ಶ್ರೀನಿವಾಸಪುರ: ತಾಲೂಕು ವಕ್ಕಲಿಗ ಸಮಾಜದ ಅಭಿವೃದ್ದಿಗೆ ಸಮಾಜದ ಹಿರಿಯರ ಮಾರ್ಗದರ್ಶನ ಪಡೆದು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತೇನೆ ಎಂದು ತಾಲೂಕು ಒಕ್ಕಲಿಗರ ಸಂಘದ ನೂತನ ಅಧ್ಯಕ್ಷ ಕೆ.ಎನ್.ವೇಣುಗೋಪಾಲ್@ಸ್ಟೂಡಿಯೋವೇಣು ಹೇಳಿದರು.
ಅವರು ನೂತನ ಅಧ್ಯಕ್ಷರಾದ ನಂತರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಸಮಿತಿಯ ಸಭೆಯಲ್ಲಿ ಪಾಲ್ಗೋಂಡು ಮಾತನಾಡಿದರು.
ತಾಲ್ಲೂಕಿನಲ್ಲಿ ವಕ್ಕಲಿಗ ಸಮಾಜದ ಅಭಿವೃದ್ಧಿ ದೃಷ್ಠಿಯಿಂದ ಸಮುದಾಯಭವನ, ಕಲ್ಯಾಣಮಂಟಪ, ವಿದ್ಯಾರ್ಥಿಗಳಿಗಾಗಿ ಬಾಲಕರ ಹಾಗು ಬಾಲಕಿಯರಿಗಾಗಿ ಪ್ರತ್ಯಕ ಹಾಸ್ಟಲ್ಗಳನ್ನು ನಿರ್ಮಾಣ ಮಾಡುವ ಬಗ್ಗೆ ಯೋಜನೆಯಿದೆ ಮತ್ತು ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದಿರುವಂತವರ ಅಭಿವೃದ್ಧಿಗಾಗಿ ವಿಶೇಷ ಯೋಜನೆ ರೂಪಿಸಲಾಗುವುದು ಎಂದರು.
ನಿಕಟಪೂರ್ವ ಒಕ್ಕಲಿಗರ ಸಂಘದ ಅಧ್ಯಕ್ಷ ನಿಲಟೂರು ಚಿನ್ನಪ್ಪರೆಡ್ಡಿ ಮಾತನಾಡಿ ತಾಲ್ಲೂಕಿನ ಹೆಚ್ಚಿನ ಸಂಖ್ಯೆಯಲ್ಲಿ ವಕ್ಕಲಿಗ ಸಮಾಜದವರು ಇದ್ದೀವಿ ಸಮುಧಾಯ ಭವನ ಹಾಗು ವಿದ್ಯಾರ್ಥಿಗಳಿಗೆ ಹಾಸ್ಟಲ್ ನಿರ್ಮಾಣ ಮಾಡಲು ನಮಗೆ ಇದುವರಿಗೂ ನೀವೇಶನ ಪಡೆಯಲು ಸಾಧ್ಯವಾಗಿಲ್ಲ ನಾನು ಅಧ್ಯಕ್ಷನಾಗಿದ್ದ ಸಂದರ್ಭದಲ್ಲಿ ಕೆಂಪೇಗೌಡ ಜಂಯತಿ ಆಚರಣೆ ಸಂದರ್ಭದಲ್ಲಿ ಶಾಸಕರು ಸಮುದಾಯ ಭವನಕ್ಕೆ ನಿವೇಶನ ನೀಡುವುದಾಗಿ ಭರವಸೆ ನೀಡಿದ್ದರು ಆದರೆ ಇದುವರಿಗೂ ಈಡೇರಿಲ್ಲ ಹಾಗಾಗಿ ಅದನ್ನು ಪಡೆಯಲು ಸರ್ಕಾರದ ಮೇಲೆ ಒತ್ತಡ ಹಾಕಬೇಕಿದೆ ಈ ಬಗ್ಗೆ ನೂತನ ಪದಾಧಿಕಾರಿಗಳು ಪ್ರಯತ್ನಿಸುಂತೆ ಹೇಳಿದ ಅವರು ಸಮಾಜದ ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ಹೇಳಿದರು.
ನೂತನ ಪದಾಧಿಕಾರಿಗಳಾಗಿ ನಿವೃತ್ತ ಮುಖ್ಯೋಪಾದ್ಯಾಯ ಎಂ.ವೆಂಕಟರೆಡ್ಢಿ ಕಾರ್ಯದರ್ಶಿ, ಥಿಯೆಟರ್ ಲಕ್ಷö್ಮಣರೆಡ್ಡಿ ಉಪಾಧ್ಯಕ್ಷ, ಖಜಾಂಚಿಯಾಗಿ ಕೋಡಿಪಲ್ಲಿ ಶ್ರೀನಿವಾಸರೆಡ್ಡಿ ಆಯ್ಕೆಯಾದರು. ಸಮುದಾಯದ ಹಿರಿಯ ಮುಖಂಡರಾದ ನಿವೃತ್ತ ಉಪಾದ್ಯಾಯ ಬೈರೆಡ್ಡಿ, ನಾಗರಾಜ್,ಚೊಕ್ಕರೆಡ್ಡಿ, ಮುಖಂಡರಾದ ವಕೀಲ ವೆಂಕಟೇಶ್,ಆನಂದರೆಡ್ಡಿ, ಕಂಬಾಲಪಲ್ಲಿ ಶ್ರೀನಿವಾಸ್, ಎಸ್.ನಾಗರಾಜ,ಬೈರೆಡ್ಡಿ, ಪ್ರಕಾಶ್ಬಾಬು, ಸೋದರ ನಾರಾಯಣಸ್ವಾಮಿ, ಮುನಿರೆಡ್ಡಿ, ಆವಲಕುಪ್ಪ ರಾಮಚಂದ್ರ, ಕಲ್ಲೂರು ರೆಡ್ಡಪ್ಪ ಮುಂತಾದವರು ಇದ್ದರು.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Thursday, April 23



