ಶ್ರೀನಿವಾಸಪುರ: ಶ್ರೀನಿವಾಸಪುರ ಕೇಂದ್ರವಾಗಿ ಜಿಲ್ಲೆಯಲ್ಲಿ ಅತಿ ಹೆಚ್ಚು ಮಾವು ಬೆಳಯುವ ಶ್ರೀನಿವಾಸಪುರದಲ್ಲಿ ಪ್ರಕೃತಿ ವಿಕೋಪದಿಂದ ಮಾವು ಬೆಳೆಗಾರರು ನಷ್ಟಕ್ಕೆ ಒಳಗಾಗಿದ್ದಾರೆ ಈ ಬಗ್ಗೆ ನಾನು ಮಾವಿನ ತೋಟಗಳಿಗೆ ಬೇಟಿ ನೀಡಿ ನಷ್ಟಕ್ಕೆ ಒಳಗಾಗಿರುವುದನ್ನು ಖುದ್ದು ಪರಿಶೀಲಿಸಿದ್ದೇನೆ ಎಂದು ವಿಧಾನಪರಿಷತ್ ಮುಖ್ಯಸಚೇತಕ ಡಾ. ವೈ.ಎ.ನಾರಾಯಣಸ್ವಾಮಿ ಹೇಳಿದರು.
ಅವರು ಪ್ರತಿಕಾಗೋಷ್ಟಿ ನಡೆಸಿ ಮಾತನಾಡಿ ಈ ವರ್ಷ ಮಾವು ಆರಂಭದಿಂದಲೆ ಪ್ರಾಕೃತಿಕ ಅವಕೃಪೆಗೆ ಒಳಗಾಗಿ ಶೇ30% ರಷ್ಟು ಮಾತ್ರ ಫಸಲು ಬಂದಿತ್ತು ಅದು ಸಹ 3-4 ದಿನಗಳಿಂದ ಬೀಸುತ್ತಿರುವ ಗಾಳಿ ಆಲಿಕಲ್ಲು ಮಳೆಯಿಂದಾಗಿ ಅರ್ದ ಫಸಲು ನಷ್ಟಕ್ಕೆ ಒಳಗಾಗಿದೆ ಇದರಿಂದ ಮಾವಿನ ಬೆಳೆಗಾರರು ಸಂಕಷ್ಟಲ್ಲಿ ಇದ್ದಾರೆ .ಅವರಿಗೆ ಎನ್ಡಿಆರ್ಎಫ್,ಎಸ್ಡಿಆರ್ಎಫ್ ಅಡಿಯಲ್ಲಿ ಪರಿಹಾರ ಕೊಟ್ಟರೆ ಅವರಿಗೆ ರೈತರಿಗೆ ಏನು ಪ್ರಯೋಜನವಾಗುವುದಿಲ್ಲ ಇದಕ್ಕೆ ಭಾರತೀಯ ಜನತಾ ಪಕ್ಷದ ಸರ್ಕಾರ ವಿಶೇಷವಾಗಿ ರೈತರ ಪರ ಕಾಳಜಿ ವಹಿಸಿ ಕಳೆದ ವರ್ಷ ಎನ್ಡಿಆರ್ಎಫ್ನ ಗೈಡಲೈನ್ಸ್ ಮೀರಿ ಹೆಕ್ಟೇರ್ಗೆ 18ಸಾವಿರ ರೂಪಾಯಿಗಳನ್ನು ಇತರೆ ಬೆಳೆ ನಾಶದ ಸಂದರ್ಭದಲ್ಲಿ ನೀಡಿತ್ತು ಅದರಂತೆ ಮಾವಿನ ಬೆಳೆಗಾರರರು ಬಿಜೆಪಿ ಸರ್ಕಾರ ಹೆಚ್ಚು ಪರಿಹಾರ ಕೊಡಲಿದೆ ಎಂದು ರೈತರ ನಂಬಿಕೆ ಇದಕ್ಕೆ ಬದ್ದರಾಗಿರುತ್ತೆವೆ ಎಂದರು.
ಜಿಲ್ಲಾ ಕೆಡಿಪಿ ಸಭೆಯಲ್ಲಿ ಮಾವು ಬೆಳೆನಷ್ಟವಾಗಿರುವುದರ ಬಗ್ಗೆ ಚರ್ಚೆ ಮಾಡಲಾಗಿದೆ. ಈ ಹಿಂದನ ಸರ್ಕಾರಗಳಂತೆ ರೈತರು ಬೆಳೆ ನಷ್ಟ ಪರಿಹಾರಕ್ಕಾಗಿ ಕಾಯಬೇಕಾಗಿಲ್ಲ. ನಮ್ಮ ಸರ್ಕಾರದಲ್ಲಿ ರೈತರು ಬೆಳೆ ನಷ್ಟವಾಗಿರುವ ಪೋಟು ಹಾಗೂ ಇತರೆ ದಾಖಲೆಗಳನ್ನು ಸಂಬಂದಪಟ್ಟ ಇಲಾಖೆಗೆ ನೀಡಿದರೆ ಅತಿ ಶೀಘ್ರವಾಗಿ ಸರ್ಕಾರದಿಂದ ಬೆಳೆ ನಷ್ಟ ಪರಿಹಾರವು ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮ ಆಗುತ್ತದೆ ಎಂದರು.
ಈ ಸಂಬಂದ ನಾನು ಖುದ್ದು ಮುಖ್ಯ ಮಂತ್ರಿಗಳನ್ನು ಭೇಟಿ ಮಾಡಿ ಮನವಿ ಮಾಡಿದ್ದೇನೆ ನಮ್ಮ ಭಾಗದಲ್ಲಿ ಮಾವು ರೈತಾಪಿ ಕುಟುಂಬದ ಜೀವನಾಡಿ ನಮ್ಮ.ಎನ್ಡಿಆರ್ಎಫ್ ಗೈಡ್ಲೈನ್ಸ್ ಮೀರಿ ಒಂದು ಎಕರೆಗೆ 25 ಸಾವಿರ ರೂಗಳ ಪರಿಹಾರವನ್ನು ಕೊಡಬೇಕೆಂದು ಮುಖ್ಯಮಂತ್ರಿಗಳ ಬಳಿ ಮನವಿ ಮಾಡಿದ್ದೇನೆ. ಮುಖ್ಯಮಂತ್ರಿಗಳು ಇದಕ್ಕೆ ಸಕಾರತ್ಮಕವಾಗಿ ಸ್ಪಂದಿಸಿ ಬೆಳೆ ನಷ್ಟವಾಗಿರುವುದು ನನ್ನ ಗಮನಕ್ಕೆ ಬಂದಿದೆ ಸಾಧ್ಯವಾಷ್ಟು ಬೇಗ ಪರಿಹಾರವನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದರು. ಸರ್ಕಾರದಿಂದ 2 ರಿಂದ 3 ದಿನಗಳ ಒಳಗಾಗಿ ರೈತರಿಗೆ ಬೆಳನಷ್ಟ ಪರಿಹಾರವು ನೇರವಾಗಿ ಬೆಳೆ ನಷ್ಟವಾಗಿರುವ ರೈತರಿಗೆ ಪರಿಹಾರ ಹಣವು ಸಿಗಲಿದೆ ಎಂದು ಭರವಸೆ ನೀಡಿದರು.
ಬಿಜೆಪಿ ತಾಲೂಕು ಅಧ್ಯಕ್ಷ ಅಶೋಕರೆಡ್ಡಿ,ಪುರಸಭೆ ನಾಮನಿರ್ದೇಶನ ಸದಸ್ಯ ರಾಮಾಂಜಿ,ಹಳೇಪೇಟೆ ರಮೇಶ್,ಷೇಕ್ಶಫೀವುಲ್ಲಾ ,ಸುರೇಶ್ನಾಯಕ್ ಶಿಕ್ಷಕ ದೇವರೆಡ್ಡಿ ಮುಂತಾದವರು ಇದ್ದರು.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



