ಶ್ರೀನಿವಾಸಪುರ:-ಸರ್ಕಾರಿ ಶಾಲೆ ಕಾಲೇಜುಗಳ ವಿಧ್ಯಾರ್ಥಿಗಳು ಉನ್ನತ ಪದವಿಗಳನ್ನು ಅಲಂಕರಿಸಿ ಸಮಾಜದ ಶ್ರೇಯಸ್ಸಿಗೆ ದುಡಿಯುತ್ತಿದ್ದಾರೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಸಣ್ಣೀರಯ್ಯ ಹೇಳಿದರು ಅವರು ತಮ್ಮ ಕಾಲೇಜಿನಲ್ಲಿ 2020-21 ನೇ ಸಾಲಿನಲ್ಲಿ ವಿಜ್ಞಾನ ವಿಭಾಗದಲ್ಲಿ ಓದಿ ಬೆಂಗಳೂರು ವಿಶ್ವವಿದ್ಯಾಲಯದಿಂದ ಚಿನ್ನದ ಪದಕ ಪಡೆದ ವಿದ್ಯಾರ್ಥಿನಿ ಮಿಸ್ಬಾ ತಪಸ್ಸುಮ್ ಗೆ ಆಯೋಜಿಸಿದ್ದ ಅಭಿನಂದನಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಸರ್ಕಾರಿ ವಿದ್ಯಾಸಂಸ್ಥೆಗಳು ಇತರೆ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಕಡಿಮೆ ಇಲ್ಲದಂತೆ ಉತ್ತಮ ರೀತಿಯಲ್ಲಿ ಭೋದನಾ ವ್ಯವಸ್ಥೆ ಶೈಕ್ಷಣಿಕ ಸೌಲಭ್ಯಗಳು ಹಾಗು ಇತರೆ ಮೂಲಭೂತ ಸೌಕರ್ಯಗಳು ನೀಡುತ್ತಿದೆ ಇದನ್ನು ವಿದ್ಯಾರ್ಥಿಗಳು ಬಳಸಿಕೊಂಡು ಶೈಕ್ಷಣಿಕವಾಗಿ ಸಾಧನೆ ಮಾಡುವ ಮೂಲಕ ಸಮಾಜದಲ್ಲೂ ಉನ್ನತ ವ್ಯಕ್ತಿತ್ವ ಸ್ಥಾನ ಗೌರವ ಪಡೆಯುವಂತೆ ಹೇಳಿದರು.
ವಿಙ್ಞಾನ ಉಪನ್ಯಾಸಕ ಚಿನ್ನಪ್ಪರೆಡ್ಡಿ ಮಾತನಾಡಿ ಸರ್ಕಾರಿ ಕಾಲೇಜಿನ ವಿದ್ಯಾರ್ಥಿನಿ ಚಿನ್ನದ ಪದಕ ಪಡೆದಿರುವುದು ಹೆಮ್ಮೆಯ ವಿಷಯ ರಸಾಯನಶಾಸ್ತ್ರದಲ್ಲಿ 100 ಅಂಕಗಳನ್ನು ಪಡೆದಿರುವ ಆಕೆಯ ಸಾಧನೆ ಇತರೆ ವಿದ್ಯಾರ್ಥಿಗಳಿಗೆ ಸ್ಪೂರ್ತಿದಾಯಕವಾಗಬೇಕು ಎಂದ ಅವರು ಚಿನ್ನದ ಪದಕ ಪಡೆದ ಆಕೆಯ ಶೈಕ್ಷಣಿಕ ಸಾಧನೆಯಿಂದ ಕಾಲೇಜಿಗೆ ಉತ್ತಮ ಹೆಸರು ಬಂದಿದೆ ಭೊಧಕರಾದ ನಮಗೂ ಹೆಮ್ಮೆಯ ವಿಚಾರವಾಗಿದೆ ಸಮಾಜದಲ್ಲಿ ಆಕೆಯ ಪೋಷಕರ ಗೌರವ ಹೆಚ್ಚಿಸಿದೆ ಎಂದರು.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Monday, June 8



