ಶ್ರೀನಿವಾಸಪುರ : ತಾಲೂಕಿನ ಉತ್ತರ ಭಾಗದ ವಾಣಿಜ್ಯಪೇಟೆ ಎಂದು ಖ್ಯಾತಿ ಪಡೆದು ಪ್ರತಿಷ್ಟಿತ ಪಂಚಾಯಿತಿಯಾಗಿ ಗುರುತಿಸಿಕೊಂಡಿರುವ ಗೌನಿಪಲ್ಲಿ ಗ್ರಾ.ಮಪಂಚಾಯಿತಿ ಎರಡನೆಯ ಅವಧಿಯ ಅಧ್ಯಕ್ಷ ಗಾದಿ ಚುನಾವಣೆಯಲ್ಲಿ ಜೆಡಿಎಸ್ನ ಬೆಂಬಲಿತ ಅಭ್ಯರ್ಥಿ ಶೇಷಾದ್ರಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
23 ಸದಸ್ಯರ ಗೌನಿಪಲ್ಲಿ ಪಂಚಾಯಿತಿಯಲ್ಲಿ ಜೆಡಿಎಸ್ ಬೆಂಬಲಿತ 14 ಸದಸ್ಯರು, ಕಾಂಗ್ರೆಸ್ ಬೆಂಬಲಿತ 9 ಸದಸ್ಯರಿದ್ದು, ಜೆಡಿಎಸ್ ಅಧಿಕಾರದಲ್ಲಿದ್ದ ಪಂಚಾಯಿತಿಯಲ್ಲಿ ಹಿಂದಿನ ಅಧ್ಯಕ್ಷರ ರಾಜಿನಾಮೆ ಯಿಂದ ತೆರವಾದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು, ಜೆಡಿಎಸ್ ಬೆಂಬಲಿತ ಅಭ್ಯರ್ಥಿಯಾಗಿ ಶೇಷಾದ್ರಿ, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಕೆ.ಎಂ ಮುನಿರಾಜು ಸ್ಪರ್ದಿಸಿದ್ದರು ಜೆಡಿಎಸ್ ಶೇಷಾದ್ರಿ 14 ಮತಗಳನ್ನು ಪಡೆದು ಜಯಶೀಲರಾಗಿದ್ದಾರೆ.
ಚುನಾವಣಾ ಅಧಿಕಾರಿಯಾಗಿ ಜಿಲ್ಲಾಪಂಚಾಯಿತಿ ಇಂಜನಿಯರ್ ವಿಭಾಗದ ಎಇಇ ನಾರಾಯಣಸ್ವಾಮಿ ಕಾರ್ಯನಿರ್ವಹಿಸಿದ್ದು ಪಿಡಿಒ ಗೌಸ್ ಪಾಷ ಇದ್ದರು.
ನೂತನ ಅಧ್ಯಕ್ಷನಿಗೆ ಮಾಜಿ ಶಾಸಕ ವೆಂಕಟಶಿವಾರೆಡ್ಡಿಯಿಂದ ಶುಭಾಶಯ.
ಜೆಡಿಎಸ್ ಜಿಲ್ಲಾ ಅಧ್ಯಕ್ಷ ಮಾಜಿ ಶಾಸಕ ವೆಂಕಟಶಿವಾರೆಡ್ಡಿ ನೂತನ ಅಧ್ಯಕ್ಷರಿಗೆ ಶುಭ ಕೋರಿ ಮಾತನಾಡಿ ಗ್ರಾಮ ಪಂಚಾಯಿತಿಯಲ್ಲಿ ಪಕ್ಷಾತೀತವಾಗಿ ಕಾರ್ಯನಿರ್ವಸಿ ಜನಸಾಮಾನ್ಯರಿಗೆ ಪ್ರಾಮಾಣಿಕ ಸೇವೆ ನೀಡಿ ಜನಸ್ನೇಹಿ ಅಡಳಿತ ನೀಡುವಂತೆ ಹೇಳಿದರು.
ಈ ಸಂದರ್ಭದಲ್ಲಿ ಜಿ.ಪಂ. ಮಾಜಿ ಅಧ್ಯಕ್ಷ ತೂಪಲ್ಲಿನಾರಾಯಣಸ್ವಾಮಿ, ಮಾಜಿ ಸದಸ್ಯ ಜಿ.ಕೆ.ನಾಗರಾಜ್ ಮುಖಂಡರಾದ ಭೀಮಗುಂಟಪಲ್ಲಿಶಿವಾರೆಡ್ಡಿ, ಎಂ.ರಾಮಮೋಹನ್, ಕೆ.ರಾಜೇಂದ್ರಪ್ರಸಾದ್,ಬುರುಜ ಕೃಷ್ಣಾರೆಡ್ಡಿ, ಎಂ.ಎಸ್.ಶಂಕರಪ್ಪ, ಅಬ್ಬು, ವಿ.ಶ್ರೀನಿವಾಸ್,ಶಾಕೀರ್,ಗ್ರಾ.ಪಂ ಸದಸ್ಯರಾದ ಬಕ್ಷುಸಾಬ್,ವೆಂಕಟಶಿವಾರೆಡ್ಡಿ,ಮಾಜಿ ಅಧ್ಯಕ್ಷೆ ಅರುಣ ರವಿಕುಮಾರ್ ಮುಂತಾದವರು ಇದ್ದರು.
ಜೆಡಿಎಸ್ ಎಚ್ಚರಿಕೆಯ ನಡೆ
ಯಲ್ದೂರು ಹಾಗು ಲಕ್ಷ್ಮೀಸಾಗರ ಪಂಚಾಯಿತಿ ಅಧ್ಯಕ್ಷ ಚುನಾವಣೆಯಲ್ಲಿ ಆದಂತ ಅಡ್ದ ಪರಿಣಾಮಗಳಿಂದ ಎಚ್ಚೆತ್ತುಕೊಂಡಿರುವ ತಾಲೂಕು ಜೆಡಿಎಸ್ ಟೀಂ ಗೌನಿಪಲ್ಲಿ ಪಂಚಾಯಿತಿ ಅಧ್ಯಕ್ಷ ಚುನಾವಣೆಯಲ್ಲಿ ಜಾಗರುಕತೆಯಿಂದ ಚುನಾವಣೆ ಪ್ರಕ್ರಿಯೆಗಳ ನಡೆ ಅನುಸರಿಸಿ ಅಧಿಕಾರ ಉಳಿಸಿಕೊಂಡಿದೆ.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Monday, June 8



