ಶ್ರೀನಿವಾಸಪುರ: ಅಕ್ರಮವಾಗಿ ಗಾಂಜಾ ಮಾರಾಟ ಮಾಡ್ತಿದ್ದ ವ್ಯಕ್ತಿಯೊಬ್ನನ್ನು ಶ್ರೀನಿವಾಸಪುರ ಅಬಕಾರಿ ಅಧಿಕಾರಿಗಳು ಬಂಧಸಿರುತ್ತಾರೆ.ಆಂಧ್ರದ ಅನ್ನಮಯ್ಯ ಜಿಲ್ಲೆಯ ಚಂಬಕೂರಿಗೆ ಹೊಂದಿಕೊಂಡಿರುವ ಗಡಿಯಂಚಿನ ಗ್ರಾಮವಾದ ತಾಲೂಕಿನ ಪುಲಗುರುಕೊಟೆ ಗ್ರಾಮದ ವೆಂಕಟರಮಣಪ್ಪ ಎಂಬುವನನ್ನು ಬಂದಿಸಿದ ಅಬಕಾರಿ ಅಧಿಕಾರಿಗಳು ಸುಮಾರು 50 ಸಾವಿರ ಮೌಲ್ಯದ 1 ಕೆಜಿಗಿಂತಲೂ ಹೆಚ್ಚಿನ ತೂಕದ ಗಾಂಜಾ ವಶಕ್ಕೆ ಪಡೆದುಕೊಂಡಿರುತ್ತಾರೆ.
ವೆಂಕಟರಮಣಪ್ಪ ಆಂಧ್ರದಿಂದ ಗಾಂಜಾ ತಂದು ಇಲ್ಲಿ ಮಾರಾಟ ಮಾಡುತಿದ್ದ ಎಂದು ಹೇಳಲಾಗಿದ್ದು ಅಬಕಾರಿ ಅಧಿಕಾರಿ ರೋಹಿತ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿರುತ್ತಾರೆ.
ಅರೋಪಿಯನ್ನ ಅಧಿಕಾರಿಗಳು ನ್ಯಾಯಾಲಯಕ್ಕೆ ಒಪ್ಪಿಸಿರುತ್ತಾರೆ.
ಶ್ರೀನಿವಾಸಪುರ ಪಟ್ಟಣದ ವ್ಯಾಪ್ತಿಯಲ್ಲೂ ಅಕ್ರಮ ಗಾಂಜ ವ್ಯವಹಾರ ನಡೆಯುತ್ತಿರುವ ಬಗ್ಗೆ ಇತ್ತಿಚಿಗೆ ಅಬಕಾರಿ ಅಧಿಕಾರಿಗಳು ಕೆಲವರನ್ನು ಕರೆದೊಯಿದು ವಿಚಾರಣೆಗೆ ಒಳಪಡಿಸಿದ ಬಗ್ಗೆ ಹೇಳುತ್ತಾರೆ.
ಕಳೆದ ಕೆಲವು ದಿನಗಳ ಹೊಂದೆ ಮುಳಬಾಗಿಲು ತಾಲೂಕಿನಲ್ಲೊಂದು ನಡೆದ ಅಕ್ರಮ ಗಾಂಜಾ ವ್ಯವಹಾರದಲ್ಲಿ ಅಲ್ಲಿನ ಅಬಕಾರಿ ಅಧಿಕಾರಿಗಳು ದಂಪತಿಯನ್ನು ಬಂದಿಸಿದ್ದು ಅವರ ನೀಡಿದ ಮಾಹಿತಿಯಂತೆ ತಾಲೂಕಿನ ಪುರ್ನಪಲ್ಲಿ ಗ್ರಾಮದ ವ್ಯಕ್ತಿಯನ್ನು ಕರೆದೊಯಿದು ವಿಚಾರಣೆ ನಡೆಸಿರುತ್ತಾರೆ.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Thursday, April 23



