ಶ್ರೀನಿವಾಸಪುರ:ಪಂಚಾಯಿತಿ ವ್ಯಾಪ್ತಿಯ ನಿವೇಶನಕ್ಕೆ ಸಂಬಂದಪಟ್ಟಂತೆ ಇ-ಖಾತೆ ಮಾಡಿಕೊಡಲು ಗ್ರಾಮಸ್ಥನಿಂದ ಲಂಚ ಪಡೆಯುತ್ತಿದ್ದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ(PDO) ಎಸಿಬಿ ಪೋಲಿಸರ ಬಲೆಗೆ ಬಿದ್ದಿದ್ದಾನೆ.
ತಾಲೂಕಿನ ಲಕ್ಷ್ಮೀಪುರ ಪಂಚಾಯಿತಿಯ ವೆಂಕಟರಾಜು ಎನ್ನುವ ವ್ಯಕ್ತಿ ತನ್ನ ತಂದೆ ಮುನಿವೆಂಕಟಪ್ಪ ಮತ್ತು ಸುಶೀಲಮ್ಮ ತಾಯಿ ಹೆಸರಲ್ಲಿದ್ದ ಗ್ರಾಮದ ವ್ಯಾಪ್ತಿಯ ಕಾಲಿ ನಿವೇಶನಗಳ ಇ-ಖಾತೆ ಮಾಡಿಕೊಡುವ ಸಂಬಂದ ಮಾರ್ಚ ತಿಂಗಳಲ್ಲಿ ಅರ್ಜಿ ಸಲ್ಲಿಸಿದ್ದರು ಆದರೆ ಅರ್ಜಿಗೆ ಇದುವರಿಗೂ ಯಾವುದೇ ಸ್ವೀಕೃತಿ ಸಹ ನೀಡದೆ ಪಿಡಿಒ ಸತಾಯಿಸುತ್ತಿದ್ದು ಈ ಸಂಬಂದ ಅರ್ಜಿದಾರನ ತಂದೆ ಖುದ್ದು ಪಿಡಿಒ ಶಂಕರಪ್ಪ ಅವರನ್ನು ಭೇಟಿ ಮಾಡಿ ವಿಚಾರಿಸಿದಾಗ ಪಿಡಿಒ ಇ-ಖಾತ ಮಾಡಲು 15 ಸಾವಿರ ಡಿಮ್ಯಾಂಡ್ ಮಾಡಿದ್ದು ಇದಕ್ಕೆ ಅರ್ಜಿದಾರ ಮುನಿವೆಂಕಟಪ್ಪ ತಕ್ಷಣ ಸ್ಥಳದಲ್ಲಿಯೇ 2 ಸಾವಿರ ಹಣವನ್ನು ನೀಡಿರುತ್ತಾರೆ ಉಳಿದ ಹಣ 13 ಸಾವಿರ ತಂದು ಹಣ ತಂದುಕೊಡುವುದಾಗಿ ಹೇಳಿದ್ದು, ಈ ಬಗ್ಗೆ ಅರ್ಜಿದಾರ ಮುನಿವೆಂಕಟಪ್ಪನ ಮಗ ವೆಂಕಟ್ರಾಜು ಜುಲೈ 14 ರಂದು ಕೋಲಾರದ ಎಸಿಬಿ ಪೋಲಿಸರಿಗೆ ದೂರು ನೀಡಿರುತ್ತಾರೆ ಅದರಂತೆ ಉಳಿದ ಹಣ 13ಸಾವಿರವನ್ನು ಲಕ್ಷ್ಮೀಪುರಕ್ರಾಸನಲ್ಲಿರುವ ಮಯೂರಿ ಬಾರ್ ನಿಂದ ಲಕ್ಷ್ಮೀಪುರಕ್ಕೆ ಹೋಗುವ ದಾರಿ ಮದ್ಯ ಇಂದು ಮಂಗಳವಾರ ಪಿಡಿಒ ಶಂಕರಪ್ಪ ಅರ್ಜಿದಾರನಿಂದ ಪಡೆಯುತ್ತಿರುವಾಗ ಎಸಿಬಿ ಪೋಲಿಸರಿಗೆ ಸಿಕ್ಕಿ ಬಿದ್ದಿರುತ್ತಾರೆ.ಎಸಿಬಿ ಡಿವೈಎಸ್ಪಿ ಸುಧೀರ್ ನೇತೃತ್ವದಲ್ಲಿ ನಡೆದ ಕಾರ್ಯಚರಣೆಯಲ್ಲಿ ಪಿಡಿಒ ಶಂಕರಪ್ಪನನ್ನು ವಶಕ್ಕೆ ಪಡೆದಿರುತ್ತಾರೆ.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Monday, June 8



