ಶ್ರೀನಿವಾಸಪುರ:-ಸರ್ಕಾರಿ ಶಾಲೆ ಕಾಲೇಜುಗಳ ವಿಧ್ಯಾರ್ಥಿಗಳು ಉನ್ನತ ಪದವಿಗಳನ್ನು ಅಲಂಕರಿಸಿ ಸಮಾಜದ ಶ್ರೇಯಸ್ಸಿಗೆ ದುಡಿಯುತ್ತಿದ್ದಾರೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಸಣ್ಣೀರಯ್ಯ ಹೇಳಿದರು ಅವರು ತಮ್ಮ ಕಾಲೇಜಿನಲ್ಲಿ 2020-21 ನೇ ಸಾಲಿನಲ್ಲಿ ವಿಜ್ಞಾನ ವಿಭಾಗದಲ್ಲಿ ಓದಿ ಬೆಂಗಳೂರು ವಿಶ್ವವಿದ್ಯಾಲಯದಿಂದ ಚಿನ್ನದ ಪದಕ ಪಡೆದ ವಿದ್ಯಾರ್ಥಿನಿ ಮಿಸ್ಬಾ ತಪಸ್ಸುಮ್ ಗೆ ಆಯೋಜಿಸಿದ್ದ ಅಭಿನಂದನಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಸರ್ಕಾರಿ ವಿದ್ಯಾಸಂಸ್ಥೆಗಳು ಇತರೆ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಕಡಿಮೆ ಇಲ್ಲದಂತೆ ಉತ್ತಮ ರೀತಿಯಲ್ಲಿ ಭೋದನಾ ವ್ಯವಸ್ಥೆ ಶೈಕ್ಷಣಿಕ ಸೌಲಭ್ಯಗಳು ಹಾಗು ಇತರೆ ಮೂಲಭೂತ ಸೌಕರ್ಯಗಳು ನೀಡುತ್ತಿದೆ ಇದನ್ನು ವಿದ್ಯಾರ್ಥಿಗಳು ಬಳಸಿಕೊಂಡು ಶೈಕ್ಷಣಿಕವಾಗಿ ಸಾಧನೆ ಮಾಡುವ ಮೂಲಕ ಸಮಾಜದಲ್ಲೂ ಉನ್ನತ ವ್ಯಕ್ತಿತ್ವ ಸ್ಥಾನ ಗೌರವ ಪಡೆಯುವಂತೆ ಹೇಳಿದರು.
ವಿಙ್ಞಾನ ಉಪನ್ಯಾಸಕ ಚಿನ್ನಪ್ಪರೆಡ್ಡಿ ಮಾತನಾಡಿ ಸರ್ಕಾರಿ ಕಾಲೇಜಿನ ವಿದ್ಯಾರ್ಥಿನಿ ಚಿನ್ನದ ಪದಕ ಪಡೆದಿರುವುದು ಹೆಮ್ಮೆಯ ವಿಷಯ ರಸಾಯನಶಾಸ್ತ್ರದಲ್ಲಿ 100 ಅಂಕಗಳನ್ನು ಪಡೆದಿರುವ ಆಕೆಯ ಸಾಧನೆ ಇತರೆ ವಿದ್ಯಾರ್ಥಿಗಳಿಗೆ ಸ್ಪೂರ್ತಿದಾಯಕವಾಗಬೇಕು ಎಂದ ಅವರು ಚಿನ್ನದ ಪದಕ ಪಡೆದ ಆಕೆಯ ಶೈಕ್ಷಣಿಕ ಸಾಧನೆಯಿಂದ ಕಾಲೇಜಿಗೆ ಉತ್ತಮ ಹೆಸರು ಬಂದಿದೆ ಭೊಧಕರಾದ ನಮಗೂ ಹೆಮ್ಮೆಯ ವಿಚಾರವಾಗಿದೆ ಸಮಾಜದಲ್ಲಿ ಆಕೆಯ ಪೋಷಕರ ಗೌರವ ಹೆಚ್ಚಿಸಿದೆ ಎಂದರು.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



