ಶ್ರೀನಿವಾಸಪುರ: ಗ್ರಾಮೀಣ ಶಾಲೆಗಳ ಅಭಿವೃದ್ಧಿಗೆ ಆಯಾ ಶಾಲೆಗಳ ಹಳೇಯ ವಿಧ್ಯಾರ್ಥಿಗಳು ಸಹಕಾರ ನೀಡುವ ಮೂಲಕ ಗ್ರಾಮೀಣ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಶ್ರಮಿಸುವಂತೆ ಶ್ರೀರಂಗಪಟ್ಟಣದ ಪ್ರಥಮ ದರ್ಜೆ ಕಾಲೇಜು ಪ್ರಾದ್ಯಾಪಕ ಡಾ.ಶಿವಪ್ರಸಾದ್ ಹೇಳಿದರು ಅವರು ತಮ್ಮ ಸ್ವಗ್ರಾಮವಾದ ತಾಲೂಕಿನ ನಂಬಿಹಳ್ಳಿ ಗ್ರಾಮದ ಸರ್ಕಾರಿ ಪ್ರೌಡಶಾಲೆಯಲ್ಲಿ ಓದಿದ ಹಳೇಯ ವಿದ್ಯಾರ್ಥಿಗಳಲ್ಲಿ ಸಾಧನೆ ಮಾಡಿರುವಂತವರಿಗೆ ಕರ್ನಾಟಕ ರಕ್ಷಣಾ ವೇದಿಕೆ ಯುವ ಘಟಕದ ವತಿಯಿಂದ ಏರ್ಪಡಿಸಿದ್ದ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಸರ್ಕಾರಿ ಶಾಲೆಗಳನ್ನು ಉಳಸಿಕೊಳ್ಳುವಂತ ಆಂದೋಲನ ಎಲ್ಲಡೆ ಇದೆ,ಗ್ರಾಮೀಣ ಭಾಗದಲ್ಲಿ ಇದು ಪರಿಣಾಮಕಾರಿಯಾಗಿ ಜಾರಿಯಗಲು ಎಲ್ಲರ ಸಹಕಾರ ಬೇಕಿರುತ್ತದೆ ಎಂದರು.
ಸನ್ಮಾನ ಸ್ವೀಕರಿಸಿದ ಚಿಂತಾಮಣಿಯ ಉಪನ್ಯಾಸಕ ಡಾ.ಮುನಿರೆಡ್ದಿ ಮಾತನಾಡಿ ಸಾಧನೆ ಸುಲಭದ ಮಾತಲ್ಲ, ಸಾಧನೆಯ ಹಾದಿಯಲ್ಲಿ ಬರುವ ಎಲ್ಲಾ ಕಷ್ಟಗಳನ್ನು ಸಹಿಸಿಕೊಂಡು ಗುರಿ ತಲುಪುವವನೆ ನಿಜವಾದ ಸಾಧಕನಾಗುತ್ತಾನೆ ಇದು ಇತರರಿಗೆ ಪ್ರೇರಣೆ ಆಗಬೇಕು. ನಮ್ಮ ಸಾಧನೆ ಕಂಡು ಇತರರೂ ಸಂತಸ ಪಡಬೇಕು.ನಾವೂ ಸಹ ಹೀಗೆ ಸಾಧಿಸಬೇಕು ಎಂಬ ಛಲ ಅವರಲ್ಲಿ ಹುಟ್ಟಬೇಕು ಎಂದರು.
ಕೋಲಾರದ ಎಸ್.ಎನ್.ಆರ್ ಆಸ್ಪತ್ರೆ ಶಸ್ತ್ರ ಚಿಕಿತ್ಸಕ ಡಾ.ಎಸ್.ವಿ.ಮಂಜುನಾಥ್ ಮಾತನಾಡಿ ಪಂಚಲಿಂಗ ಕ್ಷೇತ್ರ ಎಂದು ಖ್ಯಾತ ಪಡೆದಿರುವ ನಂಬಿಹಳ್ಳಿ ಪ್ರೌಡಶಾಲೆ ಉತ್ತಮ ವಿದ್ಯಾರ್ಥಿಗಳನ್ನು ಸಮಾಜಕ್ಕೆ ನೀಡಿದೆ ಈ ಪರಂಪರೆಯನ್ನು ಇಲ್ಲಿನ ಉಪಾದ್ಯಾಯರು ಮುಂದುವರಿಸಿಕೊಂಡು ಹೋಗಬೇಕಿದೆ ಎಂದು ವಿನಂತಿಸಿದ ಅವರು ವಿದ್ಯಾರ್ಥಿಗಳು ಸಹ ಸೋಲೇ ಗೆಲುವಿಗೆ ಮೆಟ್ಟಿಲು ಎಂಬ ಭಾವನೆಯಿಂದ ಪ್ರಯತ್ನ ಬಿಡದೆ ಆಶಾವಾದಿಗಳಾಗಿ ನಿರ್ದೀಷ್ಟ ಗುರಿಯಿಟ್ಟುಕೊಂಡು ಸಾಧಿಸುವ ಮೂಲಕ ಶಾಲೆಯ ಹೆಸರು ಘನತೆಯನ್ನು ಉಳಿಸಿಕೊಳ್ಳುವಂತೆ ಹೇಳಿದರು.
ಈ ಸಂದರ್ಭದಲ್ಲಿ ಪ್ರೌಡಶಾಲೆ ಮುಖ್ಯೋಪಾದ್ಯಾಯ ನಾರಯಣಸ್ವಾಮಿ ಸೇರಿದಂತೆ ನಾಲ್ಕು ಜನರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಯುವ ಘಟಕದ ಸುಬ್ರಮಣಿ,ಮುಖ್ಯೊಪಾದ್ಯಾಯರಾದ ಐಮಾರೆಡ್ಡಿ,ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ನರಸಿಂಹಪ್ಪ,ರಾಮಚಂದ್ರಪ್ಪ ಮುಂತಾದವರು ಇದ್ದರು.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Sunday, June 7



