ಶ್ರೀನಿವಾಸಪುರ: ಶ್ರೀನಿವಾಸಪುರ ಕೇಂದ್ರವಾಗಿ ಜಿಲ್ಲೆಯಲ್ಲಿ ಅತಿ ಹೆಚ್ಚು ಮಾವು ಬೆಳಯುವ ಶ್ರೀನಿವಾಸಪುರದಲ್ಲಿ ಪ್ರಕೃತಿ ವಿಕೋಪದಿಂದ ಮಾವು ಬೆಳೆಗಾರರು ನಷ್ಟಕ್ಕೆ ಒಳಗಾಗಿದ್ದಾರೆ ಈ ಬಗ್ಗೆ ನಾನು ಮಾವಿನ ತೋಟಗಳಿಗೆ ಬೇಟಿ ನೀಡಿ ನಷ್ಟಕ್ಕೆ ಒಳಗಾಗಿರುವುದನ್ನು ಖುದ್ದು ಪರಿಶೀಲಿಸಿದ್ದೇನೆ ಎಂದು ವಿಧಾನಪರಿಷತ್ ಮುಖ್ಯಸಚೇತಕ ಡಾ. ವೈ.ಎ.ನಾರಾಯಣಸ್ವಾಮಿ ಹೇಳಿದರು.
ಅವರು ಪ್ರತಿಕಾಗೋಷ್ಟಿ ನಡೆಸಿ ಮಾತನಾಡಿ ಈ ವರ್ಷ ಮಾವು ಆರಂಭದಿಂದಲೆ ಪ್ರಾಕೃತಿಕ ಅವಕೃಪೆಗೆ ಒಳಗಾಗಿ ಶೇ30% ರಷ್ಟು ಮಾತ್ರ ಫಸಲು ಬಂದಿತ್ತು ಅದು ಸಹ 3-4 ದಿನಗಳಿಂದ ಬೀಸುತ್ತಿರುವ ಗಾಳಿ ಆಲಿಕಲ್ಲು ಮಳೆಯಿಂದಾಗಿ ಅರ್ದ ಫಸಲು ನಷ್ಟಕ್ಕೆ ಒಳಗಾಗಿದೆ ಇದರಿಂದ ಮಾವಿನ ಬೆಳೆಗಾರರು ಸಂಕಷ್ಟಲ್ಲಿ ಇದ್ದಾರೆ .ಅವರಿಗೆ ಎನ್ಡಿಆರ್ಎಫ್,ಎಸ್ಡಿಆರ್ಎಫ್ ಅಡಿಯಲ್ಲಿ ಪರಿಹಾರ ಕೊಟ್ಟರೆ ಅವರಿಗೆ ರೈತರಿಗೆ ಏನು ಪ್ರಯೋಜನವಾಗುವುದಿಲ್ಲ ಇದಕ್ಕೆ ಭಾರತೀಯ ಜನತಾ ಪಕ್ಷದ ಸರ್ಕಾರ ವಿಶೇಷವಾಗಿ ರೈತರ ಪರ ಕಾಳಜಿ ವಹಿಸಿ ಕಳೆದ ವರ್ಷ ಎನ್ಡಿಆರ್ಎಫ್ನ ಗೈಡಲೈನ್ಸ್ ಮೀರಿ ಹೆಕ್ಟೇರ್ಗೆ 18ಸಾವಿರ ರೂಪಾಯಿಗಳನ್ನು ಇತರೆ ಬೆಳೆ ನಾಶದ ಸಂದರ್ಭದಲ್ಲಿ ನೀಡಿತ್ತು ಅದರಂತೆ ಮಾವಿನ ಬೆಳೆಗಾರರರು ಬಿಜೆಪಿ ಸರ್ಕಾರ ಹೆಚ್ಚು ಪರಿಹಾರ ಕೊಡಲಿದೆ ಎಂದು ರೈತರ ನಂಬಿಕೆ ಇದಕ್ಕೆ ಬದ್ದರಾಗಿರುತ್ತೆವೆ ಎಂದರು.
ಜಿಲ್ಲಾ ಕೆಡಿಪಿ ಸಭೆಯಲ್ಲಿ ಮಾವು ಬೆಳೆನಷ್ಟವಾಗಿರುವುದರ ಬಗ್ಗೆ ಚರ್ಚೆ ಮಾಡಲಾಗಿದೆ. ಈ ಹಿಂದನ ಸರ್ಕಾರಗಳಂತೆ ರೈತರು ಬೆಳೆ ನಷ್ಟ ಪರಿಹಾರಕ್ಕಾಗಿ ಕಾಯಬೇಕಾಗಿಲ್ಲ. ನಮ್ಮ ಸರ್ಕಾರದಲ್ಲಿ ರೈತರು ಬೆಳೆ ನಷ್ಟವಾಗಿರುವ ಪೋಟು ಹಾಗೂ ಇತರೆ ದಾಖಲೆಗಳನ್ನು ಸಂಬಂದಪಟ್ಟ ಇಲಾಖೆಗೆ ನೀಡಿದರೆ ಅತಿ ಶೀಘ್ರವಾಗಿ ಸರ್ಕಾರದಿಂದ ಬೆಳೆ ನಷ್ಟ ಪರಿಹಾರವು ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮ ಆಗುತ್ತದೆ ಎಂದರು.
ಈ ಸಂಬಂದ ನಾನು ಖುದ್ದು ಮುಖ್ಯ ಮಂತ್ರಿಗಳನ್ನು ಭೇಟಿ ಮಾಡಿ ಮನವಿ ಮಾಡಿದ್ದೇನೆ ನಮ್ಮ ಭಾಗದಲ್ಲಿ ಮಾವು ರೈತಾಪಿ ಕುಟುಂಬದ ಜೀವನಾಡಿ ನಮ್ಮ.ಎನ್ಡಿಆರ್ಎಫ್ ಗೈಡ್ಲೈನ್ಸ್ ಮೀರಿ ಒಂದು ಎಕರೆಗೆ 25 ಸಾವಿರ ರೂಗಳ ಪರಿಹಾರವನ್ನು ಕೊಡಬೇಕೆಂದು ಮುಖ್ಯಮಂತ್ರಿಗಳ ಬಳಿ ಮನವಿ ಮಾಡಿದ್ದೇನೆ. ಮುಖ್ಯಮಂತ್ರಿಗಳು ಇದಕ್ಕೆ ಸಕಾರತ್ಮಕವಾಗಿ ಸ್ಪಂದಿಸಿ ಬೆಳೆ ನಷ್ಟವಾಗಿರುವುದು ನನ್ನ ಗಮನಕ್ಕೆ ಬಂದಿದೆ ಸಾಧ್ಯವಾಷ್ಟು ಬೇಗ ಪರಿಹಾರವನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದರು. ಸರ್ಕಾರದಿಂದ 2 ರಿಂದ 3 ದಿನಗಳ ಒಳಗಾಗಿ ರೈತರಿಗೆ ಬೆಳನಷ್ಟ ಪರಿಹಾರವು ನೇರವಾಗಿ ಬೆಳೆ ನಷ್ಟವಾಗಿರುವ ರೈತರಿಗೆ ಪರಿಹಾರ ಹಣವು ಸಿಗಲಿದೆ ಎಂದು ಭರವಸೆ ನೀಡಿದರು.
ಬಿಜೆಪಿ ತಾಲೂಕು ಅಧ್ಯಕ್ಷ ಅಶೋಕರೆಡ್ಡಿ,ಪುರಸಭೆ ನಾಮನಿರ್ದೇಶನ ಸದಸ್ಯ ರಾಮಾಂಜಿ,ಹಳೇಪೇಟೆ ರಮೇಶ್,ಷೇಕ್ಶಫೀವುಲ್ಲಾ ,ಸುರೇಶ್ನಾಯಕ್ ಶಿಕ್ಷಕ ದೇವರೆಡ್ಡಿ ಮುಂತಾದವರು ಇದ್ದರು.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



