ಮದನಪಲ್ಲಿ: ಆಂಧ್ರಪ್ರದೇಶ ಚಿತ್ತೂರು ಜಿಲ್ಲೆಯ ಪ್ರಖ್ಯಾತ ಪುಣ್ಯಕ್ಷೇತ್ರ ಬೋಯಕೊಂಡ ಗಂಗಮ್ಮ ದೇವಾಲಯ ಭಾನುವಾರ ಭಕ್ತರಿಂದ ತುಂಬಿ ತುಳುಕಾಡಿದೆ. ಆಷಾಡ ಮಾಸದ ಹಿನ್ನೆಲೆಯಲ್ಲಿ ದೊಡ್ಡ ಸಂಖ್ಯೆಯಲ್ಲಿ ಭಕ್ತರು ದರುಶನಕ್ಕೆ ಬಂದಿದ್ದಾರೆಂದು ದೇವಾಲಯದ ಅಧಿಕಾರಿಗಳು ಹೇಳುತ್ತಾರೆ.
ಆಷಾಡದ ಮೊದಲ ಭಾನುವಾರ ಗಂಗಮ್ಮನನ್ನು ವಿಶೇಷವಾಗಿ ಚಿನ್ನಾಭರಣ ಮತ್ತು ಪುಷ್ಪಗಳಿಂದ ಅಲಂಕರಿಸಿ, ಭಕ್ತರ ದರುಶನಕ್ಕೆ ಏರ್ಪಾಡು ಮಾಡಲಾಗಿತ್ತು ಆಂಧ್ರ ತೆಲಂಗಾಣ ತಮಿಳುನಾಡು ಮತ್ತು ಕರ್ನಾಟಕದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ ಹಿನ್ನಲೆಯಲ್ಲಿ ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಂತು ದರುಶನ ಪಡೆದರು.
ಸಾಮಾನ್ಯ ದಿನಗಳಲ್ಲಿ ಬೆಳಗ್ಗೆ 7 ಗಂಟೆಗೆ ಅಮ್ಮನ ದರ್ಶನ ಆರಂಭವಾಗುತ್ತದೆ ಅದರೆ ಇಂದು ಆಷಾಡದ ಭಾನುವಾರದ ಹಿನ್ನಲೆಯಲ್ಲಿ ಭಕ್ತರ ಅನುಕೂಲಕ್ಕಾಗಿ ಬೆಳಗ್ಗೆ 5 ಗಂಟೆಗೆ ದರ್ಶನ ಆರಂಭವಾಯಿತು,ಸಂಜೆ 5 ಗಂಟೆಯವರೆಗೂ ಭಕ್ತರ ದಟ್ಟಣೆ ಮುಂದುವರಿದಿತ್ತು. ಸುಮಾರು 40 ಸಾವಿರಕ್ಕೂ ಹೆಚ್ಚು ಭಕ್ತರು ದೇವಿಯ ದರ್ಶನ ಪಡೆದು ತೀರ್ಥ ಪ್ರಸಾದ ಸ್ವೀಕರಿಸಿದ್ದು ವಿವಿಧ ಸೇವಾ ಟಿಕೆಟ್ ಗಳ ಮೂಲಕ ಒಂದೇ ದಿನದಲ್ಲಿ ರೂ.10.50 ಲಕ್ಷ ಆದಾಯ ಸಂಗ್ರಹವಾಗಿದೆ. ದೇಗುಲದ ಅಧ್ಯಕ್ಷ ಶಂಕರ ನಾರಾಯಣ ಹಾಗೂ ಇವೋ ಚಂದ್ರಮೌಳಿ ಮತ್ತು ಸಿಬ್ಬಂದಿ ಭಕ್ತಾದಿಗಳಿಗೆ ಯಾವುದೇ ತೊಂದರೆಯಾಗದಂತೆ ವ್ಯವಸ್ಥೆ ಮಾಡಿದ್ದರು.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



