ಶ್ರೀನಿವಾಸಪುರ: ಶತಮಾನೋತ್ಸವ ಅಚರಿಸುತ್ತಿರುವ ಶ್ರೀನಿವಾಸಪುರದ ಶ್ರೀ ಶೃಂಗೇರಿ ಶಂಕರ ಮಠದ ಶತಮಾನೋತ್ಸವ ಹಾಗು ವಿಮಾನ ಗೋಪುರ ಕುಂಭಾಭಿಷೇಕ ಮಹೋತ್ಸವನ್ನು ಶ್ರೀ ಶೃಂಗೇರಿ ಶಂಕರ ಮಠದ ಉತ್ತಾಧಿಕಾರಿ ಜಗದ್ಗುರುಗಳಾದ ಶ್ರೀ ವಿಧುಶೇಖರ ಭಾರತಿ ಸ್ವಾಮಿಗಳು ನೆವೇರಿಸಲಿದ್ದಾರೆ. ಮೂರು ದಿನಗಳ ಕಾಲ ನಡೆಯುವಂತ ಕಾರ್ಯಕ್ರಮದಲ್ಲಿ ಭಾಗವಹಿಸಲು ಲೋಕಕಲ್ಯಾಣಾರ್ಥ ವಿಜಯಿ ಯಾತ್ರೆಯಲ್ಲಿರುವ ಶ್ರೀ ವಿಧುಶೇಖರ ಭಾರತಿ ಸ್ವಾಮಿಗಳು ಸೋಮವಾರ ಸಂಜೆ 5 ಗಂಟೆಗೆ ಶ್ರೀನಿವಾಸಪುರ ಪುರ ಪ್ರವೇಶ ಮಾಡಲಿದ್ದಾರೆ ಅವರನ್ನು ವೇದಘೋಷ ಮಂಗಳ ವಾದ್ಯಗಳೊಂದಿಗೆ ಪೂರ್ಣಕುಂಭ ಸ್ವಾಗತ ಮಾಡಲಿರುವುದಾಗಿ ವಿಪ್ರ ಸಂಘದ ದಿವಾಕರ್ ಮತ್ತು ಶಂಕರಮಠದ ಮೇನೆಜರ್ ಶ್ರೀನಿವಾಸನ್ ತಿಳಿಸಿರುತ್ತಾರೆ.
ಸೋಮವಾರ ಸಂಜೆ ಶ್ರೀ ವಿಧುಶೇಖರ ಭಾರತಿ ಸ್ವಾಮಿಗಳಿಗೆ ಶಂಕರ ಮಠದಲ್ಲಿ ಪಾದುಕ ಪೂಜೆ ಫಲ ಸಮರ್ಪಣೆ ಅದ ನಂತರ ಗುರುಗಳಿಂದ ಅನುಗ್ರಹ ಭಾಷಣ ಮತ್ತು ಶ್ರೀ ಚಂದ್ರಮೌಳೇಶ್ವರ ಪೂಜಾ ಅನುಷ್ಠಾನ ಇರುತ್ತದೆ ಮಂಗಳವಾರ ವಿಶೇಷ ಪೂಜಾ ಕಾರ್ಯಕ್ರಮಗಳ ನಡೆಯಲಿದ್ದು ಬುಧವಾರ ಶ್ರೀ ಗಳಿಂದ ಗುರು ದತ್ತಾತ್ರೇಯ ಆದಿ ಶಂಕರಾಚಾರ್ಯ,ಗಾಯಿತ್ರಿ ಮಹಾ ಪೂಜೆ ಹಾಗು ನವ ಚಂಡಿ ಮತ್ತು ರುದ್ರ ಹೋಮ ಪೂರ್ಣಾಹುತಿ ಆದ ನಂತರ ಶ್ರೀ ಶಂಕರ ಮಠದ ವಿಮಾನಗೋಪುರದ ಕುಂಭಾಭಿಷೇಕ ಸಾರ್ವಜನಿಕರಿಗೆ ಶ್ರೀ ಗಳ ದರ್ಶನ ಮತ್ತು ಫಲಮಂತ್ರಾಕ್ಷತೆ ಕಾರ್ಯ ನಡೆಯಲಿದೆ ಎಂದು ತಿಳಿಸಿರುತ್ತಾರೆ.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



