ಶ್ರೀನಿವಾಸಪುರ: ನಾವು ಮಾಡಿರುವಂತ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಕಾಂಗ್ರೆಸ್ ಪಕ್ಷಕ್ಕೆ ಯಾರೆ ಸೇರ್ಪಡೆಯಾದರೂ ಅವರನ್ನು ಪಕ್ಷಕ್ಕೆ ಆತ್ಮೀಯವಾಗಿ ಸ್ವಾಗತಿಸುತ್ತೇನೆ ಪಕ್ಷದಲ್ಲಿ ಅವರನ್ನು ಗೌರವಿತವಾಗಿ ನಡೆಸಿಕೊಳ್ಳುತ್ತೇವೆ ಎಂದು ಶಾಸಕ ರಮೇಶ್ ಕುಮಾರ್ ಹೇಳಿದರು ಅವರು ಇಂದು ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಪುರಸಭೆ ಅಧ್ಯಕ್ಷೆ ಲಲಿತಾ ಶ್ರೀನಿವಾಸ್ ಅವರನ್ನು ಪಕ್ಷಕ್ಕೆ ಸೇರ್ಪಡೆಮಾಡಿಕೊಂಡು ಮಾತನಾಡಿದರು.
ಯಾವುದೇ ಅಧಿಕಾರದ ಆಮಿಷ ಷರತ್ತುಗಳನ್ನು ವಿಧಿಸದೆ ಪಕ್ಷಕ್ಕೆ ಬಂದಿರುವ ಅವರು ನಮ್ಮ ಜನಪರ ಅಭಿವೃದ್ದಿ ಕಾರ್ಯಗಳನ್ನು ಮೆಚ್ಚಿ ಹೆಣ್ಣುಮಗಳು ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ ಆತ್ಮಿಯವಾಗಿ ಸ್ವಾಗತ ಕೋರಿದ್ದೇನೆ ಆಕೆಗೆ ನಮ್ಮ ಪಕ್ಷದ ಕಾರ್ಯಕರ್ತರು ಹಿತೈಷಿಗಳು ಸಹಕಾರ ನೀಡುವ ಮೂಲಕ ಆಕೆಯನ್ನು ಬೆಂಬಲಿಸೋಣ ಎಂದರು.
ಪಟ್ಟಣದ ಅಭಿವೃದ್ದಿಗೆ ವಿಶೇಷವಾಗಿ ಚಿಂತನೆ ಮಾಡುತ್ತಿದ್ದೇನೆ ಪಟ್ಟಣದಲ್ಲಿ ರವಿಂದ್ರ ಕಲಾಕ್ಷೇತ್ರ ದಂತ ಸಾಂಸೃತಿಕ ಭವನ ನಿರ್ಮಿಸುವ ಉದ್ದೇಶ ಹೊಂದಿದ್ದು ಇದಕ್ಕಾಗಿ ಗೌರಿಬಿದನೂರಿನಲ್ಲಿರುವ ಕಲಾಭವನ ಮಾದರಿಯಲ್ಲಿ ವಿಶಾಲವಾದ ಭವನ ನಿರ್ಮಿಸುವುದಾಗಿ ಹೇಳಿದರು.
ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಪುರಸಭೆ ಅಧ್ಯಕ್ಷೆ ಲಲಿತಾ ಶ್ರೀನಿವಾಸ್ ಮಾತನಾಡಿ ಶಾಸಕ ರಮೇಶ್ ಕುಮಾರ್ ಅವರ ಪ್ರಗತಿಪರ ಚಿಂತನೆ ಹಾಗು ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದೇನೆ ಎಂದ ಅವರು ಪುರಸಭೆ ಅಧ್ಯಕ್ಷೆಯಾಗಿ ಒಂದುವರೆ ವರ್ಷದಿಂದ ಉತ್ತಮ ಆಡಳಿತ ನೀಡುತ್ತ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿದ್ದೇನೆ ಯಾವುದೇ ಬ್ರಷ್ಟಾಚಾರದ ಆರೋಪ ನನ್ನ ಮೇಲೆ ಇಲ್ಲ ಮಾಜಿ ಶಾಸಕ ವೆಂಕಟಶಿವಾರೆಡ್ಡಿ ತಮ್ಮ ರಾಜಕೀಯ ಪ್ರತಿಷ್ಠೆಗೆ ನಮ್ಮನ್ನು ಬಳಸಿಕೊಂಡರು ನಂತರ ನನ್ನನ್ನು ಅಧಿಕಾರದಿಂದ ಇಳಿಸುವಂತ ಕಾರ್ಯತಂತ್ರ ರೂಪಿಸಿ ನನ್ನ ವಿರುದ್ದ ಇಲ್ಲಸಲ್ಲದ ಆರೋಪಗಳನ್ನು ಹೊರೆಸುತ್ತಿದ್ದಾರೆ ಎಂದು ದೂರಿದ ಅವರು ಮಾಜಿ ಶಾಸಕರ ವರ್ತನೆಯಿಂದ ಮಾನಸಿಕವಾಗಿ ನೊಂದು ಜೆಡಿಎಸ್ ತೊರೆದಿರುವುದಾಗಿ ಹೇಳಿದರು.
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Monday, April 28