪವನ್ ಕಲ್ಯಾಣ್ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರ ನಿರ್ಮಾಪಕರನ್ನು ಹೊಗಳಿದ್ದಾರೆ. ಪ್ರಮುಖ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರು 1990 ರ ದಶಕದಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಂಸಾತ್ಮಕ ದಂಗೆ, ಗಲಭೆಗಳು ಮತ್ತು ಕಾಶ್ಮೀರಿ ಹಿಂದೂಗಳ ಮೇಲಿನ ದಾಳಿ ದೌರ್ಜನ್ಯಗಳ ಕುರಿತಾಗಿ “ದಿ ಕಾಶ್ಮೀರ್ ಫೈಲ್ಸ್” ಎಂಬ ಚಲನಚಿತ್ರ ನಿರ್ಮಾಣ ಮಾಡಿದ್ದು ಇದರ ನಿರ್ಮಾಪಕ ಅಭಿಷೇಕ್ ಅಗರ್ವಾಲ್ ಅವರು ನಿರ್ದೇಶಕ ಹರೀಶ್ ಶಂಕರ್ ಜೊತೆಗೂಡಿ ಪವರ್ ಸ್ಟಾರ್ ಪವನ್ ಕಲ್ಯಾಣ್ ಅವರನ್ನು ಭೇಟಿಯಾಗಿದ್ದರು ಈ ಸಂದರ್ಭದಲ್ಲಿ ಚಿತ್ರದ ಅದ್ಧೂರಿ ಯಶಸ್ಸಿಗೆ ನಿರ್ಮಾಪಕ ಅಭಿಷೇಕ್ ಅಗರ್ವಾಲ್ ಅವರನ್ನು ಪವನ್ ಕಲ್ಯಾಣ್ ಅಭಿನಂದಿಸಿದ್ದಾರೆ.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



