ಶ್ರೀನಿವಾಸಪುರ: ಶತಮಾನೋತ್ಸವ ಅಚರಿಸುತ್ತಿರುವ ಶ್ರೀನಿವಾಸಪುರದ ಶ್ರೀ ಶೃಂಗೇರಿ ಶಂಕರ ಮಠದ ಶತಮಾನೋತ್ಸವ ಹಾಗು ವಿಮಾನ ಗೋಪುರ ಕುಂಭಾಭಿಷೇಕ ಮಹೋತ್ಸವನ್ನು ಶ್ರೀ ಶೃಂಗೇರಿ ಶಂಕರ ಮಠದ ಉತ್ತಾಧಿಕಾರಿ ಜಗದ್ಗುರುಗಳಾದ ಶ್ರೀ ವಿಧುಶೇಖರ ಭಾರತಿ ಸ್ವಾಮಿಗಳು ನೆವೇರಿಸಲಿದ್ದಾರೆ. ಮೂರು ದಿನಗಳ ಕಾಲ ನಡೆಯುವಂತ ಕಾರ್ಯಕ್ರಮದಲ್ಲಿ ಭಾಗವಹಿಸಲು ಲೋಕಕಲ್ಯಾಣಾರ್ಥ ವಿಜಯಿ ಯಾತ್ರೆಯಲ್ಲಿರುವ ಶ್ರೀ ವಿಧುಶೇಖರ ಭಾರತಿ ಸ್ವಾಮಿಗಳು ಸೋಮವಾರ ಸಂಜೆ 5 ಗಂಟೆಗೆ ಶ್ರೀನಿವಾಸಪುರ ಪುರ ಪ್ರವೇಶ ಮಾಡಲಿದ್ದಾರೆ ಅವರನ್ನು ವೇದಘೋಷ ಮಂಗಳ ವಾದ್ಯಗಳೊಂದಿಗೆ ಪೂರ್ಣಕುಂಭ ಸ್ವಾಗತ ಮಾಡಲಿರುವುದಾಗಿ ವಿಪ್ರ ಸಂಘದ ದಿವಾಕರ್ ಮತ್ತು ಶಂಕರಮಠದ ಮೇನೆಜರ್ ಶ್ರೀನಿವಾಸನ್ ತಿಳಿಸಿರುತ್ತಾರೆ.
ಸೋಮವಾರ ಸಂಜೆ ಶ್ರೀ ವಿಧುಶೇಖರ ಭಾರತಿ ಸ್ವಾಮಿಗಳಿಗೆ ಶಂಕರ ಮಠದಲ್ಲಿ ಪಾದುಕ ಪೂಜೆ ಫಲ ಸಮರ್ಪಣೆ ಅದ ನಂತರ ಗುರುಗಳಿಂದ ಅನುಗ್ರಹ ಭಾಷಣ ಮತ್ತು ಶ್ರೀ ಚಂದ್ರಮೌಳೇಶ್ವರ ಪೂಜಾ ಅನುಷ್ಠಾನ ಇರುತ್ತದೆ ಮಂಗಳವಾರ ವಿಶೇಷ ಪೂಜಾ ಕಾರ್ಯಕ್ರಮಗಳ ನಡೆಯಲಿದ್ದು ಬುಧವಾರ ಶ್ರೀ ಗಳಿಂದ ಗುರು ದತ್ತಾತ್ರೇಯ ಆದಿ ಶಂಕರಾಚಾರ್ಯ,ಗಾಯಿತ್ರಿ ಮಹಾ ಪೂಜೆ ಹಾಗು ನವ ಚಂಡಿ ಮತ್ತು ರುದ್ರ ಹೋಮ ಪೂರ್ಣಾಹುತಿ ಆದ ನಂತರ ಶ್ರೀ ಶಂಕರ ಮಠದ ವಿಮಾನಗೋಪುರದ ಕುಂಭಾಭಿಷೇಕ ಸಾರ್ವಜನಿಕರಿಗೆ ಶ್ರೀ ಗಳ ದರ್ಶನ ಮತ್ತು ಫಲಮಂತ್ರಾಕ್ಷತೆ ಕಾರ್ಯ ನಡೆಯಲಿದೆ ಎಂದು ತಿಳಿಸಿರುತ್ತಾರೆ.
Trending
- ಕರ್ನಾಟಕ ಮಾವು ಆಂಧ್ರ ನಿಷೇದಿಸಿರುವುದು ಒಕ್ಕೂಟ ವ್ಯವಸ್ಥೆಗೆ ಪೆಟ್ಟು ಸಿದ್ದರಾಮಯ್ಯ!
- ಶ್ರೀನಿವಾಸಪುರ:ಮಾವು ದರ ಕುಸಿತ,ಆಂಧ್ರದವರು ಬೇಡ ಅಂದ್ರಾ ಕರ್ನಾಟಕ ಮಾವನ್ನು!
- SRINIVASPUR ಮಾರುಕಟ್ಟೆಯಲ್ಲಿ ಮೋಸ ರೈತರಿಂದ ಲೋಕಾಯುಕ್ತರಿಗೆ ದೂರು
- ಮುಳಬಾಗಿಲು:ದಾಳಿಕೊರರ ಅತಿಕ್ರಮಣ ಕೃಷಿ ಸಂಸ್ಕೃತಿ ಮೇಲೂ ಪರಿಣಾಮ!
- ಶ್ರೀನಿವಾಸಪುರ ಅಭಿವೃದ್ಧಿಗೆ ಕೈಗಾರಿಕೆಗಳು ಸಹಕಾರಿ ವೆಂಕಟಶಿವಾರೆಡ್ಡಿ
- ಶ್ರೀನಿವಾಸಪುರ:ಮಾವು ಬೆಂಬಲ ಬೆಲೆಗೆ ಅಗ್ರಹಿಸಿ ರೈತರಿಂದ ರಸ್ತೆ ತಡೆ! ಬಂದ್ ಎಚ್ಚರಿಕೆ
- ಟೀನೇಜ್ ಗೆಳೆಯ ಗೆಳತಿಯರ “ನ ಲಜ್ಜಾಃ ನ ಭಯಂ” ಬಸ್ಸಿನಲ್ಲೆ ಅತಿರೇಕ!
- ಚಿಂತಾಮಣಿಗೂ ವಕ್ಕರಿಸಿದ ಕೊರೋನಾ! ಆತಂಕ ಬೇಡ
Sunday, June 15