ಶ್ರೀನಿವಾಸಪುರ: ಗ್ರಾಮೀಣ ಶಾಲೆಗಳ ಅಭಿವೃದ್ಧಿಗೆ ಆಯಾ ಶಾಲೆಗಳ ಹಳೇಯ ವಿಧ್ಯಾರ್ಥಿಗಳು ಸಹಕಾರ ನೀಡುವ ಮೂಲಕ ಗ್ರಾಮೀಣ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಶ್ರಮಿಸುವಂತೆ ಶ್ರೀರಂಗಪಟ್ಟಣದ ಪ್ರಥಮ ದರ್ಜೆ ಕಾಲೇಜು ಪ್ರಾದ್ಯಾಪಕ ಡಾ.ಶಿವಪ್ರಸಾದ್ ಹೇಳಿದರು ಅವರು ತಮ್ಮ ಸ್ವಗ್ರಾಮವಾದ ತಾಲೂಕಿನ ನಂಬಿಹಳ್ಳಿ ಗ್ರಾಮದ ಸರ್ಕಾರಿ ಪ್ರೌಡಶಾಲೆಯಲ್ಲಿ ಓದಿದ ಹಳೇಯ ವಿದ್ಯಾರ್ಥಿಗಳಲ್ಲಿ ಸಾಧನೆ ಮಾಡಿರುವಂತವರಿಗೆ ಕರ್ನಾಟಕ ರಕ್ಷಣಾ ವೇದಿಕೆ ಯುವ ಘಟಕದ ವತಿಯಿಂದ ಏರ್ಪಡಿಸಿದ್ದ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಸರ್ಕಾರಿ ಶಾಲೆಗಳನ್ನು ಉಳಸಿಕೊಳ್ಳುವಂತ ಆಂದೋಲನ ಎಲ್ಲಡೆ ಇದೆ,ಗ್ರಾಮೀಣ ಭಾಗದಲ್ಲಿ ಇದು ಪರಿಣಾಮಕಾರಿಯಾಗಿ ಜಾರಿಯಗಲು ಎಲ್ಲರ ಸಹಕಾರ ಬೇಕಿರುತ್ತದೆ ಎಂದರು.
ಸನ್ಮಾನ ಸ್ವೀಕರಿಸಿದ ಚಿಂತಾಮಣಿಯ ಉಪನ್ಯಾಸಕ ಡಾ.ಮುನಿರೆಡ್ದಿ ಮಾತನಾಡಿ ಸಾಧನೆ ಸುಲಭದ ಮಾತಲ್ಲ, ಸಾಧನೆಯ ಹಾದಿಯಲ್ಲಿ ಬರುವ ಎಲ್ಲಾ ಕಷ್ಟಗಳನ್ನು ಸಹಿಸಿಕೊಂಡು ಗುರಿ ತಲುಪುವವನೆ ನಿಜವಾದ ಸಾಧಕನಾಗುತ್ತಾನೆ ಇದು ಇತರರಿಗೆ ಪ್ರೇರಣೆ ಆಗಬೇಕು. ನಮ್ಮ ಸಾಧನೆ ಕಂಡು ಇತರರೂ ಸಂತಸ ಪಡಬೇಕು.ನಾವೂ ಸಹ ಹೀಗೆ ಸಾಧಿಸಬೇಕು ಎಂಬ ಛಲ ಅವರಲ್ಲಿ ಹುಟ್ಟಬೇಕು ಎಂದರು.
ಕೋಲಾರದ ಎಸ್.ಎನ್.ಆರ್ ಆಸ್ಪತ್ರೆ ಶಸ್ತ್ರ ಚಿಕಿತ್ಸಕ ಡಾ.ಎಸ್.ವಿ.ಮಂಜುನಾಥ್ ಮಾತನಾಡಿ ಪಂಚಲಿಂಗ ಕ್ಷೇತ್ರ ಎಂದು ಖ್ಯಾತ ಪಡೆದಿರುವ ನಂಬಿಹಳ್ಳಿ ಪ್ರೌಡಶಾಲೆ ಉತ್ತಮ ವಿದ್ಯಾರ್ಥಿಗಳನ್ನು ಸಮಾಜಕ್ಕೆ ನೀಡಿದೆ ಈ ಪರಂಪರೆಯನ್ನು ಇಲ್ಲಿನ ಉಪಾದ್ಯಾಯರು ಮುಂದುವರಿಸಿಕೊಂಡು ಹೋಗಬೇಕಿದೆ ಎಂದು ವಿನಂತಿಸಿದ ಅವರು ವಿದ್ಯಾರ್ಥಿಗಳು ಸಹ ಸೋಲೇ ಗೆಲುವಿಗೆ ಮೆಟ್ಟಿಲು ಎಂಬ ಭಾವನೆಯಿಂದ ಪ್ರಯತ್ನ ಬಿಡದೆ ಆಶಾವಾದಿಗಳಾಗಿ ನಿರ್ದೀಷ್ಟ ಗುರಿಯಿಟ್ಟುಕೊಂಡು ಸಾಧಿಸುವ ಮೂಲಕ ಶಾಲೆಯ ಹೆಸರು ಘನತೆಯನ್ನು ಉಳಿಸಿಕೊಳ್ಳುವಂತೆ ಹೇಳಿದರು.
ಈ ಸಂದರ್ಭದಲ್ಲಿ ಪ್ರೌಡಶಾಲೆ ಮುಖ್ಯೋಪಾದ್ಯಾಯ ನಾರಯಣಸ್ವಾಮಿ ಸೇರಿದಂತೆ ನಾಲ್ಕು ಜನರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಯುವ ಘಟಕದ ಸುಬ್ರಮಣಿ,ಮುಖ್ಯೊಪಾದ್ಯಾಯರಾದ ಐಮಾರೆಡ್ಡಿ,ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ನರಸಿಂಹಪ್ಪ,ರಾಮಚಂದ್ರಪ್ಪ ಮುಂತಾದವರು ಇದ್ದರು.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Thursday, April 23



