ಶ್ರೀನಿವಾಸಪುರ:-ಸರ್ಕಾರಿ ಶಾಲೆ ಕಾಲೇಜುಗಳ ವಿಧ್ಯಾರ್ಥಿಗಳು ಉನ್ನತ ಪದವಿಗಳನ್ನು ಅಲಂಕರಿಸಿ ಸಮಾಜದ ಶ್ರೇಯಸ್ಸಿಗೆ ದುಡಿಯುತ್ತಿದ್ದಾರೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಸಣ್ಣೀರಯ್ಯ ಹೇಳಿದರು ಅವರು ತಮ್ಮ ಕಾಲೇಜಿನಲ್ಲಿ 2020-21 ನೇ ಸಾಲಿನಲ್ಲಿ ವಿಜ್ಞಾನ ವಿಭಾಗದಲ್ಲಿ ಓದಿ ಬೆಂಗಳೂರು ವಿಶ್ವವಿದ್ಯಾಲಯದಿಂದ ಚಿನ್ನದ ಪದಕ ಪಡೆದ ವಿದ್ಯಾರ್ಥಿನಿ ಮಿಸ್ಬಾ ತಪಸ್ಸುಮ್ ಗೆ ಆಯೋಜಿಸಿದ್ದ ಅಭಿನಂದನಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಸರ್ಕಾರಿ ವಿದ್ಯಾಸಂಸ್ಥೆಗಳು ಇತರೆ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಕಡಿಮೆ ಇಲ್ಲದಂತೆ ಉತ್ತಮ ರೀತಿಯಲ್ಲಿ ಭೋದನಾ ವ್ಯವಸ್ಥೆ ಶೈಕ್ಷಣಿಕ ಸೌಲಭ್ಯಗಳು ಹಾಗು ಇತರೆ ಮೂಲಭೂತ ಸೌಕರ್ಯಗಳು ನೀಡುತ್ತಿದೆ ಇದನ್ನು ವಿದ್ಯಾರ್ಥಿಗಳು ಬಳಸಿಕೊಂಡು ಶೈಕ್ಷಣಿಕವಾಗಿ ಸಾಧನೆ ಮಾಡುವ ಮೂಲಕ ಸಮಾಜದಲ್ಲೂ ಉನ್ನತ ವ್ಯಕ್ತಿತ್ವ ಸ್ಥಾನ ಗೌರವ ಪಡೆಯುವಂತೆ ಹೇಳಿದರು.
ವಿಙ್ಞಾನ ಉಪನ್ಯಾಸಕ ಚಿನ್ನಪ್ಪರೆಡ್ಡಿ ಮಾತನಾಡಿ ಸರ್ಕಾರಿ ಕಾಲೇಜಿನ ವಿದ್ಯಾರ್ಥಿನಿ ಚಿನ್ನದ ಪದಕ ಪಡೆದಿರುವುದು ಹೆಮ್ಮೆಯ ವಿಷಯ ರಸಾಯನಶಾಸ್ತ್ರದಲ್ಲಿ 100 ಅಂಕಗಳನ್ನು ಪಡೆದಿರುವ ಆಕೆಯ ಸಾಧನೆ ಇತರೆ ವಿದ್ಯಾರ್ಥಿಗಳಿಗೆ ಸ್ಪೂರ್ತಿದಾಯಕವಾಗಬೇಕು ಎಂದ ಅವರು ಚಿನ್ನದ ಪದಕ ಪಡೆದ ಆಕೆಯ ಶೈಕ್ಷಣಿಕ ಸಾಧನೆಯಿಂದ ಕಾಲೇಜಿಗೆ ಉತ್ತಮ ಹೆಸರು ಬಂದಿದೆ ಭೊಧಕರಾದ ನಮಗೂ ಹೆಮ್ಮೆಯ ವಿಚಾರವಾಗಿದೆ ಸಮಾಜದಲ್ಲಿ ಆಕೆಯ ಪೋಷಕರ ಗೌರವ ಹೆಚ್ಚಿಸಿದೆ ಎಂದರು.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Thursday, April 23



