ಶ್ರೀನಿವಾಸಪುರ:ಕಲ್ಲೂರಿನ ಗ್ರಾಮದೇವತೆ ಚೌಡೇಶ್ವರಿದೇವಿ ದರ್ಶನ ಪಡೆದು ಪುನೀತನಾದೆ ಅಮ್ಮನ ದರ್ಶನದಿಂದ ನೆಮ್ಮದಿ ಸಿಕ್ಕಿದಂತಾಗಿದೆ ಇದು ನನ್ನ ಪುಣ್ಯ ಎಂದು ತೋಟಗಾರಿಕೆ ಹಾಗು ಕೋಲಾರ ಜಿಲ್ಲೆ ಉಸ್ತವಾರಿ ಸಚಿವ ಮುನಿರತ್ನ ಹೇಳಿದರು ಅವರು ತಾಲೂಕಿನ ಕಸಬಾ ಹೋಬಳಿ ಕಲ್ಲೂರು ಗ್ರಾಮಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಮಾತನಾಡಿ ನವೀಕರಣವಾಗುತ್ತಿರುವ ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ ಬೇಕಾದ ರಸ್ತೆ, ಹೈಮಾಸ್ಕ್ ಲೈಟ್ ಸೇರಿದಂತೆ ಮೂಲಭೂತ ಸೌಲಭ್ಯಗಳ ವ್ಯವಸ್ಥೆ ಮಾಡಿಕೊಡುವ ಭರವಸೆ ನೀಡಿದರು.
ಬೆಂಗಳೂರಿನಲ್ಲಿ ಖ್ಯಾತರಾಗಿರುವ ಎಂಡೋಕ್ರೈನಾಲಜಿ ತಜ್ಞ ವೈದ್ಯ ಕಲ್ಲೂರು ಮೂಲದ ಡಾ.ಸೋಮಶೇಖರರೆಡ್ಡಿ ನಮ್ಮ ಕುಟುಂಬಕ್ಕೆ ಆಪ್ತರು ಅವರು ನೀಡಿದ ಆಹ್ವಾನದ ಮೇರೆಗೆ ಇಂದು ಗ್ರಾಮಕ್ಕೆ ಬೇಟಿ ನೀಡಿದ್ದೇನೆ ಎಂದರು.
ಈ ಸಂದರ್ಭದಲ್ಲಿ ಗ್ರಾಮಸ್ಥರು ಸಚಿವರನ್ನು ಗೌರವಿಸಿದರು. ತಹಸೀಲ್ದಾರ್ ಶರೀನ್ತಾಜ್,ಬಿಜೆಪಿ ಜಿಲ್ಲಾಧ್ಯಕ್ಷ ವೇಣುಗೋಪಾಲ್, ಸಚಿವರ ಆಪ್ತ ಡಾ.ಸೋಮಶೇಖರರೆಡ್ಡಿ,ತಾಲೂಕು ಬಿಜೆಪಿ ಅಧ್ಯಕ್ಷ ಅಶೋಕ್ರೆಡ್ಡಿ, ಮುಖಂಡರಾದ ಲಕ್ಷ್ಮಣಗೌಡ,ರಾಮಾಂಜಿ,ರೋಣೂರುಚಂದ್ರು, ಎ.ವೆಂಕಟರೆಡ್ಡಿ, ಕೆ.ಕೆ.ಮಂಜು, ನಿವೃತ್ತ ಉಪನ್ಯಾಸಕ ವಿಚೌಡರೆಡ್ಡಿ ಚಂದ್ರಶೇಖರ್, ಸೀತಾರಾಮರೆಡ್ಡಿ,ಫಾರೆಸ್ಟರ್ಅಶ್ವತ್ಥರೆಡ್ಡಿ ನಾರಾಯಣಸ್ವಾಮಿ, ರತ್ನಪ್ಪ, ರಾಮಕೃಷ್ಣಾರೆಡ್ಡಿ ಮುಂತಾದವರು ಇದ್ದರು.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Thursday, April 23



