ಮದನಪಲ್ಲಿ: ಆಂಧ್ರಪ್ರದೇಶ ಚಿತ್ತೂರು ಜಿಲ್ಲೆಯ ಪ್ರಖ್ಯಾತ ಪುಣ್ಯಕ್ಷೇತ್ರ ಬೋಯಕೊಂಡ ಗಂಗಮ್ಮ ದೇವಾಲಯ ಭಾನುವಾರ ಭಕ್ತರಿಂದ ತುಂಬಿ ತುಳುಕಾಡಿದೆ. ಆಷಾಡ ಮಾಸದ ಹಿನ್ನೆಲೆಯಲ್ಲಿ ದೊಡ್ಡ ಸಂಖ್ಯೆಯಲ್ಲಿ ಭಕ್ತರು ದರುಶನಕ್ಕೆ ಬಂದಿದ್ದಾರೆಂದು ದೇವಾಲಯದ ಅಧಿಕಾರಿಗಳು ಹೇಳುತ್ತಾರೆ.
ಆಷಾಡದ ಮೊದಲ ಭಾನುವಾರ ಗಂಗಮ್ಮನನ್ನು ವಿಶೇಷವಾಗಿ ಚಿನ್ನಾಭರಣ ಮತ್ತು ಪುಷ್ಪಗಳಿಂದ ಅಲಂಕರಿಸಿ, ಭಕ್ತರ ದರುಶನಕ್ಕೆ ಏರ್ಪಾಡು ಮಾಡಲಾಗಿತ್ತು ಆಂಧ್ರ ತೆಲಂಗಾಣ ತಮಿಳುನಾಡು ಮತ್ತು ಕರ್ನಾಟಕದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ ಹಿನ್ನಲೆಯಲ್ಲಿ ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಂತು ದರುಶನ ಪಡೆದರು.
ಸಾಮಾನ್ಯ ದಿನಗಳಲ್ಲಿ ಬೆಳಗ್ಗೆ 7 ಗಂಟೆಗೆ ಅಮ್ಮನ ದರ್ಶನ ಆರಂಭವಾಗುತ್ತದೆ ಅದರೆ ಇಂದು ಆಷಾಡದ ಭಾನುವಾರದ ಹಿನ್ನಲೆಯಲ್ಲಿ ಭಕ್ತರ ಅನುಕೂಲಕ್ಕಾಗಿ ಬೆಳಗ್ಗೆ 5 ಗಂಟೆಗೆ ದರ್ಶನ ಆರಂಭವಾಯಿತು,ಸಂಜೆ 5 ಗಂಟೆಯವರೆಗೂ ಭಕ್ತರ ದಟ್ಟಣೆ ಮುಂದುವರಿದಿತ್ತು. ಸುಮಾರು 40 ಸಾವಿರಕ್ಕೂ ಹೆಚ್ಚು ಭಕ್ತರು ದೇವಿಯ ದರ್ಶನ ಪಡೆದು ತೀರ್ಥ ಪ್ರಸಾದ ಸ್ವೀಕರಿಸಿದ್ದು ವಿವಿಧ ಸೇವಾ ಟಿಕೆಟ್ ಗಳ ಮೂಲಕ ಒಂದೇ ದಿನದಲ್ಲಿ ರೂ.10.50 ಲಕ್ಷ ಆದಾಯ ಸಂಗ್ರಹವಾಗಿದೆ. ದೇಗುಲದ ಅಧ್ಯಕ್ಷ ಶಂಕರ ನಾರಾಯಣ ಹಾಗೂ ಇವೋ ಚಂದ್ರಮೌಳಿ ಮತ್ತು ಸಿಬ್ಬಂದಿ ಭಕ್ತಾದಿಗಳಿಗೆ ಯಾವುದೇ ತೊಂದರೆಯಾಗದಂತೆ ವ್ಯವಸ್ಥೆ ಮಾಡಿದ್ದರು.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



