ಶ್ರೀನಿವಾಸಪುರ:-ಮದನಪಲ್ಲಿಯಲ್ಲಿ ನಾಳೆ ಜುಲೈ 6 ಬುಧವಾರ ನಡೆಯಲಿರುವ ತೆಲಗುದೇಶಂ ಪಕ್ಷದ ಕ್ಷೇತ್ರಮಟ್ಟದ ಸಮಾವೇಶ ಹಾಗು ಬಹಿರಂಗ ಸಭೆ,ಮಿನಿಮಹಾನಾಡು ಕಾರ್ಯಕ್ರಮ ನಡೆಯಲಿದ್ದು ಕಾರ್ಯಕ್ರಮದಲ್ಲಿ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯುಡು ಭಾಗವಹಿಸುತ್ತಿದ್ದು ಅವರು ನಾಳೆ ವಿಜಯವಾಡ ನಗರದಿಂದ ಬೆಂಗಳೂರು ಕೇಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅಗಮಿಸಿ ನಂತರ ಮಧ್ಹಾನಃ ಸುಮಾರು 2 ಗಂಟೆಗೆ ರಸ್ತೆಮಾರ್ಗದ ಮೂಲಕ ಹೆಚ್ ಕ್ರಾಸ್,ಮಾಡಿಕೆರೆ ಕ್ರಾಸ್ ತಾಲೂಕಿನ ತಾಡಿಗೊಳ್ ಕ್ರಾಸ್ ಮೂಲಕ ಮದನಪಲ್ಲಿಗೆ ತೆರಳಲಿದ್ದಾರೆ.
ಆಂಧ್ರದ ರಾಯಸೀಮೆಯ ಹೆಬ್ಬಾಗಿಲು ಆಗಿರುವ ಆಂಧ್ರಪ್ರದೇಶದ ರಾಜಂಪೇಟ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮದನಪಲ್ಲಿಯಲ್ಲಿ ನಡೆಯಲಿರುವ ತೆಲಗು ದೇಶಂ ಕಾರ್ಯಕ್ರಮದಲ್ಲಿ ಶ್ರೀನಿವಾಸಪುರ ತಾಲೂಕು ಕೋಡಿಪಲ್ಲಿ ಪಂಚಾಯಿತಿ ವ್ಯಾಪ್ತಿಯ ಕೊಂಡಾಮರಿ ಬಳಿಯ ಕಲ್ಲುಕ್ವಾರಿ ಮಾಲಿಕ ಹಾಗು ಮದನಪಲ್ಲಿ ವಿಧಾನಸಭಾ ಕ್ಷೇತ್ರದ ತೆಲಗುದೇಶಂ ಪಕ್ಷದ ಅಭ್ಯರ್ಥಿ ಅಕಾಂಕ್ಷಿಯಾಗಿರುವ ಜಯರಾಮ ನಾಯ್ಡು ತಾಡಿಗೊಳ್ ಕ್ರಾಸ್(ಪೈ ಕ್ರಾಸ್) ಬಳಿ ಚಂದ್ರಬಾಬು ನಾಯುಡು ಅವರಿಗೆ ದೊಡ್ಡ ಮಟ್ಟದ ಸ್ವಾಗತ ಕೋರುವ ಮೂಲಕ ಕರ್ನಾಟಕದಲ್ಲೂ ತಮ್ಮ ಹವಾ ಇರುವುದನ್ನು ಆಂಧ್ರದ ಮಾಜಿ ಸಿಎಂ ಗೆ ತೋರಿಸಲು ಶಕ್ತಿ ಪ್ರದರ್ಶನಕ್ಕೆ ತಯಾರಿ ನಡೆಸಿದ್ದಾರೆ.
ದೊಡ್ಡ ಮಟ್ಟದಲ್ಲಿ ಕಾರ್ಯಕರ್ತರೊಂದಿಗೆ ಗಜಮಾಲೆ ಸ್ವಾಗತ ಕೋರಿ ನಂತರ ಅವರೊಂದಿಗೆ ಮಿನಿಮಹಾನಾಡು ಕಾರ್ಯಕ್ರಮಕ್ಕೆ ಹೋಗಲಿರುವುದಾಗಿ ಸ್ವತಃ ಜಯರಾಮ ನಾಯ್ಡು vcsnewz.com ಗೆ ತಿಳಿಸಿರುತ್ತಾರೆ.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Friday, April 24



