ಚೆನ್ನೈ:ಬಸ್ ಟಿಕೆಟ್ ಪಡೆಯುವಂತೆ ಹೇಳಿದ ಬಸ್ ಕಂಡೆಕ್ಟರ್ ನನ್ನು ಕುಡಿದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬ ಕಂಡೆಕ್ಟರ್ ನನ್ನು ಬಸ್ ನಿಂದ ಹೊರಗಡೆಗೆ ತಳ್ಳಿ ಸಾಯಿಸಿರುವ ಘಟನೆ ತಮಿಳುನಾಡಿನಲ್ಲಿ ನಡೆದಿರುತ್ತದೆ.
ತಮಿಳುನಾಡಿನ ಕೊಯಮತ್ತೂರು ನಿಂದ ವಿಲ್ಲಿಪುರಂ ಗೆ ಶನಿವಾರ ಬೆಳಗಿನ ಜಾವದಲ್ಲಿ ತಮಿಳುನಾಡು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಹೊರಟಿದ್ದ ಸಾರಿಗೆ ಬಸ್ಸಿನಲ್ಲಿ ಪಾನಮತ್ತ ವ್ಯಕ್ತಿಯೊಬ್ಬ ಹತ್ತಿದ್ದಾನೆ ಬಸ್ ಕಂಡಕ್ಟರ್ ಪ್ರಯಾಣಿಕರಿಗೆ ಟಿಕೆಟ್ ನೀಡುತ್ತ ಪಾನಮತ್ತ ವ್ಯಕ್ತಿಗೆ ಟಿಕೆಟ್ ತೆಗೆದುಕೊಳ್ಳುವಂತೆ ಹೇಳಿದ್ದು ಇದರಿಂದ ಕುಪಿತಗೊಂಡ ಕುಡುಕ ವ್ಯಕ್ತಿ ಕಂಡೆಕ್ಟರ್ ಜೊತೆ ಜಗಳ ತಗೆದಿದ್ದಾನೆ ಇದಕ್ಕೆ ಇಬ್ಬರ ನಡುವೆ ವಾಗ್ವಾದ ನಡೆದು ತಳ್ಳಾಟ ನೂಕಾಟಗಳು ನಡೆದಿದೆ ಈ ಸಂದರ್ಭದಲ್ಲಿ ಕುಡುಕ ಮುರುಗ ಕಂಡೆಕ್ಟರ್ ನನ್ನು ಬಸ್ಸಿನಿಂದ ತಳ್ಳಿ ಪರಾರಿಯಾಗಿದ್ದಾನೆ .
ಬಸ್ಸಿನಿಂದ ಕೆಳಗೆ ಬಿದ್ದ ಕಂಡಕ್ಟರ್ ಪೆರುಮಾಳ್ ತಲೆಗೆ ತೀವ್ರ ಪೆಟ್ಟಾಗಿ ಗಂಭೀರವಾಗಿ ಗಾಯಗೊಂಡಿದ್ದು ಚಿಕಿತ್ಸೆಗಾಗಿ ಮೇಲ್ಮರುವತ್ತೂರಿನ ಖಾಸಗಿ ಆಸ್ಪತ್ರೆಗೆ ಸೇಎಇಸಿದ್ದಾರೆ ಆದರೂ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿರುತ್ತಾನೆ. ಕಂಡಕ್ಟರ್ ಮೇಲೆ ಹಲ್ಲೆ ನಡೆಸಿದ ಕುಡುಕ ಮುರುಗನ್ ನನ್ನು ಬಂಧಿಸಿದ್ದಾರೆ.
ಘಟನೆ ಕುರಿತಾಗಿ ತಿಳಿದುಕೊಂಡ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಕರ್ತವ್ಯದಲ್ಲಿ ಮೃತಪಟ್ಟ ಕಂಡಕ್ಟರ್ ಪೆರುಮಾಳ್ ಕುಟುಂಬಕ್ಕೆ ತೀವ್ರ ಸಂತಾಪ ಸೂಚಿಸಿದ್ದಾರೆ ಜೊತೆಗೆ 10 ಲಕ್ಷ ರೂಪಾಯಿ ಆರ್ಥಿಕ ನೆರವು ಘೋಷಿಸಿ ಮಾನವಿಯತೆ ಮೆರೆದಿದ್ದಾರೆ.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



